AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB Raid: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Central Prison, Bangalore: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳಿರುವಾಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೈಲಿನಲ್ಲಿ ಇದ್ದುಕೊಂಡೇ ಮತದಾರರ ಮೇಲೆ ಪ್ರಭಾವ ಬೀರಲು ಕೈದಿಗಳ ಸಂಚು ಹೂಡಿರುವ ಖಚಿತ ಸುಳಿವಿನ ಮೇರೆಗೆ ದಾಳಿ ನಡೆದಿದ್ದು, ಕೈದಿಗಳಿಂದ ಚಾಕು ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ.

CCB Raid: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ
ಪರಪ್ಪನ ಅಗ್ರಹಾರ ಜೈಲು
Jagadisha B
| Updated By: Ganapathi Sharma|

Updated on:Apr 17, 2024 | 10:33 AM

Share

ಬೆಂಗಳೂರು, ಏಪ್ರಿಲ್ 17: ಲೋಕಸಭೆ ಚುನಾವಣೆಗೆ (Lok Sabha Elections) ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲೇ ಬೆಂಗಳೂರಿನ (Bengaluru) ಪರಪ್ಪನ ಅಗ್ರಹಾರ ಜೈಲಿನ (Parappana Agrahara Jail) ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ (CCB Raid) ನಡೆಸಿದ್ದಾರೆ. ಮಂಗಳವಾರ 50ಕ್ಕೂ ಹೆಚ್ಚು ಸಿಸಿಬಿ ಅಧಿಕಾರಿಗಳು ಜೈಲಿನ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಜೈಲಿನಿಂದಲೇ ಸಂಚು ಹೂಡಲಾಗಿದೆ ಎಂಬ ಸುಳಿವಿನ ಮೇರೆಗೆ ಸಿಸಿಬಿ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

ಜೈಲಿನಿಂದಲೇ ಕೊಲೆಗೆ ಸುಪಾರಿ ನೀಡಿರುವುದು, ಉಗ್ರ ಚಟುವಟಿಕೆಗಳ ನಂಟು ಹೊಂದಿರುವುದು ಮತ್ತು ಜೈಲಿನಿಂದಲೇ ಮತದಾರರ ಮೇಲೆ ಪ್ರಭಾವ ಬೀರಲು ಸಂಚು ಬಗ್ಗೆ ಮಾಹಿತಿ ದೊರೆತಿದೆ. ಹೀಗಾಗಿ ದಾಳಿ ನಡೆಸಲಾಗಿದೆ. ಈ ವೇಳೆ ಜೈಲಿನ ಬ್ಯಾರಕ್​​ನಲ್ಲಿದ್ದ ಕೆಲ ಖೈದಿಗಳ ಬಳಿಯಿಂದ ನಗದು ವಶಕ್ಕೆ ಪಡೆಯಲಾಗಿದೆ. ಜೈಲಿನೊಳಗೆ ಚಾಕು ಸಹ ಪತ್ತೆಯಾಗಿದೆ. ಕೈದಿಗಳ ಬಳಿ ಇದ್ದ 40 ಸಾವಿರ ರೂ. ನಗದು, 3 ಚಾಕು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರಾಗೃಹದ ಒಳಗಿನಿಂದ ಚುನಾವಣೆ ಮೇಲೆ ಪ್ರಭಾವ ಬೀರಲು ಪಿತೂರಿ, ಅಕ್ರಮ ಚಟುವಟಿಕೆಗಳು, ಡ್ರಗ್ಸ್ ಬಳಕೆ, ಪೂರೈಕೆ ಮತ್ತು ಮೊಬೈಲ್ ಬಳಕೆಯನ್ನು ಪರಿಶೀಲಿಸಲು ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಗದು, ತಂಬಾಕು ಉತ್ಪನ್ನಗಳು ಮತ್ತು ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದೂ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ನಮ್ಮ ಯಾತ್ರಿ ಆ್ಯಪ್​ ಮೂಲಕ ಇನ್ನು ಕ್ಯಾಬ್ ಸಹ ಬುಕ್ ಮಾಡಬಹುದು

ಇನ್ನು ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೂ ಪರಪ್ಪನ ಅಗ್ರಹಾರ ಜೈಲಿಗೂ ನಂಟಿರುವ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆಯೂ ಸಿಸಿಬಿ ದಾಳಿ ವೇಳೆ ಅಧಿಕಾರಿಗಳು ಪರಿಶೀಲನೆ ನಡೆಸಿರುವ ಸಾಧ್ಯತೆ ಇದೆ ಎಂದು ಕೆಲವು ಮೂಗಳು ತಿಳಿಸಿವೆ. ಶಿವಮೊಗ್ಗದಲ್ಲಿ ಐಎಸ್​ಐಎಸ್ ಉಗ್ರ ಚಟುವಟಿಕೆಗೆ ಸಂಬಂಧಿಸಿ ಶಂಕಿತ ಉಗ್ರನೊಬ್ಬನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಎನ್​ಐಎ ಇತ್ತೀಚೆಗೆ ಬಂಧಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:23 am, Wed, 17 April 24

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ