AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ವೈದ್ಯಕೀಯ ವಿದ್ಯಾರ್ಥಿನಿಯರಲ್ಲಿ ಕಾಲರಾ ಪತ್ತೆ: ಸ್ವಯಂ ಪ್ರೇರಿತ ಪ್ರಕರಣ ದಾಖಲು

ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿರುವ 49 ವೈದ್ಯಕೀಯ ವಿದ್ಯಾರ್ಥಿನಿಯರ ಪೈಕಿ ಇಬ್ಬರಲ್ಲಿ ಕಾಲರಾ ರೋಗ ಪತ್ತೆಯಾಗಿದೆ. ವಿಕ್ಟೋರಿಯಾ ಆಸ್ಪತ್ರೆಗೆ ಇಂದು (ಏ.06) ಮಹಿಳಾ ಆಯೋಗದ ಅಧ್ಯಕ್ಷೇ ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ, ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು.

ಇಬ್ಬರು ವೈದ್ಯಕೀಯ ವಿದ್ಯಾರ್ಥಿನಿಯರಲ್ಲಿ ಕಾಲರಾ ಪತ್ತೆ: ಸ್ವಯಂ ಪ್ರೇರಿತ ಪ್ರಕರಣ ದಾಖಲು
ಕಾಲರಾ
TV9 Web
| Updated By: ವಿವೇಕ ಬಿರಾದಾರ|

Updated on:Apr 06, 2024 | 2:48 PM

Share

ಬೆಂಗಳೂರು, ಏಪ್ರಿಲ್​ 06: ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ದಾಖಲಾಗಿರುವ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ (Bangalore Medical College and Research Institute-BMCRI) 49 ವೈದ್ಯಕೀಯ ​ವಿದ್ಯಾರ್ಥಿನಿಯರ (Medical Students) ಪೈಕಿ ಇಬ್ಬರಲ್ಲಿ ಕಾಲರಾ ಅಂಶ ಪತ್ತೆಯಾಗಿದೆ. ಇನ್ನು ವಿಕ್ಟೋರಿಯಾ ಆಸ್ಪತ್ರೆಗೆ ಇಂದು (ಏ.06) ಮಹಿಳಾ ಆಯೋಗದ ಅಧ್ಯಕ್ಷೇ ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ, ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನಾಗಲಕ್ಷ್ಮೀ ಚೌಧರಿ, ಐಸಿಯು ಹಾಗೂ ಜನರಲ್ ವಾರ್ಡ್​ನಲ್ಲಿರುವ ವಿದ್ಯಾರ್ಥಿನಿಯರನ್ನು ಭೇಟಿಯಾದೆ. ಅನೇಕರಿಗೆ ಪ್ರಜ್ಞೆನೇ ಇರಲಿಲ್ಲ. ವಿದ್ಯಾರ್ಥಿನಿಯರ ವಸತಿ ನಿಲಯದ ವಾಟರ್ ಟ್ಯಾಂಕ್ ರಿಪೇರಿಯಲ್ಲಿದೆ. ಇದರಲ್ಲಿಯ ನೀರನ್ನು ವಿದ್ಯಾರ್ಥಿನಿಯರಿಗೆ ನೀಡಲಾಗುತ್ತಿದೆ. ಮೆಸ್​​ ಅನ್ನು ಬಂದ್​ ಮಾಡಿಸಲಾಗಿದೆ. ವಿದ್ಯಾರ್ಥಿನಿಯರ ಬೆಡ್​ನಲ್ಲಿ ತಿಗಣೆ ಇವೆ. ಇದರ ಬಗ್ಗೆ ವಿದ್ಯಾರ್ಥಿನಿಯರು ಹೇಳಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಎಚ್ಚರ, ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಕಾಲರಾ: ಸೋಂಕು ತಡೆಯಲು ಏನು ಮಾಡಬೇಕು? ಇಲ್ಲಿದೆ ಸಲಹೆ

ಅವರ ಆರೋಪಗಳ ಬಗ್ಗೆ ನಾನು ಡಾಕ್ಯುಮೆಂಟ್ ಕೇಳಿದ್ದೇನೆ. ಒಂದು ವಾರದಲ್ಲಿ ವರದಿಯನ್ನು ಕೊಡಬೇಕು. ಹಾಗೂ ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸಲು ಹೇಳಿದ್ದೇನೆ. ಕೋಣೆಗಳು ಚಿಕ್ಕದಾಗಿವೆ. ಸರಿಯಾದ ವ್ಯವಸ್ಥೆ ಇಲ್ಲ. ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ವಿಕ್ಟೋರಿಯಾ ಆಸ್ಪತ್ರೆಯಿಂದ ಊಟ ಹೋಗುತ್ತದೆ. ಈ ಬಗ್ಗೆ ನಾನು ವೈದ್ಯಕೀಯ ಶಿಕ್ಷಣ ಸಚಿವರ ಗಮನಕ್ಕೆ ತರುತ್ತೇನೆ. ಪ್ರತಿಯೊಂದು ಆಸ್ಪತ್ರೆ ಹಾಗೂ ವಸತಿ ನಿಲಯಕ್ಕೆ ಭೇಟಿ ನೀಡುತ್ತೇನೆ. ಅಲ್ಲಿನ ಸಮಸ್ಯೆ ಬಗ್ಗೆ ತಿಳಿಯುತ್ತೇನೆ. ಈಗ ಸುಮೋಟೋ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:04 pm, Sat, 6 April 24

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು