AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಫ್​ಐಆರ್ ದಾಖಲು

ಲೋಕಸಭಾ ಚುನಾವಣೆ ಕಣ ರಂಗೇರಿದ್ದು, ಈ ಮಧ್ಯೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ವಿರುದ್ದ ಎಫ್​ಐಆರ್​ ದಾಖಲಾಗಿದೆ. ಆರ್​ಆರ್​ ನಗರ ಅಪಾರ್ಟ್ಮೆಂಟ್ ವೊಂದರಲ್ಲಿ ಮತಯಾಚನೆ ವೇಳೆ ಡಿಕೆಶಿ ಬೆದರಿಕೆ ಹಾಕಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮಾಹಿತಿ ನೀಡಿತ್ತು. ಇದರ ಬೆನ್ನಲ್ಲೇ ಮಾಹಿತಿ ಪಡೆದು ಪೊಲೀಸರು ಎಫ್ಐಆರ್ ದಾಖಲು  ಮಾಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಫ್​ಐಆರ್ ದಾಖಲು
ಡಿಕೆ ಶಿವಕುಮಾರ್​ ವಿರುದ್ದ ಎಫ್​ಐಆರ್​ ದಾಖಲು
Shivaprasad B
| Edited By: |

Updated on:Apr 20, 2024 | 5:04 PM

Share

ಬೆಂಗಳೂರು, ಏ.20: ಮತಯಾಚನೆ ವೇಳೆ ಬೆದರಿಕೆ ಆರೋಪದ ಹಿನ್ನಲೆ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ವಿರುದ್ಧ ಬೆಂಗಳೂರಿನ ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್​ಐಆರ್(FIR) ದಾಖಲಾಗಿದೆ. ಆರ್​ಆರ್​ ನಗರ ಅಪಾರ್ಟ್ಮೆಂಟ್ ವೊಂದರಲ್ಲಿ ಮತಯಾಚನೆ ವೇಳೆ ಡಿಕೆಶಿ ಬೆದರಿಕೆ ಹಾಕಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮಾಹಿತಿ ನೀಡಿತ್ತು. ಇದರ ಬೆನ್ನಲ್ಲೇ ಮಾಹಿತಿ ಪಡೆದು ಪೊಲೀಸರು ಎಫ್ಐಆರ್ ದಾಖಲು  ಮಾಡಿದ್ದಾರೆ.

ಲಂಚ, ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಬಳಸಿರೋ ಆರೋಪ

ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್​ ಅಭ್ಯರ್ಥಿ ಡಿಕೆ ಸುರೇಶ್ ಪರ ಡಿಕೆ ಶಿವಕುಮಾರ್ ಮತಯಾಚನೆ ಮಾಡಿದ್ದರು. ಈ ವೇಳೆ ಬೆದರಿಕೆ ಹಾಕಿದ್ದ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆ ಲಂಚ ಮತ್ತು ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಬಳಸಿರೋ ಆರೋಪದಡಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಮತದಾರರಿಗೆ ಬೆದರಿಕೆ ಆರೋಪ: ಡಿಕೆ ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಚುನಾವಣಾ ಆಯೋಗಕ್ಕೆ ದೂರು ನೀಡಿದ್ದ ಬಿಜೆಪಿ

ಡಿಕೆ ಶಿವಕುಮಾರ್ ಮತದಾರರನ್ನು ಬ್ಲ್ಯಾಕ್​ಮೇಲ್ ಮಾಡಿದ್ದಾರೆ ಎಂದು ಬಿಜೆಪಿ ಕೆಲವು ದಿನಗಳ ಹಿಂದೆ ಟ್ವೀಟ್ ಮಾಡಿತ್ತು. ಅದರಲ್ಲಿ ಡಿಕೆಶಿ ಮಾತನಾಡುತ್ತಿರುವ ವಿಡಿಯೋವನ್ನೂ ಕೂಡ ಹಂಚಿಕೊಂಡಿತ್ತು. ‘ನಾನು ಇಲ್ಲಿಗೆ ವ್ಯವಹಾರಕ್ಕಾಗಿ ಬಂದಿದ್ದೇನೆ. ಈ ಅಪಾರ್ಟ್ಮೆಂಟ್​​ನಲ್ಲಿ 2510 ಮನೆಗಳಿವೆ. 6424 ಮತಗಳಿವೆ. ನಿಮ್ಮ ಎರಡು ಸಮಸ್ಯೆಗಳೆಂದರೆ ಹಕ್ಕುಪತ್ರ ನಿಮಗೆ ಹಸ್ತಾಂತರವಾಗದಿರುವುದು. ಎರಡನೇಯದ್ದು ಕಾವೇರಿ ನೀರು ಸಂಪರ್ಕ ದೊರೆಯದೇ ಇರುವುದು. ಒಂದು ವೇಳೆ ಈ ಎರಡನ್ನೂ ನಾನು ನಿಮಗೆ ನೀಡಿದರೆ ನೀವು ನನಗೆ ಏನು ಕೊಡುತ್ತೀರಿ?, ನಿಮ್ಮ ಬೂತ್​ ಆರ್​ಆರ್​ ನಗರದಲ್ಲಿದೆ. 2 ರಿಂದ 3 ಬೂತ್​ನಲ್ಲಿ ನಮ್ಮ ಪರವಾದ ಮತಗಳಿವೆ. ಪ್ರಶ್ನಾರ್ಥಕವಾಗಿ ಉಳಿದಿರುವುದು ನಿಮ್ಮ ಬೂತ್​ ಮಾತ್ರ. ಈಗ ಹೇಳಿ ಏನು ಮಾಡುತ್ತೀರಿ’ ಎಂದು ಡಿಕೆಶಿ ಕೇಳುತ್ತಿರುವುದು ಬಿಜೆಪಿ ಟ್ವೀಟ್ ಮಾಡಿದ ವಿಡಿಯೋದಲ್ಲಿತ್ತು. ಈ ಹಿನ್ನಲೆ ದೂರು ನೀಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:53 pm, Sat, 20 April 24

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ