ಪೊಲೀಸ್​ ಇನ್ಸ್​ಪೆಕ್ಟರ್​ ಎಂದು ನಂಬಿಸಿ ವಂಚನೆ ಆರೋಪ; ಬೆಸ್ಕಾಂ ಅಧಿಕಾರಿ​​ ಬಂಧನ

ಇತ್ತೀಚೆಗೆ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬುದ್ದಿವಂತರೇ ಇದರಲ್ಲಿ ಎಡವುತ್ತಿರುವುದು ದುರಂತ. ಆದರೆ, ಇಲ್ಲೊಬ್ಬ ಬೆಸ್ಕಾಂ ಸಹಾಯಕ ಇಂಜಿನಿಯರ್, ತಾನೊಬ್ಬ ಪೊಲೀಸ್​ ಅಧಿಕಾರಿ ಎಂದು ರೈತರು ಸೇರಿದಂತೆ ಹಲವರಿಗೆ ಲಕ್ಷಾಂತರ ರೂಪಾಯಿಯನ್ನು ವಂಚನೆ ಮಾಡಿದ ಆರೋಪ ಬೆಂಗಳೂರಿನಲ್ಲಿ ಕೇಳಿಬಂದಿದೆ. ಇದೀಗ ಆರೋಪಿಯನ್ನು ಕೂಡ ಬಂಧಿಸಲಾಗಿದೆ.

ಪೊಲೀಸ್​ ಇನ್ಸ್​ಪೆಕ್ಟರ್​ ಎಂದು ನಂಬಿಸಿ ವಂಚನೆ ಆರೋಪ; ಬೆಸ್ಕಾಂ ಅಧಿಕಾರಿ​​ ಬಂಧನ
ಬಂಧಿತ ಆರೋಪಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:May 17, 2024 | 4:11 PM

ಬೆಂಗಳೂರು, ಮೇ.17: ಪೊಲೀಸ್​ ಇನ್ಸ್​ಪೆಕ್ಟರ್​ ಎಂದು ನಂಬಿಸಿ ವಂಚನೆ ಮಾಡಿದ ಆರೋಪದ ಮೇಲೆ ಮಲ್ಲೇಶ್ವರಂ ಬೆಸ್ಕಾಂ ಸಹಾಯಕ ಇಂಜಿನಿಯರ್​ ಗಂಗಾಧರ್ ಎಂಬುವವರನ್ನು ಬೆಂಗಳೂರಿನ(Bengaluru) ಪೀಣ್ಯ ಪೊಲೀಸರು ಬಂಧಿಸಿದ್ದಾರೆ.  ಕೆಐಡಿಬಿಯಿಂದ ರೈತರಿಗೆ ಹಣ ಕೊಡಿಸುವ ನೆಪದಲ್ಲಿ ಕಮಿಷನ್ ಎಂದು ಲಕ್ಷಾಂತರ ರೂಪಾಯಿ ಹಣ ಪೀಕುತ್ತಿದ್ದ. ಜೊತೆಗೆ ತನ್ನ KA 09 MF 0656 ಸಂಖ್ಯೆಯ ರೆನಾಲ್ಟ್ ಕ್ವಿಡ್ ಕಾರಿಗೆ ಪೊಲೀಸ್ ಜಾಗೃತದಳದ ಬೋರ್ಡ್ ಅಳವಡಿಕೆ ಮಾಡಿದ್ದ.

ಹಲವು ವರ್ಷಗಳಿಂದ ವಂಚನೆ ಆರೋಪ

ಪೊಲೀಸ್ ಜಾಗೃತದಳದ ಫಲಕ ಅಳವಡಿಸಿದ್ದ ಹಿನ್ನಲೆ ಹೆದ್ದಾರಿ ಟೋಲ್​ ಫ್ರೀ ಹಾಗೂ ಪ್ರವಾಸಿ ಸ್ಥಳಗಳಲ್ಲಿ ವಿಐಪಿ ಆದ್ಯತೆ ದೊರಕುತ್ತಿತ್ತು. ಇನ್ನು ಆತನನ್ನು ಪ್ರಶ್ನಿಸಿದರೆ ಪೊಲೀಸ್​ ಇನ್ಸ್​ಪೆಕ್ಟರ್​ ಐಡಿ ತೋರಿಸುತ್ತಿದ್ದ​. ಬೆಸ್ಕಾಂ ಇಲಾಖೆ ನೀಡಿದ್ದ ವಾಕಿಟಾಕಿಯನ್ನು ಇಲ್ಲಿ ದುರ್ಬಳಕೆ ಮಾಡಿಕೊಂಡ ಆರೋಪವಿದೆ. ಇತ ಹಲವು ವರ್ಷಗಳಿಂದ ಇದೇ ರೀತಿ ಹಣ ಪಡೆದು ವಂಚಿಸುತ್ತಿದ್ದ ಹಿನ್ನಲೆ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆತನನ್ನು ಬಂಧಿಸಲಾಗಿದೆ.

ಇದನ್ನೂ ಓದಿ:ಸರ್ಕಾರಿ ಕೆಲಸ ಕೊಡಿಸುವುದಾಗಿ ಸಿಐಡಿ ಅಧಿಕಾರಿಗಳಿಂದಲೇ 40 ಲಕ್ಷ ರೂ. ವಂಚನೆ: ಕಾಂಗ್ರೆಸ್​ನ ಪಾಲು ಎಷ್ಟು ಎಂದ ಬಿಜೆಪಿ 

ಬ್ಯಾಂಕ್​ನಿಂದ  ಡ್ರಾ ಮಾಡಿಕೊಂಡು ಹೋಗುವಾಗ ಕಳ್ಳತನ

ವಿಜಯಪುರ: ತಾಳಿಕೋಟೆ ಪಟ್ಟಣದ ಯೂನಿಯನ್ ಬ್ಯಾಂಕ್​ ಬಳಿ ನಿವೃತ್ತ ನೌಕರನ ಗಮನ ಬೇರೆಡೆ ಸೆಳೆದು ಬರೊಬ್ಬರಿ 2.20 ಲಕ್ಷ ರೂ. ಹಣವನ್ನು ಕಳ್ಳರು ದೋಚಿದ್ದಾರೆ. ನಿವೃತ್ತ ನೌಕರ ನಾಗಪ್ಪ ಅಮರಪ್ಪ ಕೆಂಭಾವಿ ಹಣ ಕಳೆದುಕೊಂಡವರು. ಬ್ಯಾಂಕ್​ನಲ್ಲಿ ಹಣ ಡ್ರಾ ಮಾಡಿಕೊಳ್ಳುವಾಗ ನಾಗಪ್ಪರನ್ನು ಹಿಂಬಾಲಿಸಿದ್ದ ಖದೀಮರು, ಬ್ಯಾಂಕ್ ಹೊರಗಡೆ ಬಂದು ನಿಂತಾಗ ಗಮನ ಬೇರೆಡೆ ಸೆಳೆದು ಹಣ ಕಿತ್ತುಕೊಂಡು ಬೈಕ್​ನಲ್ಲಿ ಪರಾರಿಯಾಗಿದ್ದಾರೆ. ಈ ಕುರಿತು ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:39 pm, Fri, 17 May 24

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್