AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ಇನ್ಸ್​ಪೆಕ್ಟರ್​ ಎಂದು ನಂಬಿಸಿ ವಂಚನೆ ಆರೋಪ; ಬೆಸ್ಕಾಂ ಅಧಿಕಾರಿ​​ ಬಂಧನ

ಇತ್ತೀಚೆಗೆ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬುದ್ದಿವಂತರೇ ಇದರಲ್ಲಿ ಎಡವುತ್ತಿರುವುದು ದುರಂತ. ಆದರೆ, ಇಲ್ಲೊಬ್ಬ ಬೆಸ್ಕಾಂ ಸಹಾಯಕ ಇಂಜಿನಿಯರ್, ತಾನೊಬ್ಬ ಪೊಲೀಸ್​ ಅಧಿಕಾರಿ ಎಂದು ರೈತರು ಸೇರಿದಂತೆ ಹಲವರಿಗೆ ಲಕ್ಷಾಂತರ ರೂಪಾಯಿಯನ್ನು ವಂಚನೆ ಮಾಡಿದ ಆರೋಪ ಬೆಂಗಳೂರಿನಲ್ಲಿ ಕೇಳಿಬಂದಿದೆ. ಇದೀಗ ಆರೋಪಿಯನ್ನು ಕೂಡ ಬಂಧಿಸಲಾಗಿದೆ.

ಪೊಲೀಸ್​ ಇನ್ಸ್​ಪೆಕ್ಟರ್​ ಎಂದು ನಂಬಿಸಿ ವಂಚನೆ ಆರೋಪ; ಬೆಸ್ಕಾಂ ಅಧಿಕಾರಿ​​ ಬಂಧನ
ಬಂಧಿತ ಆರೋಪಿ
ಬಿ ಮೂರ್ತಿ, ನೆಲಮಂಗಲ
| Edited By: |

Updated on:May 17, 2024 | 4:11 PM

Share

ಬೆಂಗಳೂರು, ಮೇ.17: ಪೊಲೀಸ್​ ಇನ್ಸ್​ಪೆಕ್ಟರ್​ ಎಂದು ನಂಬಿಸಿ ವಂಚನೆ ಮಾಡಿದ ಆರೋಪದ ಮೇಲೆ ಮಲ್ಲೇಶ್ವರಂ ಬೆಸ್ಕಾಂ ಸಹಾಯಕ ಇಂಜಿನಿಯರ್​ ಗಂಗಾಧರ್ ಎಂಬುವವರನ್ನು ಬೆಂಗಳೂರಿನ(Bengaluru) ಪೀಣ್ಯ ಪೊಲೀಸರು ಬಂಧಿಸಿದ್ದಾರೆ.  ಕೆಐಡಿಬಿಯಿಂದ ರೈತರಿಗೆ ಹಣ ಕೊಡಿಸುವ ನೆಪದಲ್ಲಿ ಕಮಿಷನ್ ಎಂದು ಲಕ್ಷಾಂತರ ರೂಪಾಯಿ ಹಣ ಪೀಕುತ್ತಿದ್ದ. ಜೊತೆಗೆ ತನ್ನ KA 09 MF 0656 ಸಂಖ್ಯೆಯ ರೆನಾಲ್ಟ್ ಕ್ವಿಡ್ ಕಾರಿಗೆ ಪೊಲೀಸ್ ಜಾಗೃತದಳದ ಬೋರ್ಡ್ ಅಳವಡಿಕೆ ಮಾಡಿದ್ದ.

ಹಲವು ವರ್ಷಗಳಿಂದ ವಂಚನೆ ಆರೋಪ

ಪೊಲೀಸ್ ಜಾಗೃತದಳದ ಫಲಕ ಅಳವಡಿಸಿದ್ದ ಹಿನ್ನಲೆ ಹೆದ್ದಾರಿ ಟೋಲ್​ ಫ್ರೀ ಹಾಗೂ ಪ್ರವಾಸಿ ಸ್ಥಳಗಳಲ್ಲಿ ವಿಐಪಿ ಆದ್ಯತೆ ದೊರಕುತ್ತಿತ್ತು. ಇನ್ನು ಆತನನ್ನು ಪ್ರಶ್ನಿಸಿದರೆ ಪೊಲೀಸ್​ ಇನ್ಸ್​ಪೆಕ್ಟರ್​ ಐಡಿ ತೋರಿಸುತ್ತಿದ್ದ​. ಬೆಸ್ಕಾಂ ಇಲಾಖೆ ನೀಡಿದ್ದ ವಾಕಿಟಾಕಿಯನ್ನು ಇಲ್ಲಿ ದುರ್ಬಳಕೆ ಮಾಡಿಕೊಂಡ ಆರೋಪವಿದೆ. ಇತ ಹಲವು ವರ್ಷಗಳಿಂದ ಇದೇ ರೀತಿ ಹಣ ಪಡೆದು ವಂಚಿಸುತ್ತಿದ್ದ ಹಿನ್ನಲೆ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆತನನ್ನು ಬಂಧಿಸಲಾಗಿದೆ.

ಇದನ್ನೂ ಓದಿ:ಸರ್ಕಾರಿ ಕೆಲಸ ಕೊಡಿಸುವುದಾಗಿ ಸಿಐಡಿ ಅಧಿಕಾರಿಗಳಿಂದಲೇ 40 ಲಕ್ಷ ರೂ. ವಂಚನೆ: ಕಾಂಗ್ರೆಸ್​ನ ಪಾಲು ಎಷ್ಟು ಎಂದ ಬಿಜೆಪಿ 

ಬ್ಯಾಂಕ್​ನಿಂದ  ಡ್ರಾ ಮಾಡಿಕೊಂಡು ಹೋಗುವಾಗ ಕಳ್ಳತನ

ವಿಜಯಪುರ: ತಾಳಿಕೋಟೆ ಪಟ್ಟಣದ ಯೂನಿಯನ್ ಬ್ಯಾಂಕ್​ ಬಳಿ ನಿವೃತ್ತ ನೌಕರನ ಗಮನ ಬೇರೆಡೆ ಸೆಳೆದು ಬರೊಬ್ಬರಿ 2.20 ಲಕ್ಷ ರೂ. ಹಣವನ್ನು ಕಳ್ಳರು ದೋಚಿದ್ದಾರೆ. ನಿವೃತ್ತ ನೌಕರ ನಾಗಪ್ಪ ಅಮರಪ್ಪ ಕೆಂಭಾವಿ ಹಣ ಕಳೆದುಕೊಂಡವರು. ಬ್ಯಾಂಕ್​ನಲ್ಲಿ ಹಣ ಡ್ರಾ ಮಾಡಿಕೊಳ್ಳುವಾಗ ನಾಗಪ್ಪರನ್ನು ಹಿಂಬಾಲಿಸಿದ್ದ ಖದೀಮರು, ಬ್ಯಾಂಕ್ ಹೊರಗಡೆ ಬಂದು ನಿಂತಾಗ ಗಮನ ಬೇರೆಡೆ ಸೆಳೆದು ಹಣ ಕಿತ್ತುಕೊಂಡು ಬೈಕ್​ನಲ್ಲಿ ಪರಾರಿಯಾಗಿದ್ದಾರೆ. ಈ ಕುರಿತು ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:39 pm, Fri, 17 May 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?