AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಯಲು ಶೌಚಾಲಯಕ್ಕೆ ಹೋದ ಬಾಲಕನ ದೊಣ್ಣೆಯಿಂದ ಹೊಡೆದು ಕೊಂದರು

ಇತ್ತೀಚೆಗೆ ಮಕ್ಕಳ ಸಾವು ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಲ್ಲೂ ಈಗ ಶಾಲೆಗಳು ರಜೆ ಇರುವುದರಿಂದ ಮಕ್ಕಳು ಕೆರೆ, ಬಾವಿಗಳಿಗೆ ಇಳಿದು ಸಾವನ್ನಪ್ಪಿದ ಘಟನೆ​ಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಅದರಂತೆ ಆನೇಕಲ್ ತಾಲೂಕಿನ ನೆರಿಗಾ(Neriga) ಗ್ರಾಮದಲ್ಲಿ ಬಹಿರ್ದೆಸೆಗೆ ತೆರಳಿದ್ದ ಬಾಲಕನನ್ನು ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿದ ದಾರುಣ ಘಟನೆ ನಡೆದಿದೆ.

ಬಯಲು ಶೌಚಾಲಯಕ್ಕೆ ಹೋದ ಬಾಲಕನ ದೊಣ್ಣೆಯಿಂದ ಹೊಡೆದು ಕೊಂದರು
ಸಾಂದರ್ಭಿಕ ಚಿತ್ರ
ರಾಮು, ಆನೇಕಲ್​
| Edited By: |

Updated on: May 17, 2024 | 6:04 PM

Share

ಬೆಂಗಳೂರು, ಮೇ.17: ಆನೇಕಲ್ ತಾಲೂಕಿನ ನೆರಿಗಾ(Neriga) ಗ್ರಾಮದಲ್ಲಿ ಬಹಿರ್ದೆಸೆಗೆ ತೆರಳಿದ್ದ ಬಾಲಕನನ್ನು ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿದ ದಾರುಣ ಘಟನೆ ನಡೆದಿದೆ. ಪ್ರಾಣೇಶ್(15) ಮೃತ ಬಾಲಕ. ಮೇ.15ರಂದು ನಡೆದಿದ್ದ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೂರು ತಿಂಗಳ ಹಿಂದೆ ಗಾರೆ ಕೆಲಸಕ್ಕೆಂದು ಈ ಕುಟುಂಬ ನೆರಿಗಾ ಗ್ರಾಮಕ್ಕೆ ಬಂದು ನೆಲೆಸಿತ್ತು. ಮೂಲತಃ ಮಂತ್ರಾಲಯದ ಕೂಲಿಕಾರ್ಮಿಕ ದಂಪತಿಯ ಪುತ್ರನಾಗಿದ್ದ ಪ್ರಾಣೇಶ್​, ಶಾಲೆಗೆ ರಜೆ ಹಿನ್ನೆಲೆ ತಂದೆ-ತಾಯಿ ಬಳಿಗೆ ಬಂದಿದ್ದ.

ತಲೆ ಹಾಗೂ ಹೊಟ್ಟೆ ಭಾಗಕ್ಕೆ ಹೊಡೆದು ಕೊಲೆ

ಎಂದಿನಂತೆ ಬಯಲು ಶೌಚಾಲಯಕ್ಕೆ ಹೋದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ದೊಣ್ಣೆಯಿಂದ ಪ್ರಾಣೇಶ್​ನ ತಲೆ, ಹೊಟ್ಟೆ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾರೆ. ಇತ್ತ ಮಗನನ್ನು ಕಳೆದುಕೊಂಡು ತಾಯಿಯ ಆಕ್ರಂದನ ಮುಗಿಲುಮುಟ್ಟಿದ್ದು, ನ್ಯಾಯಕ್ಕಾಗಿ ಪರಿತಪಿಸುತ್ತಿದ್ದಾರೆ. ಈ ಕುರಿತು ಸರ್ಜಾಪುರ ಪೂಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಬೆಳಗಾವಿ: ಪ್ರೇಯಸಿ ಜತೆ ಹೋಗುತ್ತಿದ್ದವನನ್ನು ಅಡ್ಡಗಟ್ಟಿ ಸ್ಕ್ರೂಡ್ರೈವರ್​ನಿಂದ ಚುಚ್ಚಿ ಬರ್ಬರ ಹತ್ಯೆ

ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವೃದ್ಧನಿಗೆ ಗಂಭೀರ ಗಾಯ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ತಾಲೂಕಿನ ಮಹದೇವಪುರ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವೃದ್ಧನಿಗೆ ಗಂಭೀರ ಗಾಯವಾಗಿದೆ. ಕಾಳೇನಹಳ್ಳಿ ಗ್ರಾಮದ ಶಿವಕುಮಾರ್(75) ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳು ವೃದ್ಧನನ್ನು ಬೆಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಕಾರುನ್ನು ಜಪ್ತಿ ಮಾಡಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಿಡಿಲು ಬಡಿದು ಜಾನುವಾರು ಸಾವು

ತುಮಕೂರು: ಪಾವಗಡ ತಾಲೂಕಿನ ರಂಗಸಮುದ್ರದಲ್ಲಿ ಸಿಡಿಲು ಬಡಿದು ಹಸುವೊಂದು ಸಾವನ್ನಪ್ಪಿದ ಘಟನೆ ಇಂದು(ಮೇ.17) ಬೆಳಿಗ್ಗೆ ನಡೆದಿದೆ. ಇನ್ನುಳಿದಂತೆ ನಾಲ್ಕು ಹಸುಗಳಿಗೆ ಗಾಯವಾಗಿದ್ದು, ಸಿಡಿಲು ಬಡಿದ ಪರಿಣಾಮ ಗುಡಿಸಲು ಸುಟ್ಟುಭಸ್ಮವಾಗಿದೆ. ಈ ಹಸುಗಳು ಕರಿಯಪ್ಪ ಎಂಬುವರಿಗೆ ಸೇರಿದ್ದಾಗಿದ್ದು, ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ