Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ ಪರಿಹಾರ: ಸುಪ್ರೀಂಕೋರ್ಟ್​ ಬೆನ್ನಲ್ಲೇ ಈಗ ಚುನಾವಣೆ ಆಯೋಗದ ಮೆಟ್ಟಿಲೇರಿದ ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬರ ಪರಿಹಾರಕ್ಕಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದು, ಮೊದಲ ಹೆಜ್ಜೆ ಎನ್ನುವಂತೆ ರಾಜ್ಯ ಸರ್ಕಾರದ ಒಂದು ಕೈ ಮೇಲಾಗಿದೆ. ಇದರ ಬೆನ್ನಲ್ಲೇ ಇದೀಗ ಇದೇ ಬರ ಪರಿಹಾರದ ಸಂಬಂಧ ರಾಜ್ಯ ಸರ್ಕಾರ, ಚುನಾವಣಾ ಆಯೋಗದ ಮೆಟ್ಟಿಲೇರಿದೆ. ಹಾಗಾದ್ರೆ, ಚುನಾವಣಾ ಆಯೋಗಕ್ಕೆ ನೀಡಿರುವ ದೂರಿನಲ್ಲಿ ಏನಿದೆ? ಇಲ್ಲಿದೆ ವಿವರ.

ಬರ ಪರಿಹಾರ: ಸುಪ್ರೀಂಕೋರ್ಟ್​ ಬೆನ್ನಲ್ಲೇ ಈಗ ಚುನಾವಣೆ ಆಯೋಗದ ಮೆಟ್ಟಿಲೇರಿದ ಕಾಂಗ್ರೆಸ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Apr 09, 2024 | 4:59 PM

ಬೆಂಗಳೂರು, (ಏಪ್ರಿಲ್ 09): ಬರ ಪರಿಹಾರ ಸಂಬಂಧ (Karnataka drought Fund)  ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ (Supreme court)  ಮೆಟ್ಟಿಲೇರಿದ್ದು, ಅಲ್ಲಿ ಒಂದು ಕೈ ಮೇಲಾಗಿದೆ. ಇದರ ಬೆನ್ನಲ್ಲೇ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆಯನ್ನು ಇಟ್ಟುಕೊಂಡು ಕಾಂಗ್ರೆಸ್​ ಈಗ  ಚುನಾವಣೆ ಆಯೋಗದ ಮೆಟ್ಟಿಲೇರಿದೆ. ಹೌದು… ಬರ ಪರಿಹಾರ ಬಿಡುಗಡೆಗೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ ಎಂದು ಕೇಂದ್ರ ಸಚಿವರಾದ ಅಮಿತ್ ಶಾ ಹಾಗೂ ನಿರ್ಮಲಾ ಸೀತಾರಾಮನ್ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್​ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಮಾಜಿ ಸಂಸದ ಉಗ್ರಪ್ಪ ನೇತೃತ್ವದ ನಿಯೋಗ ಇಂದು(ಏಪ್ರಿಲ್ 09) ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ತೆರಳಿ ದೂರು ನೀಡಿದ್ದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಎಂದು ಕಾಂಗ್ರೆಸ್ ಆಯೋಗಕ್ಕೆ ದೂರು ನೀಡಿದೆ.

ಕಾಂಗ್ರೆಸ್ ದೂರಿನಲ್ಲೇನಿದೆ?

ಬರ ಪರಿಹಾರ ಕೊಡುವ ವಿಚಾರದಲ್ಲಿ ಚುನಾವಣಾ ಆಯೋಗದ ನೀತಿ ಸಂಹಿತೆ ಅಡ್ಡಿಯಾಗಿದೆ. ಬರ ಪರಿಹಾರ ನೀಡಲು ಹೈಪವರ್ ಕಮಿಟಿ ಸಭೆ ನಡೆಯಬೇಕು. ಸಭೆ ನಡೆಸಲು ಚುನಾವಣಾ ಆಯೋಗ ಅನುಮತಿ ನೀಡಿಲ್ಲ. ಈ ಬಗ್ಗೆ ನಾವು ಪತ್ರ ಬರೆದಿದ್ದೇವೆ. ಆದರೆ ಚುನಾವಣಾ ಆಯೋಗ ಅನುಮತಿ ನೀಡಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆ ಇದೆ. ಕಾನೂನಿನಲ್ಲಿ ಬರ ಪರಿಹಾರ ಕೊಡುವ ಅವಕಾಶ ಇದ್ದರೂ ಸಹ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೇಲೆ ಹೇಳುತ್ತಿದೆ. ಹೀಗಾಗಿ ಹೈಪವರ್ ಕಮಿಟಿ ಮೀಟಿಂಗ್ ಮಾಡಲು ಚುನಾವಣಾ ಆಯೋಗ ನಿರ್ದೇಶನ ನೀಡಬೇಕು. ಅಲ್ಲದೇ ತಕ್ಷಣವೇ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕಾಂಗ್ರೆಸ್​ ತನ್ನ ದೂರಿನಲ್ಲಿ ಮನವಿ ಮಾಡಿದೆ.

ಇದನ್ನೂ ಓದಿ: ಬರ ಪರಿಹಾರ: 2 ವಾರದಲ್ಲಿ ಸಮಸ್ಯೆ ಬಗೆಹರಿಸುತ್ತೇವೆ: ಸುಪ್ರೀಂಗೆ ಕೇಂದ್ರ ಸರ್ಕಾರ ಭರವಸೆ

ಉಗ್ರಪ್ಪ ಹೇಳಿದ್ದೇನು?

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಸಂಸದ ವಿಎಸ್​ ಉಗ್ರಪ್ಪ, ಈಗಾಗಲೇ ೨೨೩ ತಾಲ್ಲೂಕು ಬರ ಅಂತ ಘೋಷಣೆ ‌ಮಾಡಲಾಗಿದೆ. ನೀತಿ ಸಂಹಿತೆ ಕಾರಣ ಬರ ಪರಿಹಾರ ಕೊಟ್ಟಿಲ್ಲ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ರಾಜ್ಯದಲ್ಲಿ ತೀವ್ರವಾದ ಬರವಿದೆ. ಕೇಂದ್ರ ಸಮಿತಿ ಕಳೆದ ಅಕ್ಟೋಬರ್ ನಲ್ಲಿ‌ ಭೇಟಿ ನೀಡಿದ್ದರು. ಇಲ್ಲಿಯವರೆಗೆ ಕೇಂದ್ರ ಹೇಳಿಕೆ ಬಿಟ್ರೆ ಪರಿಹಾರ ಕೊಟ್ಟಿಲ್ಲ. ಕಾನೂನುಬದ್ಧವಾಗಿ ಸಿಗಬೇಕಾದ ಪರಿಹಾರ ಕೊಟ್ಟಿಲ್ಲ. ಸುಪ್ರೀಂ ಕೋರ್ಟ್ ಮುಂದೆ ರಾಜ್ಯ ಸರ್ಕಾರ ದಾವೆ ಹೂಡಿದೆ. ಈಗಾಗಲೇ ಸುಪ್ರೀಂ ಕೋರ್ಟ್ ಕೂಡ ಕಪಾಳ ಮೋಕ್ಷ ಮಾಡುವ ಕೆಲಸ ಮಾಡಿದೆ. ಇನ್ನು ಬರಪರಿಹಾರ, ಕುಡಿಯುವ ನೀರು, ಮೇವಿಗೆ ಯಾವುದೇ ನಿರ್ಬಂಧ ಇಲ್ಲ ಎಂದು ಚುನಾವಣೆ ಆಯೋಗ ಸ್ಪಷ್ಟನೆ ನೀಡಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್