AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನಾಪ್ ಪ್ರಕರಣ: ಮೇ 14ರವರೆಗೆ ಹೆಚ್​ಡಿ ರೇವಣ್ಣಗೆ ನ್ಯಾಯಾಂಗ ಬಂಧನ

ಹೆಚ್​​ಡಿ ರೇವಣ್ಣ(HD Revanna) ವಿರುದ್ಧದ ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಮೇ.08) ನ್ಯಾಯಾಂಗ ಬಂಧನಕ್ಕೆ ವಿಧಿಸಿ ಕೋರ್ಟ್​ ಆದೇಶಿಸಿದೆ. ಹೌದು, ಏಳು ದಿನದವರೆಗೆ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ.

ಕಿಡ್ನಾಪ್ ಪ್ರಕರಣ: ಮೇ 14ರವರೆಗೆ  ಹೆಚ್​ಡಿ ರೇವಣ್ಣಗೆ ನ್ಯಾಯಾಂಗ ಬಂಧನ
ರೇವಣ್ಣಗೆ ನ್ಯಾಯಾಂಗ ಬಂಧನ
TV9 Web
| Edited By: |

Updated on:May 08, 2024 | 8:42 PM

Share

ಬೆಂಗಳೂರು, ಮೇ.08: ಹೆಚ್​​ಡಿ ರೇವಣ್ಣ(HD Revanna) ವಿರುದ್ಧದ ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಮೇ.08) ನ್ಯಾಯಾಂಗ ಬಂಧನಕ್ಕೆ ವಿಧಿಸಿ ಕೋರ್ಟ್​ ಆದೇಶಿಸಿದೆ. ಹೌದು, ಏಳು ದಿನದವರೆಗೆ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ. ಈ ಹಿನ್ನಲೆ ರೇವಣ್ಣರನ್ನು ಎಸ್​ಐಟಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯುತ್ತಿದ್ದಾರೆ.

ಪ್ರಕರಣ ಸಂಬಂಧ ಎಸ್​ಐಟಿ ಕಸ್ಟಡಿಯಲ್ಲಿರುವ ರೇವಣ್ಣ ಆಪ್ತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ತನಿಖೆ ಭರದಿಂದ ಸಾಗಿದೆ. ಇನ್ನು ರೇವಣ್ಣ ಪರ ಜಾಮೀನಿಗೆ ಅವರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಆದರೆ, ಕಸ್ಟಡಿಯಲ್ಲಿರೋ ವ್ಯಕ್ತಿಗೆ ಜಾಮೀನು ಕೊಡುವುದು ಹೇಗೆ ಎಂದು ನ್ಯಾಯಾಧೀಶರು ರೇವಣ್ಣ ಪರ ವಕೀಲರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ವಕೀಲರು ವಾದ ಮುಂದಿಟ್ಟಿದ್ದರ. ಆದರೂ ಈ ಬಗ್ಗೆ ಎಸ್‌ಐಟಿ ಪ್ರತಿಕ್ರಿಯಿಸಲಿ ಅಂತಾ ಎಸ್​ಐಟಿಗೆ ನೋಟಿಸ್ ನೀಡಿ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿತ್ತು. ಅದರಂತೆ ಇಂದು ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ.

ಇದನ್ನೂ ಓದಿ:ಪ್ರಜ್ವಲ್ ರೇವಣ್ಣ ಪ್ರಕರಣ; ಎಸ್ಐಟಿ ತನಿಖೆ ಒನ್ ವೇನಲ್ಲಿ ಸಾಗುತ್ತಿರುವ ಕಾರಣ ಸಿಬಿಐಗೆ ವಹಿಸಿಕೊಡಬೇಕು: ಜಿಟಿ ದೇವೇಗೌಡ

ಕಣ್ಣೀರು ಹಾಕುತ್ತಾ ಬಂದ ರೇವಣ್ಣ

ಇನ್ನು ಕೋರ್ಟ್ ಹಾಲ್​ನಲ್ಲಿಯೇ ರೇವಣ್ಣ ಇದ್ದು, ನ್ಯಾಯಾಲಯದ ಕಟ್ಟಡದಿಂದ ರೇವಣ್ಣ ಕಣ್ಣೀರು ಹಾಕುತ್ತಾ ಬಂದಿದ್ದಾರೆ. ನ್ಯಾಯಾಧೀಶರ ಆದೇಶ ಪ್ರತಿಗಾಗಿ ಎಸ್​ಐಟಿ ಅಧಿಕಾರಿಗಳು ಕಾಯುತ್ತಿದ್ದು, ನಂತರ ಕೋರ್ಟ್ ಹಾಲ್​ನಿಂದ ಕೆಲವೇ ಕ್ಷಣಗಳಲ್ಲಿ ಹೆಚ್.ಡಿ.ರೇವಣ್ಣರನ್ನ ಪರಪ್ಪನ ಅಗ್ರಹಾರ ಜೈಲಿಗೆ ಎಸ್ಐಟಿ ಅಧಿಕಾರಿಗಳು ಕರೆದೊಯ್ಯಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Wed, 8 May 24

Follow Us
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ