AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಾಯಂಡಹಳ್ಳಿ ಫ್ಲೈಓವರ್​ ಮೇಲಿಂದ ಜಿಗಿದು ಕವಿಪ್ರನಿನಿ ಗುತ್ತಿಗೆ ನೌಕರ ಸಾವು

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಗುತ್ತಿಗೆ ನೌಕರನಾಗಿ ಕೆಲಸ‌ ಮಾಡುತ್ತಿದ್ದ, ಜ್ಞಾನಭಾರತಿ ನಿವಾಸಿಯಾಗಿದ್ದ 30 ವರ್ಷದ ನವೀನ್​ ನಾಯಂಡಹಳ್ಳಿ ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಂಗಳೂರು: ನಾಯಂಡಹಳ್ಳಿ ಫ್ಲೈಓವರ್​ ಮೇಲಿಂದ ಜಿಗಿದು ಕವಿಪ್ರನಿನಿ ಗುತ್ತಿಗೆ ನೌಕರ ಸಾವು
ಮೃತ ನವೀನ್​
Shivaprasad B
| Edited By: |

Updated on:Apr 12, 2024 | 10:54 AM

Share

ಬೆಂಗಳೂರು, ಏಪ್ರಿಲ್​ 12: ನಗರದ ನಾಯಂಡಹಳ್ಳಿ ಫ್ಲೈಓವರ್ (Nayandahalli Flyover) ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನವೀನ್ (30) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಮೃತ ನವೀನ್ ಜ್ಞಾನಭಾರತಿ ನಿವಾಸಿಯಾಗಿದ್ದು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ದಲ್ಲಿ ಗುತ್ತಿಗೆ ನೌಕರನಾಗಿ ಕೆಲಸ‌ ಮಾಡುತ್ತಿದ್ದನು. ನವೀನ್​ ಇಂದು (ಏ.12) ಬೆಳಿಗ್ಗೆ 8:20ರ ಸುಮಾರಿಗೆ ಫ್ಲೈಓವರ್​ ಮೇಲೆ ಬೈಕ್​ ಪಾರ್ಕ್​ ಮಾಡಿ, ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಟರಾಯನಪುರ ಸಂಚಾರ ಪೊಲೀಸರು (Police) ಕೂಡಲೆ ನವೀನ್​ ಬಳಿ ಧಾವಿಸಿದ್ದಾರೆ. ಇನ್ನು ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನವೀನ್​ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದನು.

ಲಾರಿ ಹರಿದು ರಸ್ತೆ ದಾಟುತ್ತಿದ್ದ ವ್ಯಕ್ತಿ ದುರ್ಮರಣ

ನೆಲಮಂಗಲ: ಲಾರಿ ಹರಿದು ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ದಾವಣಗೆರೆ ಮೂಲದ ರುದ್ರಮುನಿ (55) ಮೃತ ದುರ್ದೈವಿ. ನೆಲಮಂಗಲ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರುದ್ರಮುನಿ ಅವರು ಸಂಬಂಧಿಗಳನ್ನ ಭೇಟಿಯಾಗಿ ಊರಿಗೆ ಹೊರಟಿದ್ದ ವೇಳೆ ಅವಘಡ ಸಂಭವಿಸಿದೆ. ಅಪಘಾತದ ಬಳಿಕ ಚಾಲಕ ಸ್ಥಳದಲ್ಲೇ ಲಾರಿ ನಿಲ್ಲಿಸಿ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ನೆರೆ ಮನೆಯಲ್ಲೇ ಕಳ್ಳತನ, ಕದ್ದ ಹಣ ಮಲೈ ಮಹದೇಶ್ವರನ ಹುಂಡಿಗೆ !

ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಚಾಲಕ ಪಾರು

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಬೈಪಾಸ್​ನಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ.  ಅದೃಷ್ಟವಶಾತ್​ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾರು ಡಿಕ್ಕಿಯಾಗುತ್ತಿದ್ದಂತೆ ವೈಯರ್​ ತುಂಡಾಗಿ ಕೆಳಗೆ ಬಿದ್ದಿದೆ. ಆದರೆ ಕಾರಿಗೆ ವೈಯರ್​ ತಾಗಿಲ್ಲ. ಇದರಿಂದ ಚಾಲಕ ಪಾರಾಗಿದ್ದಾನೆ. ವಿಚಾರ ತಿಳಿದು ಸ್ಥಳಕ್ಕೆ ಬೆಸ್ಕಾಂ ಸಿಬ್ಬಂದಿ ಆಗಮಿಸಿ, ವೈಯರ್​ ಜೋಡಿಸಿ, ಹೋಗಿದ್ದಾರೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:41 am, Fri, 12 April 24

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್