Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Yatri: ನಮ್ಮ ಯಾತ್ರಿ ಆ್ಯಪ್​ ಮೂಲಕ ಇನ್ನು ಕ್ಯಾಬ್ ಸಹ ಬುಕ್ ಮಾಡಬಹುದು

ಆಟೋ ಸೇವೆ ಮೂಲಕ ಬೆಂಗಳೂರಿನಲ್ಲಿ ಪದಾರ್ಪಣೆ ಮಾಡಿದ್ದ ನಮ್ಮ ಯಾತ್ರಿ ಆ್ಯಪ್ ಈಗ ಕ್ಯಾಬ್ ಸೇವೆ ಕೂಡ ಆರಂಭಿಸಿದೆ. ಇನ್ನು ಮುಂದೆ ಪ್ರಯಾಣಿಕರು ನಮ್ಮ ಯಾತ್ರಿ ಆ್ಯಪ್ ಮೂಲಕ ಕ್ಯಾಬ್ ಕೂಡ ಬುಕ್ ಮಾಡಬಹುದಾಗಿದೆ. ಸದ್ಯದಲ್ಲೇ ಈ ಸೇವೆ ಕರ್ನಾಟಕದಾದ್ಯಂತ ವಿಸ್ತರಣೆಯಾಗಲಿದೆ.

Namma Yatri: ನಮ್ಮ ಯಾತ್ರಿ ಆ್ಯಪ್​ ಮೂಲಕ ಇನ್ನು ಕ್ಯಾಬ್ ಸಹ ಬುಕ್ ಮಾಡಬಹುದು
ನಮ್ಮ ಯಾತ್ರಿ ಆ್ಯಪ್Image Credit source: Nammayatri.in
Follow us
Ganapathi Sharma
|

Updated on: Apr 17, 2024 | 10:03 AM

ಬೆಂಗಳೂರು, ಏಪ್ರಿಲ್ 17: ಇನ್ನು ನಮ್ಮ ಯಾತ್ರಿ ಆ್ಯಪ್ (Namma Yatri App) ಮೂಲಕ ಕ್ಯಾಬ್ (Cab) ಕೂಡ ಬುಕ್ ಮಾಡಬಹುದು. ಸದ್ಯ 25,000 ಕ್ಯಾಬ್​​ಗಳೊಂದಿಗೆ ಕಾರ್ಯಾಚರಣೆ ಆರಂಭವಾಗಿದ್ದು, ಮುಂದಿನ ಆರು ತಿಂಗಳಲ್ಲಿ ಒಂದು ಲಕ್ಷ ಚಾಲಕರನ್ನು (Cab Drivers) ಸೇರಿಸುವ ಗುರಿಯನ್ನು ಆ್ಯಪ್ ಹೊಂದಿದೆ. ನಮ್ಮ ಯಾತ್ರಿಯು ಹೆಚ್ಚಿನ ಕಮಿಷನ್‌ ಮತ್ತು ಪಾರದರ್ಶಕತೆಯ ಕೊರತೆಯ ಸಮಸ್ಯೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ.

ನಮ್ಮ ಯಾತ್ರಿಯ ಕ್ಯಾಬ್ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಚಾಲನೆ ನೀಡಿದರು. ಬಳಿಕ ಮಾತನಾಡಿ, ನಮ್ಮ ಯಾತ್ರಿ ಕರ್ನಾಟಕದ ಸ್ವದೇಶಿ ಆ್ಯಪ್ ಆಗಿದೆ. ಅದರ ಸಮುದಾಯ-ಕೇಂದ್ರಿತ ವಿಧಾನ ಮತ್ತು ಚಾಲಕರ ಕಲ್ಯಾಣಕ್ಕಾಗಿ ಕೈಗೊಂಡ ಕ್ರಮಗಳು ಶ್ಲಾಘನೀಯ. ನಾವೀನ್ಯತೆ, ಪಾರದರ್ಶಕತೆ ಮತ್ತು ಎಲ್ಲರನ್ನೂ ಒಳಗೊಳ್ಳುವಿಕೆಗೆ ಅವರ ಬದ್ಧತೆಯನ್ನು ನಾನು ಶ್ಲಾಘಿಸುತ್ತೇನೆ ಮತ್ತು ಅವರಿಗೆ ಯಶಸ್ಸನ್ನು ಬಯಸುತ್ತೇನೆ ಎಂದರು.

ನಮ್ಮ ಸಮುದಾಯವನ್ನು ಸಬಲೀಕರಣಗೊಳಿಸಲು ಮತ್ತು ನ್ಯಾಯಯುತ ವೇತನ, ಪರಸ್ಪರ ಗೌರವವನ್ನು ನೀಡುವ ರೀತಿಯಲ್ಲಿ ನೇರವಾಗಿ ಚಾಲಕರನ್ನು ಸಂಪರ್ಕಿಸಬಹುದಾದ, ಮುಕ್ತ ಚಲನಶೀಲತೆಯ ವೇದಿಕೆಯನ್ನು ಅಭಿವೃದ್ಧಿಪಡಿಸಿದ್ದಕ್ಕಾಗಿ ನಾವು ನಮ್ಮ ಯಾತ್ರಿಯನ್ನು ಅಭಿನಂದಿಸುತ್ತೇವೆ. ಇದು ಚಾಲಕರ ಕಲ್ಯಾಣ ಯೋಜನೆಗಳನ್ನು ವರ್ಧಿಸುತ್ತದೆ ಎಂದು ಇಂಡಿಯನ್ ಫೆಡರೇಶನ್ ಆಫ್ ಆಪ್ ಬೇಸ್ಡ್ ಟ್ರಾನ್ಸ್‌ಪೋರ್ಟ್ ವರ್ಕರ್ಸ್ (ಐಎಫ್‌ಎಟಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶೇಕ್ ಸಲಾವುದ್ದೀನ್ ಹೇಳಿದರು.

ನಮ್ಮ ಯಾತ್ರಿ ಆ್ಯಪ್ ಆಟೋ ಸೇವೆಯಂತೆಯೇ ಕ್ಯಾಬ್‌ಗಳಲ್ಲಿಯೂ ಪಾರದರ್ಶಕತೆ ಮತ್ತು ದಕ್ಷತೆಗೆ ಆದ್ಯತೆ ನೀಡಲಿದೆ ಎಂದು ಅವರು ಹೇಳಿದರು. ಇದು ಎಸಿ ಅಲ್ಲದ ಮಿನಿ, ಎಸಿ ಮಿನಿ, ಸೆಡಾನ್ ಮತ್ತು XL ಕ್ಯಾಬ್ ಒಳಗೊಂಡಂತೆ ಗ್ರಾಹಕರ ವೈವಿಧ್ಯಮಯ ಅಗತ್ಯಗಳನ್ನು ಪೂರೈಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದಾದ್ಯಂತ ಆರಂಭವಾಗಲಿದೆ ಸೇವೆ

ಅಪ್ಲಿಕೇಶನ್ ಶೀಘ್ರದಲ್ಲೇ ಇಂಟರ್-ಸಿಟಿ, ಬಾಡಿಗೆಗಳು ಮತ್ತು ನಿಗದಿತ ರೈಡ್‌ಗಳನ್ನು ಕೂಡ ಒದಗಿಸಲಿವೆ. ಮುಂದಿನ ದಿನಗಳಲ್ಲಿ ಕರ್ನಾಟಕದಾದ್ಯಂತ ಆ್ಯಪ್ ಸೇವೆ ಲಭ್ಯವಾಗಲಿದೆ. ಇದು ಅಂಗವೈಕಲ್ಯ-ಸ್ನೇಹಿ ಪ್ರಯಾಣ, ಹೆಚ್ಚುವರಿ ಲಗೇಜ್ ಕೊಂಡೊಯ್ಯಲು ಅವಕಾಶ, ಸಾಕುಪ್ರಾಣಿಗಳೊಂದಿಗೆ ಪ್ರಯಾಣ ಮತ್ತು ಪ್ರವಾಸಗಳಂತಹ ವಿಶೇಷ ಸೇವೆಗಳನ್ನೂ ಸಹ ಒದಗಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಈ ರೈಲು ನಿಲ್ದಾಣದಲ್ಲಿದೆ ರೈಲ್ವೆ ಕೋಚ್​​​ ಎಸಿ ರೆಸ್ಟೋರೆಂಟ್! ಏನಿದರ ವಿಶೇಷ? ಇಲ್ಲಿದೆ ಮಾಹಿತಿ

ನಮ್ಮ ಯಾತ್ರಿ ಆ್ಯಪ್ ಆರಂಭದಲ್ಲಿ ಬೆಂಗಳೂರಿನಾದ್ಯಂತ ಆಟೊ ಸೇವೆಗಳನ್ನು ಒದದಗಿಸುತ್ತಿತ್ತು. ಇದೀಗ ಕ್ಯಾಬ್ ಸೇವಾ ಕ್ಷೇತ್ರಕ್ಕೂ ಕಾಲಿಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ