AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೃತೀಯ ಲಿಂಗಿ ಹತ್ಯೆ ಪ್ರಕರಣ; ಓರ್ವ ಮಹಿಳೆ ಬಂಧನ, ಹತ್ಯೆಗೆ ಕಾರಣವೇನು ಗೊತ್ತಾ?

ಇದೇ ಮೇ. 3ರಂದು ಜೆ.ಬಿ ನಗರ ಪೊಲೀಸ್ ಠಾಣಾ(JB Nagar Police Station) ವ್ಯಾಪ್ತಿಯ ಮನೆಯೊಂದರಲ್ಲಿ ಮಂಜಿ ಬಾಯ್ ಅಲಿಯಾಸ್​ ಮಂಜ ನಾಯ್ಕ್ (42) ಎಂಬ ತೃತೀಯ ಲಿಂಗಿ ಕೊಲೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಓರ್ವ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು, ಹತ್ಯೆಗೆ ಕಾರಣ ಬಿಚ್ಚಿಟ್ಟಿದ್ದಾರೆ.

ತೃತೀಯ ಲಿಂಗಿ ಹತ್ಯೆ ಪ್ರಕರಣ; ಓರ್ವ ಮಹಿಳೆ ಬಂಧನ, ಹತ್ಯೆಗೆ ಕಾರಣವೇನು ಗೊತ್ತಾ?
ಮೃತ ತೃತೀಯ ಲಿಂಗಿ, ಕೊಲೆ ಆರೋಪಿ ಪ್ರೇಮ
TV9 Web
| Edited By: |

Updated on:May 10, 2024 | 4:52 PM

Share

ಬೆಂಗಳೂರು, ಮೇ.10: ತೃತೀಯ ಲಿಂಗಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರೇಮ (51) ಆರೋಪಿ ಮಹಿಳೆ. ಇದೇ ಮೇ. 3ರಂದು ಜೆ.ಬಿ ನಗರ ಪೊಲೀಸ್ ಠಾಣಾ(JB Nagar Police Station) ವ್ಯಾಪ್ತಿಯ ಮನೆಯೊಂದರಲ್ಲಿ ಮಂಜಿ ಬಾಯ್ ಅಲಿಯಾಸ್​ ಮಂಜ ನಾಯ್ಕ್ (42) ಎಂಬ ತೃತೀಯ ಲಿಂಗಿ ಕೊಲೆಯಾಗಿತ್ತು. ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಶವದ ಕುರಿತು ಪೊಲೀಸರು ಮೊದಲಿಗೆ UDR ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು.

ತನಿಖೆ ವೇಳೆ ಸತ್ಯಾಂಶ ಬಯಲು

ನಂತರ ಮರಣೋತ್ತರ ಪರೀಕ್ಷೆ ವೇಳೆ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಬಯಲಾಗಿದೆ. ಈ ಹಿನ್ನೆಲೆ ತೃತೀಯ ಲಿಂಗಿ ಜೊತೆ ವಾಸವಿದ್ದ ಮಹಿಳೆ ಪ್ರೇಮ ಎಂಬುವವರನ್ನು ಬಂಧಿಸಿದ್ದ ಪೊಲೀಸರು, ತಮ್ಮ ಭಾಷೆಯಲ್ಲಿ ವಿಚಾರಣೆ ನಡೆಸಿದಾಗ ಆರೋಪಿ ಮಹಿಳೆ ಕೊಲೆಗೆ ಕಾರಣ ಬಿಚ್ಚಿಟ್ಟಿದ್ದಾರೆ. ‘ಪತಿ ಮೃತರಾದ ಮೇಲೆ 20 ವರ್ಷದಿಂದ ತೃತೀಯ ಲಿಂಗಿಯ ಜೊತೆ ವಾಸವಿದ್ದ ಮಹಿಳೆ ಪ್ರೇಮಾ, ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದಳು. ಇತ್ತ ಮೃತ ಮಂಜಿ ಬಾಯ್, ಕಂಪನಿಯೊಂದರ ಕ್ಯಾಂಟಿನ್​ನಲ್ಲಿ ಕೆಲಸ ಮಾಡುತ್ತಿದ್ದರು.

ಇದನ್ನೂ ಓದಿ:ಗಂಡ-ಹೆಂಡತಿ ಜಗಳ: ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಪತ್ನಿಯ ಭೀಕರ ಕೊಲೆ

ಇನ್ನು ಹೀಗಿದ್ದವರ ನಡುವೆ ಕಳೆದ ಏಪ್ರಿಲ್​.26 ರಂದು ಮನೆಯಲ್ಲಿ ಇಬ್ಬರ ನಡುವೆ ಜಗಳ ಆಗಿತ್ತು. ಈ ವೇಳೆ ಮಹಿಳೆಗೆ ಚಾಕುವಿನಿಂದ ಚುಚ್ಚಲು ತೃತೀಯ ಲಿಂಗಿ ಮುಂದಾಗಿದ್ದರು. ಇದರಿಂದ ತನ್ನ ಪ್ರಾಣ ಉಳಿಸಿಕೊಳ್ಳಲು ಪ್ರೇಮ, ಟವಲ್​ ತೆಗೆದುಕೊಂಡು ಮಂಜಿಬಾಯ್ ಕುತ್ತಿಗೆಯನ್ನು ಬೀಗಿಯಾಗಿ ಬಿಗಿದು ಕೊಲೆ ಮಾಡಿದ್ದಾರೆ. ಸದ್ಯ ಆರೋಪಿತೆ ಪ್ರೇಮರನ್ನು ಬಂಧಿಸಿ, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪೂರ್ವ ಡಿಸಿಪಿ ಕುಲದೀಪ್ ಜೈನ್ ಹೇಳಿದ್ದಿಷ್ಟು

ಇನ್ನು ಘಟನೆ ಕುರಿತು ಮಾತನಾಡಿದ ಡಿಸಿಪಿ ಕುಲದೀಪ್​ ಜೈನ್​, ‘ಮೇ. 3 ನೇ ತಾರೀಕು ಮುರುಗೇಶ್ ಪಾಳ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಜು ನಾಯ್ಕ್ ಎಂಬುವರ ಮೃತದೇಹ ಪತ್ತೆಯಾಗಿತ್ತು. ಅನುಮಾನಸ್ಪದ ಸಾವು ಎಂದು ಕೇಸ್ ದಾಖಲಿಸಿಕೊಂಡಿದ್ದೇವೂ, ಬಳಿಕ ಮರಣೋತ್ತರ ಪರೀಕ್ಷೆ ಆಧರಿಸಿ ಕೊಲೆ ಕೇಸ್ ದಾಖಲಿಸಲಾಗಿತ್ತು. ಬಳಿಕ ಮಂಜು ನಾಯ್ಜ್ ಜೊತೆಗಿದ್ದ ಪ್ರೇಮ ಎಂಬುವವರನ್ನು ಪತ್ತೆ ಹಚ್ಚಿ ವಿಚಾರಣೆ ಮಾಡಿದ್ವಿ, ಈ ವೇಳೆ ಕೋಪದಲ್ಲಿ ಬೈಯ್ತಿದ್ದ, ಹಿಂಸೆ ಕೊಡ್ತಿದ್ದ, ಕೊಲೆ ಮಾಡಲು ಮುಂದಾಗಿದ್ದ. ಅಷ್ಟೇ ಅಲ್ಲದೆ 20 ವರ್ಷದಿಂದ ಜೊತೆಗಿದ್ದರೂ ಸಂಶಯ ಪಡೋದು ಸೇರಿದಂತೆ ಇತರ ವಿಚಾರಕ್ಕೆ ಜಗಳ ಆಗುತ್ತಿತ್ತು. ಇದರಿಂದ ಪ್ರೇಮ ಉಸಿರುಗಟ್ಟಿಸಿ ಮಂಜು ನಾಯ್ಕ್ ರನ್ನ ಕೊಲೆ ಮಾಡಿದ್ದಾರೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:07 pm, Fri, 10 May 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್