AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ 2 ವರ್ಷದಿಂದ ರಾಜ್ಯಕ್ಕೆ ಅನ್ಯಾಯ ಮಾಡ್ತಿದೆ; ಅದರ ವಿರುದ್ಧ ಸೊಲ್ಲೆತ್ತುವ ಧೈರ್ಯ ತೋರಿ -ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ

basavaraj bommai: ‘ಕಳೆದ ಎರಡು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಎಸಗಿರುವುದು ಕೇಂದ್ರದಲ್ಲಿರುವ ನಿಮ್ಮದೇ ಪಕ್ಷದ ಸರ್ಕಾರ. ಅಧಿಕಾರದ ಆಸೆಯೋ, ತಿಳಿವಳಿಕೆಯ ಕೊರತೆಯೋ, ಇಲ್ಲವೇ ಅವ್ಯಕ್ತ ಭೀತಿಯೋ, ಹಿಂದಿನ ಮುಖ್ಯಮಂತ್ರಿಗಳು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಸೊಲ್ಲೆತ್ತಲಿಲ್ಲ. ಆ ಧೈರ್ಯವನ್ನು ನೀವು ತೋರಿಸುತ್ತೀರಿ ಎಂದು ನಂಬಿದ್ದೇನೆ ಎಂದು ಸಿದ್ದರಾಮಯ್ಯ​ ನೂತನ ಮುಖ್ಯಮಂತ್ರಿಗೆ ಅವರ ಜವಾಬ್ದಾರಿಯನ್ನು ಮನನ ಮಾಡಿಕೊಟ್ಟಿದ್ದಾರೆ.

ಕೇಂದ್ರ 2 ವರ್ಷದಿಂದ ರಾಜ್ಯಕ್ಕೆ ಅನ್ಯಾಯ ಮಾಡ್ತಿದೆ; ಅದರ ವಿರುದ್ಧ ಸೊಲ್ಲೆತ್ತುವ ಧೈರ್ಯ ತೋರಿ -ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ
ಕೇಂದ್ರ 2 ವರ್ಷದಿಂದ ರಾಜ್ಯಕ್ಕೆ ಅನ್ಯಾಯ ಮಾಡ್ತಿದೆ; ಅದರ ವಿರುದ್ಧ ಸೊಲ್ಲೆತ್ತುವ ಧೈರ್ಯ ತೋರಿ -ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ
TV9 Web
| Edited By: |

Updated on: Jul 28, 2021 | 3:19 PM

Share

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಟ್ವೀಟ್​ ಹೇಳಿಕೆ ಬಿಡುಗಡೆ ಮಾಡಿದ್ದು, ‘ಪ್ರಮಾಣ ವಚನ ಸ್ವೀಕಾರದ ಮೂಲಕ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವ ಅವಕಾಶವನ್ನು ಸಂವಿಧಾನಬದ್ದವಾಗಿ ಪಡೆದಿರುವ ಬಸವರಾಜ ಬೊಮ್ಮಾಯಿಯವರೇ ನಿಮಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು. ಜವಾಬ್ದಾರಿಯುತ ವಿರೋಧಪಕ್ಷವಾಗಿ ನಿಮಗೆ ನಮ್ಮ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ನಿಮಗೆ ಸಿಗಲಿ’ ಎಂದು ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಹಾರೈಸಿದ್ದಾರೆ.

‘ಕಳೆದ ಎರಡು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಎಸಗಿರುವುದು ಕೇಂದ್ರದಲ್ಲಿರುವ ನಿಮ್ಮದೇ ಪಕ್ಷದ ಸರ್ಕಾರ. ಅಧಿಕಾರದ ಆಸೆಯೋ, ತಿಳಿವಳಿಕೆಯ ಕೊರತೆಯೋ, ಇಲ್ಲವೇ ಅವ್ಯಕ್ತ ಭೀತಿಯೋ, ಹಿಂದಿನ ಮುಖ್ಯಮಂತ್ರಿಗಳು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಸೊಲ್ಲೆತ್ತಲಿಲ್ಲ. ಆ ಧೈರ್ಯವನ್ನು ನೀವು ತೋರಿಸುತ್ತೀರಿ ಎಂದು ನಂಬಿದ್ದೇನೆ ಎಂದು ಹಿಂದಿನ ಸರ್ಕಾರವನ್ನು ಲೇವಡಿ ಮಾಡುತ್ತಾ, ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ​ ನೂತನ ಮುಖ್ಯಮಂತ್ರಿಗೆ ಅವರ ಜವಾಬ್ದಾರಿಯನ್ನು ಮನನ ಮಾಡಿಕೊಟ್ಟಿದ್ದಾರೆ.

ಬರ ಪರಿಹಾರ, ಜಿಎಸ್​ಟಿ ಪಾಲು, ತೆರಿಗೆ ಹಂಚಿಕೆ, ಕೊರೊನಾ ನಿಯಂತ್ರಣಕ್ಕೆ ನೆರವು- ಈ ಎಲ್ಲ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ತೋರಿರುವ ಮಲತಾಯಿ ಧೋರಣೆ ನಿಮಗೆ ತಿಳಿದಿದೆ. ಇದನ್ನು ಪ್ರಧಾನಿ ಮೋದಿ ಮತ್ತು ಸಂಬಂಧಿತ ಸಚಿವರ ಗಮನಕ್ಕೆ ತಂದು ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸವನ್ನು ನೀವು ಆದ್ಯತೆಯಿಂದ ಮಾಡಬೇಕೆಂದು ಸಲಹೆ ನೀಡಿದ್ದಾರೆ.

ರಾಜ್ಯಕ್ಕೆ ಅನ್ಯಾಯವಾದ ಸಂದರ್ಭದಲ್ಲಿ ಸರ್ವಪಕ್ಷಗಳ ಸಭೆ ಮತ್ತು ನಿಯೋಗದ ಮೂಲಕ ನ್ಯಾಯ ಪಡೆಯುವ ಪ್ರಯತ್ನದ ಪರಂಪರೆಯೊಂದು ನಮ್ಮಲ್ಲಿದೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಬುನಾದಿಯಾದ ಈ ರೀತಿಯ ಮುಕ್ತ ಚರ್ಚೆ-ಸಂವಾದಗಳೇ ನಿಂತುಬಿಟ್ಟಿವೆ. ನೀವು ಇದಕ್ಕೆ ಮರುಚಾಲನೆ ನೀಡುವಿರೆಂಬ ನಿರೀಕ್ಷೆ ನನ್ನದು ಎಂದು ಸಿದ್ದರಾಮಯ್ಯ​ ಆಶಿಸಿದ್ದಾರೆ.

ಪ್ರಧಾನಮಂತ್ರಿ ಇಲ್ಲವೇ ಮುಖ್ಯಮಂತ್ರಿ ಸ್ಥಾನ ಪಕ್ಷಕ್ಕೆ ಸೀಮಿತವಾದುದಲ್ಲ, ಅದು ಇಡೀ ದೇಶ ಮತ್ತು ರಾಜ್ಯಕ್ಕೆ ಸಂಬಂಧಿಸಿದ್ದು. ವಿರೋಧ ಪಕ್ಷವಾಗಿ ನಮ್ಮ ನಡುವಿನ ಸೈದ್ಧಾಂತಿಕ ಸಂಘರ್ಷ ಜಾರಿಯಲ್ಲಿದ್ದರೂ ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ನಾವೆಲ್ಲ ಒಂದು ತಂಡವಾಗಿ ಕೆಲಸ ಮಾಡಬೇಕೆಂದು ನಿಮಗಿಂತ ವಯಸ್ಸು ಮತ್ತು ಅನುಭವದಲ್ಲಿ ಹಿರಿಯನಾದ ನನ್ನ ಸಲಹೆಯಾಗಿದೆ ಎಂದು ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಅವರು ತಮ್ಮ ಹೊಣೆಗಾರಿಕೆಯನ್ನು ಮನನ ಮಾಡಿಕೊಟ್ಟಿದ್ದಾರೆ.

ಸಾರ್ವಜನಿಕ ವಿಷಯಕ್ಕೆ ಸಂಬಂಧಿಸಿದ ಹಾಗೆ ಹಿಂದಿನ ಮುಖ್ಯಮಂತ್ರಿಗಳಿಗೆ ಹತ್ತಾರು ಪತ್ರಗಳನ್ನು ಬರೆದರೂ ಅದಕ್ಕೆ ಪ್ರತಿಕ್ರಿಯಿಸುವ ಕನಿಷ್ಠ ಸೌಜನ್ಯವನ್ನೂ ಅವರು ತೋರಿಲ್ಲ ಎನ್ನುವುದನ್ನು ವಿಷಾದದಿಂದ ಹೇಳಬೇಕಾಗಿದೆ. ಪಾರದರ್ಶಕತೆ ಪ್ರಜಾಪ್ರಭುತ್ವದ ಆತ್ಮವಾಗಿದೆ. ನಿಮ್ಮ ಕಾಲದಲ್ಲಿಯಾದರೂ ಮಾಹಿತಿಯ ವಿನಿಮಯ ಸುಗಮವಾಗಿ ನಡೆಯುವಂತೆ ಮಾಡುವಿರೆಂದು ನಂಬಿದ್ದೇನೆ ಎಂದಿದ್ದಾರೆ.

ಯಡಿಯೂರಪ್ಪಗೆ ಇನ್ನೂ 15 ದಿನ ಸಮಯ ಕೊಡಬೇಕಿತ್ತು: ನೆರೆ ಮಧ್ಯೆ ಸಿಎಂ ಬದಲಿಸಿದ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

(karnataka opposition leader siddaramaiah wish to new cm basavaraj bommai)

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ