AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪಾದಯಾತ್ರೆಯಲ್ಲಿ ಪೊಲೀಸರು ಕೆಲಸವೇ ಮಾಡಿಲ್ಲ; ಡಿಕೆ ಶಿವಕುಮಾರ್ ಹೇಳಿಕೆ

ಮೇಕೆದಾಟು ಯೋಜನೆಯಿಂದ ಅರಣ್ಯ ನಾಶವಾಗುತ್ತದೆ ಎಂಬ ವಿಚಾರದ ಬಗ್ಗೆ ಮಾತನಾಡಿದ ಡಿಕೆಶಿ, ಮೇಧಾಪಾಟ್ಕರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಮೇಧಾ ಪಾಟ್ಕರ್ ಏನಾದರೂ ಮಾಡಿಕೊಳ್ಳಲಿ. ಅದಕ್ಕೆ ಸರ್ಕಾರದವರು ಉತ್ತರ ನೀಡಲಿ.

ಕಾಂಗ್ರೆಸ್ ಪಾದಯಾತ್ರೆಯಲ್ಲಿ ಪೊಲೀಸರು ಕೆಲಸವೇ ಮಾಡಿಲ್ಲ; ಡಿಕೆ ಶಿವಕುಮಾರ್ ಹೇಳಿಕೆ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
TV9 Web
| Edited By: sandhya thejappa|

Updated on: Jan 15, 2022 | 4:42 PM

Share

ಬೆಂಗಳೂರು: ಮೇಕೆದಾಟು (Mekedatu) ಯೋಜನೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಸುಮಾರು 11 ದಿನಗಳ ಕಾಲ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದರು. ಆದರೆ ಕೊರೊನಾ (Coronavirus) ಹೆಚ್ಚಾಗುತ್ತಿರುವ ಹಿನ್ನೆಲೆ ಐದನೇ ದಿನಕ್ಕೆ ಪಾದಯಾತ್ರೆ ಮೊಟಕುಗೊಳಿಸಿದ್ದರು. ಪಾದಯಾತ್ರೆ ವೇಳೆ ಕಾರ್ಯನಿರ್ವಹಿಸಿದ್ದ ಕೆಲ ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar), ಕಾಂಗ್ರೆಸ್ ಪಾದಯಾತ್ರೆಯಲ್ಲಿ ಪೊಲೀಸರು ಕೆಲಸವೇ ಮಾಡಿಲ್ಲ. ನಮ್ಮ ಕಾರ್ಯಕರ್ತರೇ ನಮಗೆ ಭದ್ರತೆಯನ್ನು ನೀಡಿದ್ದರು ಅಂತ ಹೇಳಿದರು.

ಇನ್ನು ಮೇಕೆದಾಟು ಯೋಜನೆಯಿಂದ ಅರಣ್ಯ ನಾಶವಾಗುತ್ತದೆ ಎಂಬ ವಿಚಾರ ಬಗ್ಗೆ ಮಾತನಾಡಿದ ಡಿಕೆಶಿ, ಮೇಧಾಪಾಟ್ಕರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಮೇಧಾ ಪಾಟ್ಕರ್ ಏನಾದರೂ ಮಾಡಿಕೊಳ್ಳಲಿ. ಅದಕ್ಕೆ ಸರ್ಕಾರದವರು ಉತ್ತರ ನೀಡಲಿ. ನಾವು ಜನರ ಬದುಕಿಗಾಗಿ ಹೋರಾಟ ಮಾಡುತ್ತಿದ್ದೇವೆ. ಈ ಬಗ್ಗೆ ಸರ್ಕಾರವೇ ಒಂದು ಸಮಿತಿಯನ್ನು ರಚಿಸಲಿ ಎಂದು ಅಭಿಪ್ರಾಯಪಟ್ಟರು.

ಮೇಕೆದಾಟು ಯೋಜನೆಗಾಗಿ ಮತ್ತೆ ಪಾದಯಾತ್ರೆ ಮಾಡುತ್ತೇವೆ. ಸರ್ಕಾರ ಸ್ವಲ್ಪ ನಿಯಮ ಸಡಿಲಿಸಲಿ ಪಾದಯಾತ್ರೆ ಮಾಡುತ್ತೇವೆ. 50-100 ಜನಕ್ಕೆ ಅನುಮತಿ ಕೊಟ್ಟರೂ ಪಾದಯಾತ್ರೆ ಮಾಡುತ್ತೇವೆ ಅಂತ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ತಮಿಳುನಾಡಿನವರು ನಮ್ಮ ಸೋದರರು. ಅವರು ನಮ್ಮ ಸ್ನೇಹಿತರು. ನಾವು ಭಾರತದಲ್ಲಿ ಬದುಕುತ್ತಿದ್ದೇವೆ. ಕುಮಾರಸ್ವಾಮಿ ಬಳಿ ಹೊರ ರಾಜ್ಯದವರು ಕೆಲಸ ಮಾಡುತ್ತಿಲ್ಲವೇ. ಏನೋ ಬಾಯಿ ಚಪಲಕ್ಕೆ ಮಾತನಾಡ್ತಾರೆ ಮಾತನಾಡಲಿ ಅಂತ ಹೇಳಿದರು.

ನಮ್ಮ ವಿರುದ್ಧ ಮಾತ್ರ ಪ್ರಕರಣ ದಾಖಲು ಮಾಡಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಏಕೆ ಪ್ರಕರಣ ದಾಖಲು ಮಾಡಿಲ್ಲ. ನಾವು ಕೋರ್ಟ್ನಲ್ಲಿ ಈ ಬಗ್ಗೆಯೂ ಹೋರಾಡುತ್ತೇವೆ. ಕೇವಲ ಸರ್ಕಾರ ಅಲ್ಲ ಅಧಿಕಾರಿಗಳನ್ನ ಟಾರ್ಗೆಟ್ ಮಾಡ್ತೇವೆ . ಸರ್ಕಾರ ಎಚ್ಚೆತ್ತು ಎಲ್ಲರನ್ನೂ ಸಮನಾಗಿ ನೋಡದಿದ್ರೆ ಸರಿ ಇರಲ್ಲ. ಈಗ ಅದ್ಯಾವುದೋ ಹಳೇ ಹಳೇ ಕೇಸ್ ಓಪನ್ ಮಾಡಿದ್ದಾರೆ. ಆ ಕಾಲ ಬಂದೇ ಬರುತ್ತೆ. ನನ್ನ ಮೇಲೆ ಏನೇನು ಬೇಕೋ ಎಲ್ಲವನ್ನ ಮಾಡ್ತಾ ಇದ್ದಾರೆ. ಐಟಿ, ಇಡಿ ಸೇರಿ ಎಲ್ಲದರ ಬಗ್ಗೆ ಸಾಕ್ಷಿ ಸಮೇತ ಮಾತಾಡುವೆ. ಏನೇನು ತೊಂದರೆ ಕೊಡಬೇಕೋ ಕೊಡ್ತಾ ಇದ್ದಾರೆ ಅಂತ ಡಿಕೆಶಿ ಹೇಳಿದರು.

ಇದನ್ನೂ ಓದಿ

‘ಜಿಮ್​ನಲ್ಲಿ ಜೀವಿಸುವ ಸೈಕೋ’ ಅಂತ ಕರೆದುಕೊಂಡ ರಶ್ಮಿಕಾ ಮಂದಣ್ಣ; ಹೊಸ ಫೋಟೋ ವೈರಲ್​

ಲತಾ ಮಂಗೇಶ್ಕರ್​ಗೆ ಐಸಿಯುನಲ್ಲೇ ಮುಂದುವರಿದ ಚಿಕಿತ್ಸೆ; ಇನ್ನೂ 10 ದಿನ ವಿಶೇಷ ನಿಗಾದಲ್ಲಿ ಗಾಯಕಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ