AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Santro Ravi: ಸ್ಯಾಂಟ್ರೋ ರವಿಗಾಗಿ 11ನೇ ದಿನವೂ ಮುಂದುವರೆದ ಶೋಧ: ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಿನೂತನ ಪ್ರತಿಭಟನೆ

ಪೊಲೀಸರು ಆರೋಪಿ ಸ್ಯಾಂಟ್ರೋ ರವಿಗಾಗಿ ಹಲವು ಆಯಾಮಗಳಲ್ಲಿ ಹುಡುಕಾಟ ನಡೆಸುತ್ತಿದ್ದು, ವಾಟ್ಸಾಪ್​​ ಸ್ಟೇಟಸ್​​ನಲ್ಲಿದ್ದ ಯುವತಿಯರ ವಿಳಾಸ ಪತ್ತೆಗೆ ಮುಂದಾಗಿದ್ದಾರೆ. ಸದ್ಯ ಪೊಲೀಸರು ಹೊರ ರಾಜ್ಯದ ಯುವತಿಯರ ವಿಳಾಸವನ್ನು ಕಲೆ ಹಾಕುತ್ತಿದ್ದಾರೆ.

Santro Ravi: ಸ್ಯಾಂಟ್ರೋ ರವಿಗಾಗಿ 11ನೇ ದಿನವೂ ಮುಂದುವರೆದ ಶೋಧ: ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಿನೂತನ ಪ್ರತಿಭಟನೆ
ಕಾಂಗ್ರೆಸ್​ ಪ್ರತಿಭಟನೆ, ಸ್ಯಾಂಟ್ರೋ ರವಿ
TV9 Web
| Edited By: ವಿವೇಕ ಬಿರಾದಾರ|

Updated on: Jan 13, 2023 | 10:28 AM

Share

ಮೈಸೂರು: ಹಲವು ಪ್ರಕರಣಗಳಲ್ಲಿ ರಾಜ್ಯ ಪೊಲೀಸ್​ ಇಲಾಖೆಗೆ (Police Department) ಬೇಕಾಗಿರುವ ಸ್ಯಾಂಟ್ರೋ ರವಿ (Santro Ravi) ರಾಜ್ಯ ಸರ್ಕಾರಕ್ಕೆ (Karnataka Government) ಮತ್ತು ಪೊಲೀಸ್​ ಇಲಾಖೆ ತೆಲೆನೋವಾಗಿ ಪರಿಣಮಿಸಿದ್ದಾನೆ. ಪೊಲೀಸ್​ ಇಲಾಖೆ ಸ್ಯಾಂಟ್ರೋ ರವಿಗಾಗಿ ಹುಡುಕಾಟ ನಡೆಸುತ್ತಿದ್ದು, ಇಂದು (ಜ.13) 11ನೇ ದಿನವೂ ಶೋಧ ಕಾರ್ಯ ಮುಂದುವರೆದಿದೆ. ಆದರೆ ಸ್ಯಾಂಟ್ರೋ ರವಿ ಪೊಲೀಸರ ಕೈಗೆ ಸಿಗದಂತೆ ಸ್ಥಳ ಬದಲಾವಣೆ ಮಾಡುತ್ತಿದ್ದಾನೆ. ಇದು ಪೊಲೀಸ್​ ಇಲಾಖೆ ಸಂಕಷ್ಟ ತಂದಿದೆ. ಇನ್ನು ಸ್ಯಾಂಟ್ರೋ ರವಿ ಸ್ಥಳ ಬದಲಾವಣೆಗಾಗಿ ಫೋನ್ ಮೂಲಕ ​​ಯಾರನ್ನೂ ಸಂಪರ್ಕಿಸುತ್ತಿಲ್ಲ, ಜೊತೆಗೆ ನಾಪತ್ತೆಯಾದ ದಿನದಿಂದ ಕುಟುಂಬಸ್ಥರನ್ನೂ ಸಂಪರ್ಕಿಸಿಲ್ಲ.

ಇದನ್ನೂ ಓದಿ: ಸ್ಯಾಂಟ್ರೋ ರವಿಗೆ ಸದ್ಯಕ್ಕಿಲ್ಲ ಜಾಮೀನು, ಕಾರು ಚಾಲಕ ಪೊಲೀಸರ ವಶಕ್ಕೆ

ಪೊಲೀಸರು ಆರೋಪಿ ಸ್ಯಾಂಟ್ರೋ ರವಿಗಾಗಿ ಹಲವು ಆಯಾಮಗಳಲ್ಲಿ ಹುಡುಕಾಟ ನಡೆಸುತ್ತಿದ್ದು, ವಾಟ್ಸಾಪ್​​ ಸ್ಟೇಟಸ್​​ನಲ್ಲಿದ್ದ ಯುವತಿಯರ ವಿಳಾಸ ಪತ್ತೆಗೆ ಮುಂದಾಗಿದ್ದಾರೆ. ಸದ್ಯ ಪೊಲೀಸರು ಹೊರ ರಾಜ್ಯದ ಯುವತಿಯರ ವಿಳಾಸವನ್ನು ಕಲೆ ಹಾಕುತ್ತಿದ್ದಾರೆ. ಹೀಗೆ ಸಂಪರ್ಕ ಸಿಕ್ಕ ಯುವತಿರನ್ನು ಪ್ರತ್ಯೇಕ ವರ್ಗ ಮಾಡಿದ್ದಾರೆ. ರವಿ ಯುವತಿಯರ ಸಂಪರ್ಕಕ್ಕೆ ಹೋಗಿರಬಹುದೆಂಬ ಅನುಮಾನದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಿನೂತನ ಪ್ರತಿಭಟನೆ

ಈ ಸ್ಯಾಂಟ್ರೋ ರವಿ ರಾಜ್ಯ ಸರ್ಕಾರದ ಹಲವು ಸಚಿವರ ಜೊತೆ ಹಾಗೂ ಮುಖ್ಯಮಂತ್ರಿಗಳೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂದು ಆರೋಪ ಕೇಳಿಬರುತ್ತಿದೆ. ಈ ಹಿನ್ನೆಲೆ ಕಾಂಗ್ರೆಸ್​ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಭವನದಲ್ಲಿ ಕಾರ್ಯಕರ್ತರು ಪ್ರತಿಭಟನೆಗೆ ಸ್ಯಾಂಟ್ರೋ ಕಾರ್ ತರಿಸಿ, ಕಾರ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಸ್ಯಾಂಟ್ರೋ ರವಿ ಲೀಲೆಗಳು ಬಗೆದಷ್ಟು ಬೆಚ್ಚಿ ಬೀಳಿಸುವ ಕಥೆ: ಸ್ಯಾಂಟ್ರೋ ‘ಸರ್ವೀಸ್​’ ಜಾಲದಲ್ಲಿ ನಟಿ, ಮಾಡೆಲ್​ಗಳು..!

ಪ್ರತಿಭಟನೆಯಲ್ಲಿ ಸ್ಯಾಂಟ್ರೋ ರವಿ ಮತ್ತು ಬಿಜೆಪಿ ಸರ್ಕಾರಕ್ಕೆ ಲಿಂಕ್ ಇದೆ ಎಂದು ಆರೋಪಿಸಿದ್ದಾರೆ. ಹಾಗೇ ಸ್ಯಾಂಟ್ರೋ ಕಾರ್​ ಮೇಲೆ ಸ್ಯಾಂಟ್ರೋ ರವಿ ಮುಖವಾಡ ಧರಿಸಿದ ವ್ಯಕ್ತಿಯನ್ನು ಕೂರಿಸಿ ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ