AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ದೇವಸ್ಥಾನಗಳಲ್ಲಿ ಮೊಬೈಲ್​​ ಬ್ಯಾನ್​ಗೆ ಹೆಚ್ಚಿದ ಒತ್ತಡ: ಸಚಿವೆ ಶಶಿಕಲಾ ಜೊಲ್ಲೆ ಭೇಟಿಯಾದ ಅರ್ಚಕರ ಒಕ್ಕೂಟ

ಕರ್ನಾಟಕ ದೇವಸ್ಥಾನಗಳಲ್ಲಿ ಮೊಬೈಲ್​​ ಬ್ಯಾನ್​ ಮಾಡಬೇಕೆಂಬ ಕೂಗು ಜೋರಾಗಿದ್ದು, ಈ ಬಗ್ಗೆ ಅರ್ಚಕರ ಸಂಘ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ.

ಕರ್ನಾಟಕ ದೇವಸ್ಥಾನಗಳಲ್ಲಿ ಮೊಬೈಲ್​​ ಬ್ಯಾನ್​ಗೆ ಹೆಚ್ಚಿದ ಒತ್ತಡ:  ಸಚಿವೆ ಶಶಿಕಲಾ ಜೊಲ್ಲೆ ಭೇಟಿಯಾದ ಅರ್ಚಕರ ಒಕ್ಕೂಟ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 17, 2022 | 8:11 PM

Share

ಬೆಂಗಳೂರು: ದೇವಸ್ಥಾನಗಳ(Temples) ಪಾವಿತ್ರ್ಯವನ್ನು ಕಾಪಾಡಲು ತಮಿಳುನಾಡಿನಲ್ಲಿ ಮೊಬೈಲ್‌ ಫೋನ್‌ ಬ್ಯಾನ್‌ ಮಾಡಿದ ರೀತಿಯಲ್ಲಿ ಕರ್ನಾಟಕದಲ್ಲೂ (karnataka) ಸಹ ದೇಗುಲಗಳಲ್ಲಿ ಮೊಬೈಲ್‌ ಫೋನ್‌ ಬಳಕೆಯನ್ನು ನಿಷೇಧಿಸಬೇಕೆಂಬ ಕೂಗು ಜೋರಾಗಿದೆ. ಈ ಬಗ್ಗೆ ಇಂದು(ಡಿಸೆಂಬರ್ 17) ಅಖಿಲ ಕರ್ನಾಟಕ ಅರ್ಚಕರ(priest) ಒಕ್ಕೂಟ ಸಚಿವೆ ಶಶಿಕಲಾ ಜೊಲ್ಲೆ (Shashikala jolle) ಅವರನ್ನು ಭೇಟಿ ಮಾಡಿದ್ದು, ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಮೊಬೈಲ್​​ ಬ್ಯಾನ್​ಗೆ ಮನವಿ ಮಾಡಿದೆ.

ಇದನ್ನೂ ಓದಿ: ಅರ್ಚಕರಿಂದ ಹೈಕೋರ್ಟ್ ಮೆಟ್ಟಿಲೇರುವ ಎಚ್ಚರಿಕೆ: ತಮಿಳುನಾಡಿನಂತೆ ಕರ್ನಾಟಕ ದೇವಾಲಯಗಳಲ್ಲೂ ಮೊಬೈಲ್​ ಬ್ಯಾನ್ ಆಗುತ್ತಾ?

ಬೆಂಗಳೂರಿನ ಮುಜರಾಯಿ ಇಲಾಖೆ ಕಚೇರಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಭೇಟಿ ಮಾಡಿದ ಕರ್ನಾಟಕ ಅರ್ಚಕರ ಒಕ್ಕೂಟ, ದೇವರ ಆಭರಣ ಫೋಟೋ, ಹೆಣ್ಣು ಮಕ್ಕಳ ಫೋಟೋ ತೆಗೆಯೋದು ದೇವಾಲಯಗಳ ಆವರಣದಲ್ಲಿ ಸೆಲ್ಫಿ ತೆಗೆದುಕೊಳ್ಳುವವರ ಹಾವಳಿ ಇದೆ. ಭಕ್ತರ ಏಕಾಗ್ರತೆ ಧಕ್ಕೆಯಾಗುತ್ತಿರುವುದರಿಂದ ಮೊಬೈಲ್ ನಿಷೇಧಿಸಿದೆ ಎಂದು ಮನವಿ ಮಾಡಿದೆ. ಇದಕ್ಕೆ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವುದು ಸಚಿವೆ ಜೊಲ್ಲೆ ಭರವಸೆ ನೀಡಿದ್ದಾರೆ.

ತಮಿಳುನಾಡಿನಲ್ಲಿ ದೇವಾಲಯಗಳ ಪಾವಿತ್ರ್ಯ ಮತ್ತು ಪರಿಶುದ್ಧತೆಯನ್ನು ಕಾಪಾಡುವುದಕ್ಕಾಗಿ ರಾಜ್ಯದ ಉದ್ದಗಲಕ್ಕೂ ದೇವಾಲಯಗಳಲ್ಲಿ ಮೊಬೈಲ್‌ ಫೋನ್‌ ಬಳಸದಂತೆ ನಿರ್ಬಂಧಿಸಲು ರಾಜ್ಯ ಸರ್ಕಾರಕ್ಕೆ ಮದ್ರಾಸ್‌ ಹೈಕೋರ್ಟ್‌ ಇತ್ತೀಚೆಗೆ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಆರ್.‌ ಮಹದೇವನ್‌, ಜೆ ಸತ್ಯನಾರಾಯಣ ಪ್ರಸಾದ ಅವರಿದ್ದ ನ್ಯಾಯಪೀಠ ಈ ನಿರ್ದೇಶನ ನೀಡಿತ್ತು. ಎಂ. ಸೀತಾರಾಮನ್‌ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಲೇವಾರಿ ಮಾಡುವ ಸಂದರ್ಭದಲ್ಲಿ ಈ ತೀರ್ಪು ನೀಡಿದೆ.

ತಮಿಳುನಾಡಿನ ಆರು ಪ್ರಮುಖ ಮುರುಗಾ ದೇವಾಲಯಗಳ ಪೈಕಿ ತೂತುಕುಡಿಯ ತಿರುಚೆಂಡೂರಿನ ಅರುಲ್‌ಮಿಗು ಸುಬ್ರಮಣಿಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಂಡ್ರಾಯ್ಡ್‌ ಫೋನ್‌ ಕೊಂಡೊಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಎಂ.ಸೀತಾರಾಮನ್‌ ಆಗ್ರಹಿಸಿದ್ದರು. ಈ ವಿದ್ಯಮಾನದ ಬೆನ್ನಲ್ಲೇ ಕರ್ನಾಟಕದಲ್ಲೂ ಸಹ ಕೂಡ ಇದೇ ಬೇಡಿಕೆ ಹೆಚ್ಚಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು