AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Forecast: ಇಂದಿನಿಂದ 4 ದಿನ ರಾಜ್ಯದ ಈ ಭಾಗಗಳಲ್ಲಿ ಭಾರಿ ಮಳೆ: ಆಲಿಕಲ್ಲು ಮಳೆ , ಬಿರುಗಾಳಿಯ ಮುನ್ನೆಚ್ಚರಿಕೆ!

ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿಗೆ ಎಲ್ಲೋ ಅಲರ್ಟ್ ಹಾಗೂ ಉತ್ತರ ಒಳನಾಡಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬಿರುಗಾಳಿ, ಸಿಡಿಲು, ಆಲಿಕಲ್ಲು ಮಳೆಯ ಸಾಧ್ಯತೆ ಇದ್ದು, ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಮತ್ತು ರೈತರು ಬೆಳೆಗಳನ್ನು ರಕ್ಷಿಸಿಕೊಳ್ಳಲು ಇಲಾಖೆ ಸೂಚಿಸಿದೆ. ಮುಂದಿನ ಕೆಲವು ದಿನಗಳಲ್ಲಿ ಹವಾಮಾನದಲ್ಲಿ ಏರುಪೇರಾಗಲಿದೆ.

Weather Forecast: ಇಂದಿನಿಂದ 4 ದಿನ ರಾಜ್ಯದ ಈ ಭಾಗಗಳಲ್ಲಿ ಭಾರಿ ಮಳೆ: ಆಲಿಕಲ್ಲು ಮಳೆ , ಬಿರುಗಾಳಿಯ ಮುನ್ನೆಚ್ಚರಿಕೆ!
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 16, 2026 | 5:18 PM

Share

ಬೆಂಗಳೂರುಮ, ಮೇ,16: ರಾಜ್ಯದಲ್ಲಿ ಬಿಸಿಲಿನ ಬೇಗೆಯ ನಡುವೆಯೇ ವರುಣನ ಆರ್ಭಟ ಆರಂಭವಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆಗಳನ್ನು ಘೋಷಣೆ ಮಾಡಿದೆ.

ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 16 ರಿಂದ ಮೇ 19 ರವರೆಗೆ ಹವಾಮಾನದಲ್ಲಿ ಭಾರಿ ಏರುಪೇರಾಗಲಿದೆ. ಈ ಅವಧಿಯಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ 64.5mm ನಿಂದ 115.5mm ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋಅಲರ್ಟ್ (Yellow Alert) ಘೋಷಿಸಿದೆ.

ಇಲ್ಲಿದೆ ನೋಡಿ ಸ್ಟೋರಿ:

ಇನ್ನೊಂದೆಡೆ, ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಗುಡುಗು, ಮಿಂಚು ಮಾತ್ರವಲ್ಲದೆ ಗಂಟೆಗೆ 40-50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆ (Hailstorm) ಸಂಭವಿಸುವ ಸಾಧ್ಯತೆಯಿದೆ. ಹೀಗಾಗಿ ಉತ್ತರ ಒಳನಾಡಿನ ಭಾಗಕ್ಕೆ ಆರೆಂಜ್ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: ನೆಲಮಂಗಲ ಬಳಿ ಭೀಕರ ಅಪಘಾತ: ಮಳೆಯ ನಡುವೆ ಕ್ಯಾಂಟರ್ ವಾಹನಕ್ಕೆ ಇವಿ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು!

ಬಿರುಗಾಳಿ ಮತ್ತು ಸಿಡಿಲಿನ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಕೋರಲಾಗಿದೆ. ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಹಾಗೂ ಆಲಿಕಲ್ಲು ಮಳೆಯಿಂದ ಬೆಳೆಗಳನ್ನು ರಕ್ಷಿಸಿಕೊಳ್ಳಲು ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Sat, 16 May 26

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹವಾದ ಯುವ ಜೋಡಿ!
ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹವಾದ ಯುವ ಜೋಡಿ!