Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 5 ದಿನ ಭಾರಿ ಮಳೆ ಸಾಧ್ಯತೆ

Karnataka Rain Updates: ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 5 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 5 ದಿನ ಭಾರಿ ಮಳೆ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Follow us
|

Updated on:Apr 21, 2023 | 5:09 PM

ಬೆಂಗಳೂರು: ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 5 ದಿನ ಭಾರಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡು, ಕರಾವಳಿಯಲ್ಲಿ ಮಳೆ ಆಗಲಿದೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಐದು ದಿನ ಮಳೆ ಸಾಧ್ಯತೆಯಿದ್ದು, ಕೊಡಗು, ಚಾಮರಾಜನಗರ, ಮೈಸೂರು, ರಾಮನಗರ, ಮಂಡ್ಯ ವಿಜಯನಗರ, ಶಿವಮೊಗ್ಗ, ಹಾಸನ ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಕೋಲಾರ, ಚಿಕ್ಕಬಳ್ಳಾಪು ಸೇರಿದಂತೆ 15 ಜಿಲ್ಲೆಗಳಿಗೆ ಮಳೆಯ ಅಲರ್ಟ್​​ ಘೋಷಿಸಿದೆ. ಉತ್ತರ ಒಳನಾಡಿನ 8 ಜಿಲ್ಲೆಗಳಲ್ಲಿ 3 ದಿನ ಮಳೆಯಾಗುವ ಸಂಭವವಿದೆ. ಮತ್ತು ಕರಾವಳಿ ಜಿಲ್ಲೆಗಳಲ್ಲಿ 2 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳಿಂದ ಮುನ್ಸೂಚನೆ ನೀಡಿಲಾಗಿದೆ.

ಉತ್ತರ ಒಳನಾಡಿಗೆ ಇಂದಿನಿಂದ ಮೂರು ದಿನ ಮಳೆ ಸಾಧ್ಯತೆಯಿದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಮಳೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಕರಾವಾಳಿಗೆ ಇಂದಿನಿಂದ ಎರಡು ದಿನ ಮಳೆ ಇರಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ಬೆಂಗಳೂರಿಗೆ ಇಂದಿಂದ ಮೂರು ದಿನ ಮಳೆಯಾಗುವ ಸಾಧ್ಯಾತೆ ಇದ್ದು, ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ‌ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: Karnataka Weather: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಗುಡುಗು ಸಹಿತ ಭಾರೀ ಮಳೆ

ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ಇಂದು ಬೆಳಗಾವಿಯಲ್ಲಿ ಗಾಳಿ ಸಹಿತ ಮಳೆಯಾಗಿದ್ದು, ನಿರಂತರ ಒಂದು ಗಂಟೆಗಳ ಕಾಲ ಮಳೆಯಾಗಿದೆ. ಇತ್ತ ಹಾಸನ ಜಿಲ್ಲೆಯಲ್ಲೂ ಭಾರೀ ಮಳೆಯಾಗಿದ್ದು, ರೋಡ್ ಶೋ ನಡೆಸುತ್ತಿದ್ದ ಜೆಡಿಎಸ್​ ಕಾರ್ಯಕರ್ತರು ಮಳೆಯಲ್ಲಿ ಮಿಂದೆದ್ದರು. ಇನ್ನೊಂದೆಡೆ, ಗದಗ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಒಟ್ಟಾರೆಯಾಗಿ ಸುಡು ಬಿಸಿಲಿಗೆ ಬೆಂದಿದ್ದ ಈ ಮೂರು ಜಿಲ್ಲೆಗಳಲ್ಲಿನ ಜನರು ಮತ್ತು ಪರಿಸರವನ್ನು ವರುಣ ದೇವ ತಂಪರೆದಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:54 pm, Fri, 21 April 23

ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ