AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಿಂದ ಮನೆ ಕಳೆದುಕೊಂಡವರಿಗೆ ತಾತ್ಕಾಲಿಕ ವ್ಯವಸ್ಥೆ ಮಾಡಿ, ನಿರಾಶ್ರಿತರನ್ನು ಆರೈಕೆ ಮಾಡಿ: ಎಸ್​ಡಿಆರ್​ಎಫ್ ಸಭೆಯಲ್ಲಿ ಸೂಚನೆ

ಪರಿಹಾರ ಕಾರ್ಯಕ್ಕೆ ಸರ್ಕಾರದಿಂದ ಎಲ್ಲ ಸಹಕಾರ ನೀಡಲಾಗುವುದು. ಮಳೆ ಹಾನಿ ವರದಿ ಶೀಘ್ರವೇ ಸಲ್ಲಿಸಲು ಸಭೆಯಲ್ಲಿ ಸೂಚನೆ ನೀಡಲಾಗಿದೆ. ಎಸ್​ಡಿಆರ್​​ಎಫ್​​ ಸಭೆಯಲ್ಲಿ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.

ಮಳೆಯಿಂದ ಮನೆ ಕಳೆದುಕೊಂಡವರಿಗೆ ತಾತ್ಕಾಲಿಕ ವ್ಯವಸ್ಥೆ ಮಾಡಿ, ನಿರಾಶ್ರಿತರನ್ನು ಆರೈಕೆ ಮಾಡಿ: ಎಸ್​ಡಿಆರ್​ಎಫ್ ಸಭೆಯಲ್ಲಿ ಸೂಚನೆ
ಗೌರಿಬಿದನೂರು: ನಿರಂತರ ಮಳೆಗೆ ಕುಸಿದ ಮನೆ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 19, 2021 | 7:07 PM

Share

ಬೆಂಗಳೂರು: ಕರ್ನಾಟಕ ರಾಜ್ಯದ ಹಲವೆಡೆ ಮಳೆಯಿಂದ ಅಪಾರ ಹಾನಿ ಹಿನ್ನೆಲೆ ಜಿಲ್ಲಾಡಳಿತಗಳ ಜೊತೆ ಎಸ್​ಡಿಆರ್​​ಎಫ್​​ ಸಭೆ ಮುಕ್ತಾಯ ಆಗಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಾಗಿದೆ. ಪರಿಹಾರ ಕಾರ್ಯ ಸಮರೋಪಾದಿಯಲ್ಲಿ ಆಗಬೇಕು. ಅಧಿಕಾರಿಗಳು ಜಿಲ್ಲೆ, ತಾಲೂಕಿನಲ್ಲಿ ಅಲರ್ಟ್ ಆಗಿರಬೇಕು. ಪರಿಹಾರ ಕಾರ್ಯಕ್ಕೆ ಸರ್ಕಾರದಿಂದ ಎಲ್ಲ ಸಹಕಾರ ನೀಡಲಾಗುವುದು. ಮಳೆ ಹಾನಿ ವರದಿ ಶೀಘ್ರವೇ ಸಲ್ಲಿಸಲು ಸಭೆಯಲ್ಲಿ ಸೂಚನೆ ನೀಡಲಾಗಿದೆ. ಎಸ್​ಡಿಆರ್​​ಎಫ್​​ ಸಭೆಯಲ್ಲಿ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.

ಮನೆ ಕಳೆದುಕೊಂಡಿರುವವರಿಗೆ ತಾತ್ಕಾಲಿಕ ವ್ಯವಸ್ಥೆ ಮಾಡಿ. ಕಾಳಜಿ ಕೇಂದ್ರಗಳಲ್ಲಿ ನಿರಾಶ್ರಿತರನ್ನು ಆರೈಕೆ ಮಾಡಿ. ಯಾವುದೇ ಸಮಸ್ಯೆ ಆಗದಂತೆ ಜಿಲ್ಲೆಗಳಲ್ಲಿ ಕ್ರಮ ಕೈಗೊಳ್ಳಿ ಎಂದು ಎಸ್​ಡಿಆರ್​​ಎಫ್​​ ಸಭೆಯಲ್ಲಿ ಜಿಲ್ಲಾಡಳಿತಗಳಿಗೆ ಸೂಚನೆ ಕೊಡಲಾಗಿದೆ. ವಿಧಾನಪರಿಷತ್ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ, ಚುನಾವಣಾ ಆಯೋಗದ ಕಣ್ಗಾವಲಿನಲ್ಲಿ ಸಭೆ ನಡೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಆರ್‌. ಅಶೋಕ್, ಸಿಎಸ್​​​ ರವಿಕುಮಾರ್, ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತಿ ವಹಿಸಿದ್ದಾರೆ.

ಶನಿವಾರ GST ಗ್ರೂಪ್ ಆಫ್ ಮಿನಿಸ್ಟರ್ಸ್ ಸಭೆ ಶನಿವಾರ (ನವೆಂಬರ್ 20) ಬೆಂಗಳೂರಿನಲ್ಲಿ GST ಗ್ರೂಪ್ ಆಫ್ ಮಿನಿಸ್ಟರ್ಸ್ ಸಭೆ ನಡೆಸಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ GST ಸಭೆ ನಡೆದಿದೆ. GST ಗ್ರೂಪ್ ಆಫ್ ಮಿನಿಸ್ಟರ್ಸ್ ಅಧ್ಯಕ್ಷರಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕೊವಿಡ್ ನಂತರ ಮೊದಲ ಬಾರಿಗೆ ಭೌತಿಕವಾಗಿ ಈ ಸಭೆ ನಡೆಯಲಿದೆ. ಕೊವಿಡ್ ಆರಂಭವಾದ ಬಳಿಕ ಈವರೆಗೆ ವರ್ಚುವಲ್ ಸಭೆ ನಡೆದಿರಲಿಲ್ಲ. ಮತ್ತೆ ಮೊದಲ ಬಾರಿಗೆ ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ನಾಳೆ ಬೆಳಗ್ಗೆ 11ಕ್ಕೆ ಸಭೆ ನಡೆಯಲಿದೆ.

ಇದನ್ನೂ ಓದಿ: Karnataka Rains: ಕರ್ನಾಟಕದ ಹಲವೆಡೆ ನಿರಂತರ ಮಳೆ; ಯಾವ ಯಾವ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ರಜೆ? ವಿವರ ಇಲ್ಲಿದೆ

ಇದನ್ನೂ ಓದಿ: ನೆರೆರಾಜ್ಯ ಆಂಧ್ರಪ್ರದೇಶದಲ್ಲೂ ಭಾರಿ ಮಳೆ, ತಿರುಪತಿ ತಿಮ್ಮಪ್ಪನ ಗುಡಿಯನ್ನು ಮುಚ್ಚುವಂತೆ ಮಾಡಿದೆ ಎಡೆಬಿಡದೆ ಸುರಿಯುತ್ತಿರುವ ಮಳೆ!

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ