AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮಳೆ ಅಬ್ಬರ: ಜಿಲ್ಲೆಯ ಹಲವು ಕಡೆ ಅವಾಂತರ, ಗಣೇಶ ಹಬ್ಬದ ಸಂಭ್ರಮದಲ್ಲಿರ ಬೇಕಿದ್ದ ಜನರಿಗೆ ಜಲ ಕಂಟಕ

ಬೆಂಗಳೂರಿನ ಮಾರತ್‌ಹಳ್ಳಿಯಲ್ಲಿ ರಾಜಕಾಲುವೆ ಮುಚ್ಚಿದ್ದಕ್ಕೆ ನಡುರಸ್ತೆಗೆ ಮಳೆ ನೀರು ನುಗ್ಗಿದೆ. ಮಾರತ್‌ಹಳ್ಳಿಯ ಇಕೋ ಸ್ಪೇಸ್ ಬಳಿಯ ಮುಖ್ಯರಸ್ತೆ ಜಲಾವೃತಗೊಂಡಿದೆ. ಕೈಗೊಂಡನಹಳ್ಳಿ, ಸರ್ಜಾಪುರ ಕೆರೆಗಳ ನೀರು ರಸ್ತೆಗೆ ರಭಸವಾಗಿ ಹರಿದು ಬರುತ್ತಿದೆ.

ರಾಜ್ಯದಲ್ಲಿ ಮಳೆ ಅಬ್ಬರ: ಜಿಲ್ಲೆಯ ಹಲವು ಕಡೆ ಅವಾಂತರ, ಗಣೇಶ ಹಬ್ಬದ ಸಂಭ್ರಮದಲ್ಲಿರ ಬೇಕಿದ್ದ ಜನರಿಗೆ ಜಲ ಕಂಟಕ
ಬೆಂಗಳೂರು ಮಳೆ
TV9 Web
| Updated By: ಆಯೇಷಾ ಬಾನು|

Updated on:Aug 31, 2022 | 10:21 AM

Share

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ(Karnataka Rains). ಮಳೆಗೆ ಹಲವು ಜಿಲ್ಲೆಗಳಲ್ಲಿ ಅವಘಡಗಳು ಸಂಭವಿಸುತ್ತಿವೆ. ರಸ್ತೆಗಳು ಕರೆಯಂತಾಗಿವೆ. ಮಳೆ ನೀರು ಮನೆಗೆ ನುಗ್ಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಮನೆಗಳ ಕುಸಿತ, ಗ್ರಾಮಗಳು ಜಲಾವೃತ, ಬೆಳೆ ನಾಶ ಹೀಗೆ ವರುಣನ ಹೊಡೆತಕ್ಕೆ ಸಾಕಷ್ಟು ಅವಾಂತರಗಳಾಗಿವೆ.

ಬೆಂಗಳೂರಿನ ಮಾರತ್‌ಹಳ್ಳಿಯಲ್ಲಿ ರಾಜಕಾಲುವೆ ಮುಚ್ಚಿದ್ದಕ್ಕೆ ನಡುರಸ್ತೆಗೆ ಮಳೆ ನೀರು ನುಗ್ಗಿದೆ. ಮಾರತ್‌ಹಳ್ಳಿಯ ಇಕೋ ಸ್ಪೇಸ್ ಬಳಿಯ ಮುಖ್ಯರಸ್ತೆ ಜಲಾವೃತಗೊಂಡಿದೆ. ಕೈಗೊಂಡನಹಳ್ಳಿ, ಸರ್ಜಾಪುರ ಕೆರೆಗಳ ನೀರು ರಸ್ತೆಗೆ ರಭಸವಾಗಿ ಹರಿದು ಬರುತ್ತಿದೆ. ಮಾರತ್‌ಹಳ್ಳಿ-ಸರ್ಜಾಪುರ ಔಟರ್‌ ರಿಂಗ್‌ರೋಡ್ ಜಲಾವೃತವಾಗಿದೆ.

ಕೆರೆಗಳು ಭರ್ತಿಯಾಗಿ ಬೆಳೆ ಹಾನಿ

ಇನ್ನು ದೇವನಹಳ್ಳಿಯಲ್ಲೂ ಇದೇ ರೀರಿಯ ಪರಿಸ್ಥಿತಿ ಇದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ದಂಡಿಗಾನಹಳ್ಳಿ ಗ್ರಾಮದಲ್ಲಿ ಕಳೆದ ಎರಡು‌ ದಿನದಿಂದ ಬಿದ್ದ ಭಾರಿ ಮಳೆಗೆ ಕೆರೆಗಳು ಭರ್ತಿಯಾಗಿ ಬೆಳೆ ಹಾನಿಯಾಗಿದೆ. ಗದ್ದೆಯಲ್ಲಿ ನೀರು ನಿಂತಿದೆ. ದ್ರಾಕ್ಷಿ, ಜೋಳ, ರಾಗಿ ಸೇರಿದಂತೆ ಹಲವು ಬೆಳೆಗಳು ಮಳೆ ನೀರಿನಿಂದ ಜಲಾವೃತವಾಗಿದ್ದು ಇದನ್ನು ರೈತ ತನ್ನ ಡ್ರೋನ್ ಕ್ಯಾಮಾರದಲ್ಲಿ ಸೆರೆಹಿಡಿದಿದ್ದಾನೆ.

ಪೊಲೀಸ್ ಬಿಗಿ ಭದ್ರತೆ ಒದಗಿಸುವಂತೆ ಸಾರ್ವಜನಿಕರ ಮನವಿ

ನಿರಂತರ ಮಳೆಯಿಂದಾಗಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗುಂಡಾಲ್ ಜಲಾಶಯ ಭರ್ತಿಯಾಗಿದೆ. ತುಂಬಿ ಹರಿಯುತ್ತಿರುವ ಡ್ಯಾಂನಲ್ಲಿ ಯುವಕರು ದುಸ್ಸಾಹಸ ಎಸಗುತ್ತಿದ್ದಾರೆ. ಜಲ ವೈಭವ ಕಣ್ತುಂಬಿಕೊಳ್ಳುವ ನೆಪದಲ್ಲಿ ಅಪಾಯಕ್ಕೆ ಆಹ್ವಾನ ನೀಡುತ್ತಿದ್ದಾರೆ. ಈಜಲು ಹೋಗಿ ಪ್ರಾಣ ಪಣಕ್ಕಿಡುತ್ತಿದ್ದಾರೆ. ಸ್ವಲ್ಪ ಎಚ್ಚರ ತಪ್ಪಿದರೂ ಜೀವಕ್ಕೆ ಸಂಚಕಾರ ಬರುವ ಸಾಧ್ಯತೆ ಇದೆ. ಹೀಗಾಗಿ ಇಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

ಮಳೆಗೆ ಕೋಲಾರದಲ್ಲಿ ಅಪಾರ ಹಾನಿ

ಕೋಲಾರದಲ್ಲಿ ನಿರಂತರ ಮಳೆಯಿಂದ ಹಲವೆಡೆ ಅವಾಂತರಗಳಾಗಿವೆ. ಹೋಳೂರು ಗ್ರಾಮದ ಬಳಿ ಹತ್ತಾರು ಎಕರೆ ಜಮೀನು ಮುಳುಗಿದೆ. ಹೋಳೂರು-ಬೆಳ್ಳಂಬರಿ ಗ್ರಾಮಕ್ಕೆ ರಸ್ತೆ ಸಂಚಾರ ಬಂದ್ ಆಗಿದೆ. ಅವೈಜ್ಞಾನಿಕ ಚೆಕ್​ಡ್ಯಾಂ ನಿರ್ಮಾಣದಿಂದ ಜನರು ಪರದಾಡುವಂತಾಗಿದೆ. ಮುದುವಾಡಿ ಕೆರೆ ತುಂಬಿ ಕೋಡಿ ಹರಿಯುತ್ತಿದೆ. ಒಂದು ಸಾವಿರ ಎಕರೆಗೂ ಹೆಚ್ಚಿನ ವಿಸ್ತೀರ್ಣ ಹೊಂದಿರುವ, ಕೋಲಾರ ಜಿಲ್ಲೆಯ ದೊಡ್ಡಕೆರೆ ಎಂಬ ಹೆಗ್ಗಳಿಕೆ ಹೊಂದಿರುವ ಮುದುವಾಡಿ ಕೆರೆ, ಶ್ರೀನಿವಾಸಪುರ ರಸ್ತೆಯಲ್ಲಿ ತುಂಬಿ ಹರಿಯುತ್ತಿದೆ. ಕೆರೆಗೆ ಒಳಹರಿವು ಹೆಚ್ಚಾಗಿ ನೀರಿನ ರಭಸ ಜೋರಾಗಿರುವ ಕಾರಣ ಯಾರೂ ನೀರಿಗೆ ಇಳಿಯಂದತೆ ಬ್ಯಾರಿಕೇಟ್ ಹಾಕಿ ಎಚ್ಚರಿಕೆ ವಹಿಸಲಾಗಿದೆ.

ಗಣೇಶ ಹಬ್ಬದ ದಿನವೇ ಸಂಕಷ್ಟ

ದಾವಣಗೆರೆಯಲ್ಲಿ ಗಣೇಶನ ಪ್ರವೇಶ ಮಾಡಲು ಇಂದು ಸಿದ್ಧತೆ ಮಾಡಿಕೊಂಡಿದ್ದ ಮನೆ ತುಂಬೆಲ್ಲಾ ಮಳೆ ನೀರು ಆವರಿಸಿದೆ. ಜಗಳೂರಿನ ಪ್ರತಿಷ್ಠಿತ ಬಡಾವಣೆ ಜನಕ್ಕೆ ಗಣೇಶ ಹಬ್ಬದ ದಿನವೇ ಸಂಕಷ್ಟ ಎದುರಾಗಿದೆ. ಕೃಷ್ಣ ದೇವೇಗೌಡ ಹಾಗೂ ರಂಗನಾಥ ಬಡಾವಣೆಯ ನೂರಾರು ಮನೆಗಳಿಗೆ ನೀರು ನುಗ್ಗಿದೆ. ಸಂಕಷ್ಟದಲ್ಲಿರುವ ಜನ ಪುರ ಸಭೆಯ ಆಧಿಕಾರಿಗಳಿಗೆ ಕರೆ ಮಾಡುತ್ತಿದ್ದು ಅಧಿಕಾರಿಗಳು ಫೋನ್ ತೆಗೆಯುತ್ತಿಲ್ಲ. ಹೀಗಾಗಿ ಜನ ಆಕ್ರೋಶ ಹೊರ ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:21 am, Wed, 31 August 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ