AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬೆಂಗಳೂರಿನಲ್ಲಿಂದು ಗುಡುಗು ಸಹಿತ ಮಳೆ ಸಾಧ್ಯತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ದಿನ ಮಳೆ

ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ.

Karnataka Rains: ಬೆಂಗಳೂರಿನಲ್ಲಿಂದು ಗುಡುಗು ಸಹಿತ ಮಳೆ ಸಾಧ್ಯತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ದಿನ ಮಳೆ
ಬೆಂಗಳೂರಿನಲ್ಲಿ ಮಳೆ (ಸಂಗ್ರಹ ಚಿತ್ರ)
ಆಯೇಷಾ ಬಾನು
ಆಯೇಷಾ ಬಾನು|

Updated on:May 20, 2023 | 7:41 AM

Share

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮಳೆ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ(Bengaluru Rain). ನಗರದಲ್ಲಿಂದು ಮೋಡಕವಿದ ವಾತಾವರಣ ಇರಲಿದ್ದು ಮಧ್ಯಾಹ್ನದ ನಂತರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ದಿನಗಳ ಕಾಲ ಮಳೆಯಾಗಲಿದ್ದು ದಕ್ಷಿಣ ಒಳನಾಡಿನಲ್ಲಿ ಇಂದು, ನಾಳೆ ಮಳೆಯಾಗುವ ಸಾಧ್ಯತೆ ಇದೆ ಇಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ಮತ್ತೊಂದೆಡೆ ಇಂದು ಕರ್ನಾಟಕ ಸಿಎಂ ಆಗಿ ಸಿದ್ದರಾಮಯ್ಯ(Siddaramaiah), ಡಿಸಿಎಂ ಆಗಿ ಡಿಕೆ ಶಿವಕುಮಾರ್(DK Shivakumar) ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ.

ಇಂದು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ. ಮೇ 22ರ ನಂತರ ಮಳೆಯ ತೀವ್ರತೆ ಹೆಚ್ಚಲಿದೆ. ಮೇ 23ರ ವೇಳೆಗೆ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಾಳೆ ಮಳೆ ಸಾಧ್ಯತೆ; ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಅಡ್ಡಿಯ ಆತಂಕ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಮಂಡ್ಯ, ಮೈಸೂರು, ಹಾಸನ, ರಾಮನಗರ, ಚಿಕ್ಕಿಬಳ್ಳಾಪುರ, ಕೋಲಾರ, ಚಾಮರಾಜನಗರ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಮೊದಲ ಮೂರು ದಿನ ಸಾಧಾರಣ ಮಳೆ ಆರಂಭವಾಗಲಿದೆ. ಮುಂದಿನ ಐದು ದಿನಗಳ ಪೈಕಿ ಕೊನೆಯ ಎರಡು ದಿನ ಈ ಒಳನಾಡಿನ ಜಿಲ್ಲೆಗಳಿಗೆ ಕೊನೆಯ ಎರಡು ದಿನ ವ್ಯಾಪಕ ಮಳೆ ಬರುವ ಸಾಧ್ಯತೆ ಇದೆ. ಈ ವೇಳೆ ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದ ಜಿಲ್ಲೆಗಳಲ್ಲಿ ಮಳೆ ಸುರಿಸುವ ಮಾರುತಗಳು ಸಕ್ರಿಯವಾಗಿರಲಿವೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:38 am, Sat, 20 May 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ