AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಬಸ್ ಚಾಲಕರಿಂದ ಅಪಘಾತ ಹೆಚ್ಚಳ: ನಾಲ್ಕು ನಿಗಮಗಳಿಗೆ ಖಡಕ್ ವಾರ್ನಿಂಗ್​, ಮುಲಾಜಿಲ್ಲದೆ ಕ್ರಮಕ್ಕೆ ಸೂಚನೆ

ಕರ್ನಾಟಕದಲ್ಲಿ ಸರ್ಕಾರಿ ಬಸ್ ಚಾಲಕರಿಂದ ಪದೇ ಪದೇ ಅಪಘಾತಗಳು ಉಂಟಾಗುತ್ತಿದ್ದು, ಇತ್ತೀಚೆಗೆ ಈ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಲ್ಕು ನಿಗಮಗಳಿಗೂ ಖಡಕ್ ವಾರ್ನಿಂಗ್ ನೀಡಿದ್ದು, ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ.

ಸರ್ಕಾರಿ ಬಸ್ ಚಾಲಕರಿಂದ ಅಪಘಾತ ಹೆಚ್ಚಳ: ನಾಲ್ಕು ನಿಗಮಗಳಿಗೆ ಖಡಕ್ ವಾರ್ನಿಂಗ್​, ಮುಲಾಜಿಲ್ಲದೆ ಕ್ರಮಕ್ಕೆ ಸೂಚನೆ
ಕೆಎಸ್​ಆರ್​ಟಿಸಿ, ಬಿಎಂಟಿಸಿ
ಕಿರಣ್​ ಸೂರ್ಯ
| Edited By: |

Updated on: Jun 23, 2025 | 8:24 AM

Share

ಬೆಂಗಳೂರು, ಜೂನ್ 23: ಇತ್ತೀಚಿನ ವರ್ಷಗಳಲ್ಲಿ ಕೆಎಸ್ಆರ್​ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಸೇರಿದಂತೆ ನಾಲ್ಕು ನಿಗಮದ ಬಸ್ ಚಾಲಕರಿಂದ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಕೆಲವೊಂದು ಪ್ರಕರಣಗಳಲ್ಲಿ ವಾಹನಗಳಿಂದ ಸಮಸ್ಯೆಯಾಗಿ ಅಪಘಾತವಾದರೆ, ಬಹುತೇಕ ಪ್ರಕರಣಗಳಲ್ಲಿ ಚಾಲಕರ ನಿರ್ಲಕ್ಷ್ಯದಿಂದ ಅಪಘಾತವಾಗಿ ಸಾರ್ವಜನಿಕರು ಪ್ರಾಣ ಕಳೆದುಕೊಂಡಿರುವ ಅನೇಕ ನಿದರ್ಶನಗಳಿವೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲೇಬೇಕು ಅನ್ನುವ ಕಾರಣಕ್ಕೆ ಖುದ್ದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಈ ಬಾರಿ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.

ಮುಲಾಜಿಲ್ಲದೆ ಚಾಲಕರ ವಿರುದ್ಧ ಕ್ರಮಕ್ಕೆ ಸೂಚನೆ

ಬಿಎಂಟಿಸಿ, ಕೆಎಸ್ಆರ್​​ಟಿಸಿ, ಕಲ್ಯಾಣ ಕರ್ನಾಟಕ, ವಾಯುವ್ಯ ಕರ್ನಾಟಕ ಸೇರಿದಂತೆ ನಾಲ್ಕು ನಿಗಮಗಳಿಗೆ ಅನ್ವಯವಾಗುವಂತೆಯೇ ಕ್ರಮವಹಿಸಲು ಅಧಿಕಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ. ಯಾವ ಸರ್ಕಾರಿ ಬಸ್ ಚಾಲಕರು ಅಜಾಗರೂಕತೆಯಿಂದ ಚಾಲನೆ ಮಾಡಿ ತೊಂದರೆ ಉಂಟು ಮಾಡುತ್ತಾರೋ ಅಂತಹ ಚಾಲಕರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮಕ್ಕೆ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಡ್ಯಾನ್ಸ್ ಕಾರ್ಯಕ್ರಮದ ಹೆಸರಲ್ಲಿ ವಂಚನೆ: ಸಾವಿರಾರು ರೂ ಪಡೆದು ಅವಕಾಶ ನೀಡಿದ ಮಹಿಳೆ

ಇದನ್ನೂ ಓದಿ
Image
ಪ್ರತಿದಿನ ಬೆಂಗಳೂರಿನಲ್ಲಿ 2500 ಹೊಸ ವಾಹನ ನೋಂದಣಿ!
Image
ಡ್ಯಾನ್ಸ್ ಕಾರ್ಯಕ್ರಮದ ಹೆಸರಲ್ಲಿ ವಂಚನೆ: ಹಣ ಪಡೆದು ಅವಕಾಶ ನೀಡದ ಮಹಿಳೆ
Image
ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಒಂದು ವಾರ ಪವರ್ ಕಟ್, ಇಲ್ಲಿದೆ ವಿವರ
Image
ಹಾಸನ: ಹೃದಯಾಘಾತದಿಂದ ಮತ್ತಿಬ್ಬರು ಸಾವು, ಒಂದೇ ತಿಂಗಳಲ್ಲಿ 12 ಜನ ಬಲಿ

ಅಷ್ಟೇ ಅಲ್ಲ, ಯಾವ ಚಾಲಕರು ಈ ಹಿಂದೆ ಅಜಾಗರೂಕತೆಯಿಂದ ಚಾಲನೆ ಮಾಡಿ ಸಮಸ್ಯೆ ಉಂಟು ಮಾಡಿದ್ದಾರೋ ಅಂತಹ ಚಾಲಕರ ಲೀಸ್ಟ್ ರೆಡಿ ಮಾಡಿ, ಮತ್ತೊಮ್ಮೆ ಅಂತಹ ಚಾಲಕರು ಅದೇ ತಪ್ಪು ಮಾಡಿದಲ್ಲಿ ಮುಲಾಜಿಲ್ಲದೇ ವಜಾ ಮಾಡುವಂತೆ ಸೂಚನೆ ಕೊಟ್ಟಿದ್ದಾರೆ. ಈ ಸಂಬಂಧ ಈಗಾಗಲೇ ನಾಲ್ಕು ಸಾರಿಗೆ ನಿಮಗದ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಶೀಘ್ರದಲ್ಲೇ ವಿಚಾರ ಸಂಬಂಧ ಆಕ್ಟೀವ್ ಆಗುವಂತೆ ತಿಳಿಸಿದ್ದಾರೆ.

ಇನ್ನು ಖಾಯಂ ನೌಕರರನ್ನ ಹೊರತು ಪಡಿಸಿ ಅನೇಕ ಗುತ್ತಿಗೆ ನೌಕರರು ಕೂಡ ಗುತ್ತಿಗೆ ಕಂಪನಿಗಳ ಮೂಲಕ ಸಾರಿಗೆ ಬಸ್​ಗಳಲ್ಲಿ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಎಲ್ಲರನ್ನು ಖಾಸಗಿ ಕಂಪನಿಗಳೇ ನಿರ್ವಹಣೆ ಮಾಡುತ್ತಿದ್ದರು, ಈ ಚಾಲಕರು ಮಾಡುವ ತಪ್ಪಿನಿಂದ ನಿಗಮಗಳಿಗೆ ಕೆಟ್ಟ ಹೆಸರು ಬರುತ್ತಿರುವ ಬಗ್ಗೆ ಕೂಡ ಸಚಿವರು ಗಂಭೀರವಾಗಿ ಪರಿಗಣಿಸಿದ್ದಾರೆ. ಅದರಲ್ಲೂ ಬಿಎಂಟಿಸಿ ಗುತ್ತಿಗೆ ಚಾಲಕರಿಂದಲೇ ಅತೀ ಹೆಚ್ಚು ಸಮಸ್ಯೆಗಳು ಉಂಟಾಗುತ್ತಿವೆ.

ಇದನನ್ನೂ ಓದಿ: ಪ್ರತಿದಿನ ಬೆಂಗಳೂರಿನಲ್ಲಿ 2500 ಹೊಸ ವಾಹನ ನೋಂದಣಿ! ಟ್ರಾಫಿಕ್, ವಾಯುಮಾಲಿನ್ಯದಲ್ಲಿ ದೆಹಲಿಯನ್ನೂ ಮೀರಿಸುವ ಆತಂಕ

ಸದ್ಯ ಬಿಎಂಟಿಸಿ ಚಾಲಕರಿಗಾಗಿ ಮೂರು ಸಂಸ್ಥೆಗಳಿಗೆ ಟೆಂಡರ್ ನೀಡಲಾಗಿದೆ. ಮೂರು ಗುತ್ತಿಗೆ ಕಂಪನಿಗಳಿಗೂ ಈಗಾಗಲೇ ಸೂಚನೆ ನೀಡಲಾಗಿದ್ದು, ಈ ಹಿಂದೆ ಎರಡಕ್ಕಿಂತ ಹೆಚ್ಚು ಬಾರಿ ಅಜಾಗರೂಕ ಚಾಲನೆ ಮಾಡಿರುವ ಚಾಲಕರನ್ನ ಗುತ್ತಿಗೆಯಿಂದ ಕೈ ಬಿಡಲು ಸೂಚಿಸಲಾಗಿದ್ದು, ಮುಂದೆಯೂ ಇಂತಹ ಚಾಲಕರ ವಿರುದ್ಧ ಎಚ್ಚರ ವಹಿಸಿ ತಪ್ಪು ಮಾಡಿದ್ದಲ್ಲಿ, ಕಠಿಣ ಕ್ರಮಕ್ಕೂ ಸೂಚನೆ ನೀಡಿದ್ದಾರೆ. ಈ ಬಗ್ಗೆ ರಾಮು ಎಂಬ ಪ್ರಯಾಣಿಕರು ಪ್ರತಿಕ್ರಿಯಿಸಿ, ಸಾರಿಗೆ ಸಚಿವರ ನಿರ್ಧಾರವನ್ನು ಸ್ವಾಗತಿಸಿದರು.

ಒಟ್ಟಿನಲ್ಲಿ ಇನ್ಮುಂದೆ ಸರ್ಕಾರಿ ಬಸ್ ಚಾಲಕರು ಇನ್ನಷ್ಟು ಎಚ್ಚರ ವಹಿಸಿ ಚಾಲನೆ ಮಾಡುವುದು ಸೂಕ್ತ. ಇಲ್ಲದಿದ್ದರೆ, ಯಾವುದೋ ಒತ್ತಡದಲ್ಲಿ ಗಾಡಿ ಓಡಿಸಿ, ಅಮಾಯಕರ ಜೀವಕ್ಕೆ ತೊಂದರೆ ಮಾಡಿದ್ದಲ್ಲಿ ಕೆಲಸ ಕಳೆದುಕೊಳ್ಳುವ ಜೊತೆಗೆ ಕಠಿಣ ಕ್ರಮಗಳನ್ನ ಕೂಡ ಎದುರಿಸಬೇಕಾಗುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ