ಮಕ್ಕಳಿಗೆ ಲಸಿಕೆ; ದೇಶದಲ್ಲಿ ಕರ್ನಾಟಕ 3ನೇ ಸ್ಥಾನ; ಡಾ. ಕೆ ಸುಧಾಕರ್ ಮಾಹಿತಿ

ಮಹಾರಾಷ್ಟ್ರ ಸೇರಿದಂತೆ ಅನೇಕ ಕಡೆ ಏನ್ ಆಗಿದೆ ಅಂತ ಎಲ್ಲರಿಗೂ ಗೊತ್ತು. ಅನೇಕ ವರ್ಷ ಅವರು ಅಧಿಕಾರ ನಡೆಸಿದ್ದಾರೆ. ಇಂತಹ ಸಮಯದಲ್ಲಿ ಹೇಗೆ ನಡೆದುಕೊಳ್ಳಬೇಕು ಅಂತ ಅವರು ಅರ್ಥ ಮಾಡಕೊಳ್ಳಬೇಕು.

ಮಕ್ಕಳಿಗೆ ಲಸಿಕೆ; ದೇಶದಲ್ಲಿ ಕರ್ನಾಟಕ 3ನೇ ಸ್ಥಾನ; ಡಾ. ಕೆ ಸುಧಾಕರ್ ಮಾಹಿತಿ
ಪ್ರಾತಿನಿಧಿಕ ಚಿತ್ರ
Follow us
| Updated By: sandhya thejappa

Updated on:Jan 05, 2022 | 11:35 AM

ಬೆಂಗಳೂರು: ಕೊರೊನಾ ಸೋಂಕಿನ ವಿರುದ್ಧ ಹೋರಾಡಲು 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ. ಕೆ ಸುಧಾಕರ್, 15-18 ವಯಸ್ಸಿನ 3.50 ಲಕ್ಷ ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ಮಕ್ಕಳಿಗೆ ಲಸಿಕೆ ಹಾಕುವುದರಲ್ಲಿ ದೇಶದಲ್ಲಿ 3ನೇ ಸ್ಥಾನದಲ್ಲಿದ್ದೇವೆ. ರಾಜ್ಯದಲ್ಲಿ ಈಗಾಗಲೇ ಶೇ.25ರಷ್ಟು ಮಕ್ಕಳಿಗೆ ಲಸಿಕೆ ನೀಡಿದ್ದೇವೆ. ಮೊದಲ ಡೋಸ್ ಪಡೆದ 28 ದಿನಗಳ ನಂತರ 2ನೇ ಡೋಸ್ ನೀಡಲಾಗುತ್ತದೆ ಅಂತ ತಿಳಿಸಿದ್ದಾರೆ.

ಮುಂದುವರಿದು ಮಾತನಾಡಿದ ಸುಧಾಕರ್, ಒಮಿಕ್ರಾನ್ ಬಗ್ಗೆ ಯಾವುದೇ ಆತಂಕ ಬೇಡ. ಎರಡು ಡೋಸ್ ಕೊವಿಡ್ ಲಸಿಕೆ ಪಡೆದರೆ ಪರಿಣಾಮ ಕಡಿಮೆ. ಕೊರೊನಾ ಮೂರನೇ ಅಲೆ ದೀರ್ಘ ಕಾಲ ಇರುವುದಿಲ್ಲ. ಒಮಿಕ್ರಾನ್​ನಿಂದ ಶ್ವಾಸಕೋಶಕ್ಕೆ ತೊಂದರೆಯಾಗಲ್ಲ ಎಂದು ಹೇಳಿದರು.

ನಿನ್ನೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದೇವೆ. ಜನರಿಗೆ ಮನವಿ ಮಾಡುತ್ತೇನೆ. 4-6 ವಾರಗಳು ಹೆಚ್ಚು ಸೋಂಕು ಹರಡುತ್ತದೆ. ಈ ಅಲೆ ದೀರ್ಘ ಕಾಲ ಇರುವುದಿಲ್ಲ. ವೇಗವಾಗಿ ಹರಡುತ್ತದೆ ಮತ್ತು ಬೇಗ ಮುಕ್ತಾಯ ಆಗುತ್ತದೆ. ಹೀಗಾಗಿ ಕನಿಷ್ಠ 4-6 ವಾರ ಜನ ಎಚ್ಚರಿಕೆವಹಿಸಬೇಕು. ಕೊರೊನಾ ಬಂದರು ಯಾರು ಆತಂಕ ಪಡುವುದು ಬೇಡ. ಓಮಿಕ್ರಾನ್ ಶ್ವಾಸಕೋಶಕ್ಕೆ ಹೋಗುವುದು ಕಡಿಮೆ. ಗಂಟಲಲ್ಲಿ ಮಾತ್ರ ಇರುತ್ತದೆ. ಹೀಗಾಗಿ ಯಾರು ಆತಂಕ ಪಡಬೇಕಿಲ್ಲ ಅಂತ ಸಚಿವರು ತಿಳಿಸಿದ್ದಾರೆ.

ಕೊರೊನಾ ವಾರಿಯರ್ಸ್​ಗೆ 3ನೇ ಡೋಸ್ ಲಸಿಕೆ ಕೊಡುತ್ತೇವೆ. ಫ್ರಂಟ್ ಲೈನ್ ವಾರಿಯರ್ಸ್​ಗೂ 3 ನೇ ಡೋಸ್ ಲಸಿಕೆ ಕೊಡುತ್ತೇವೆ ಎಂದು ತಿಳಿಸಿದ ಸುಧಾಕರ್, ಜನರು, ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳ ಸಹಕಾರ ಮುಖ್ಯ. ಆರೋಗ್ಯದ ತುರ್ತು ಪರಿಸ್ಥಿತಿ ಇರುವುದರಿಂದ ಜನರು, ರಾಜಕೀಯ ಪಕ್ಷಗಳು ಸಹಕಾರ ಕೊಡಬೇಕು. ಕಾಂಗ್ರೆಸ್​ಗೆ ಜನರ ಹಿತ ಕಾಪಾಡುವ ಮನಸ್ಸು ಇದೆ ಅಂತ ಭಾವಿಸುತ್ತೇನೆ. ಹೀಗಾಗಿ ಪಾದಯಾತ್ರೆ ಮಾಡಬೇಕಾ ಅಂತ ಯೋಚನೆ ಮಾಡಲಿ ಎಂದರು.

ಮಹಾರಾಷ್ಟ್ರ ಸೇರಿದಂತೆ ಅನೇಕ ಕಡೆ ಏನ್ ಆಗಿದೆ ಅಂತ ಎಲ್ಲರಿಗೂ ಗೊತ್ತು. ಅನೇಕ ವರ್ಷ ಅವರು ಅಧಿಕಾರ ನಡೆಸಿದ್ದಾರೆ. ಇಂತಹ ಸಮಯದಲ್ಲಿ ಹೇಗೆ ನಡೆದುಕೊಳ್ಳಬೇಕು ಅಂತ ಅವರು ಅರ್ಥ ಮಾಡಕೊಳ್ಳಬೇಕು. ಜನರು ಎಲ್ಲಾ ನೋಡುತ್ತಿದ್ದಾರೆ. ಎಲ್ಲವನ್ನು ಜನ ಅರ್ಥ ಮಾಡಿಕೊಳ್ಳುತ್ತಾರೆ. ಸಿಎಂ, ಮಂತ್ರಿ ಆದವರು ಅ ಪಕ್ಷದಲ್ಲಿ ಇದ್ದಾರೆ. ಅವರು ಹಠ ಮುಂದುವರಿಸಿದರೆ ಕಾನೂನು ಪ್ರಕಾರ ಕ್ರಮ ಆಗುತ್ತೆ ಅಂತ ಹೇಳಿದ್ದಾರೆ.

ಇದನ್ನೂ ಓದಿ

ಪಂಜಾಬ್‌ನಲ್ಲಿ ಇಂದು ₹ 42,750 ಕೋಟಿ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

‘ರಾಜಕೀಯ ದುರುಪಯೋಗಕ್ಕೆ ಲಾಕ್​ಡೌನ್ ಬೇಡ’; ದುನಿಯಾ ವಿಜಯ್​ ಮನವಿ

Published On - 11:32 am, Wed, 5 January 22

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ