AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೆ ಲಸಿಕೆ; ದೇಶದಲ್ಲಿ ಕರ್ನಾಟಕ 3ನೇ ಸ್ಥಾನ; ಡಾ. ಕೆ ಸುಧಾಕರ್ ಮಾಹಿತಿ

ಮಹಾರಾಷ್ಟ್ರ ಸೇರಿದಂತೆ ಅನೇಕ ಕಡೆ ಏನ್ ಆಗಿದೆ ಅಂತ ಎಲ್ಲರಿಗೂ ಗೊತ್ತು. ಅನೇಕ ವರ್ಷ ಅವರು ಅಧಿಕಾರ ನಡೆಸಿದ್ದಾರೆ. ಇಂತಹ ಸಮಯದಲ್ಲಿ ಹೇಗೆ ನಡೆದುಕೊಳ್ಳಬೇಕು ಅಂತ ಅವರು ಅರ್ಥ ಮಾಡಕೊಳ್ಳಬೇಕು.

ಮಕ್ಕಳಿಗೆ ಲಸಿಕೆ; ದೇಶದಲ್ಲಿ ಕರ್ನಾಟಕ 3ನೇ ಸ್ಥಾನ; ಡಾ. ಕೆ ಸುಧಾಕರ್ ಮಾಹಿತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 05, 2022 | 11:35 AM

Share

ಬೆಂಗಳೂರು: ಕೊರೊನಾ ಸೋಂಕಿನ ವಿರುದ್ಧ ಹೋರಾಡಲು 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ. ಕೆ ಸುಧಾಕರ್, 15-18 ವಯಸ್ಸಿನ 3.50 ಲಕ್ಷ ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ಮಕ್ಕಳಿಗೆ ಲಸಿಕೆ ಹಾಕುವುದರಲ್ಲಿ ದೇಶದಲ್ಲಿ 3ನೇ ಸ್ಥಾನದಲ್ಲಿದ್ದೇವೆ. ರಾಜ್ಯದಲ್ಲಿ ಈಗಾಗಲೇ ಶೇ.25ರಷ್ಟು ಮಕ್ಕಳಿಗೆ ಲಸಿಕೆ ನೀಡಿದ್ದೇವೆ. ಮೊದಲ ಡೋಸ್ ಪಡೆದ 28 ದಿನಗಳ ನಂತರ 2ನೇ ಡೋಸ್ ನೀಡಲಾಗುತ್ತದೆ ಅಂತ ತಿಳಿಸಿದ್ದಾರೆ.

ಮುಂದುವರಿದು ಮಾತನಾಡಿದ ಸುಧಾಕರ್, ಒಮಿಕ್ರಾನ್ ಬಗ್ಗೆ ಯಾವುದೇ ಆತಂಕ ಬೇಡ. ಎರಡು ಡೋಸ್ ಕೊವಿಡ್ ಲಸಿಕೆ ಪಡೆದರೆ ಪರಿಣಾಮ ಕಡಿಮೆ. ಕೊರೊನಾ ಮೂರನೇ ಅಲೆ ದೀರ್ಘ ಕಾಲ ಇರುವುದಿಲ್ಲ. ಒಮಿಕ್ರಾನ್​ನಿಂದ ಶ್ವಾಸಕೋಶಕ್ಕೆ ತೊಂದರೆಯಾಗಲ್ಲ ಎಂದು ಹೇಳಿದರು.

ನಿನ್ನೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದೇವೆ. ಜನರಿಗೆ ಮನವಿ ಮಾಡುತ್ತೇನೆ. 4-6 ವಾರಗಳು ಹೆಚ್ಚು ಸೋಂಕು ಹರಡುತ್ತದೆ. ಈ ಅಲೆ ದೀರ್ಘ ಕಾಲ ಇರುವುದಿಲ್ಲ. ವೇಗವಾಗಿ ಹರಡುತ್ತದೆ ಮತ್ತು ಬೇಗ ಮುಕ್ತಾಯ ಆಗುತ್ತದೆ. ಹೀಗಾಗಿ ಕನಿಷ್ಠ 4-6 ವಾರ ಜನ ಎಚ್ಚರಿಕೆವಹಿಸಬೇಕು. ಕೊರೊನಾ ಬಂದರು ಯಾರು ಆತಂಕ ಪಡುವುದು ಬೇಡ. ಓಮಿಕ್ರಾನ್ ಶ್ವಾಸಕೋಶಕ್ಕೆ ಹೋಗುವುದು ಕಡಿಮೆ. ಗಂಟಲಲ್ಲಿ ಮಾತ್ರ ಇರುತ್ತದೆ. ಹೀಗಾಗಿ ಯಾರು ಆತಂಕ ಪಡಬೇಕಿಲ್ಲ ಅಂತ ಸಚಿವರು ತಿಳಿಸಿದ್ದಾರೆ.

ಕೊರೊನಾ ವಾರಿಯರ್ಸ್​ಗೆ 3ನೇ ಡೋಸ್ ಲಸಿಕೆ ಕೊಡುತ್ತೇವೆ. ಫ್ರಂಟ್ ಲೈನ್ ವಾರಿಯರ್ಸ್​ಗೂ 3 ನೇ ಡೋಸ್ ಲಸಿಕೆ ಕೊಡುತ್ತೇವೆ ಎಂದು ತಿಳಿಸಿದ ಸುಧಾಕರ್, ಜನರು, ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳ ಸಹಕಾರ ಮುಖ್ಯ. ಆರೋಗ್ಯದ ತುರ್ತು ಪರಿಸ್ಥಿತಿ ಇರುವುದರಿಂದ ಜನರು, ರಾಜಕೀಯ ಪಕ್ಷಗಳು ಸಹಕಾರ ಕೊಡಬೇಕು. ಕಾಂಗ್ರೆಸ್​ಗೆ ಜನರ ಹಿತ ಕಾಪಾಡುವ ಮನಸ್ಸು ಇದೆ ಅಂತ ಭಾವಿಸುತ್ತೇನೆ. ಹೀಗಾಗಿ ಪಾದಯಾತ್ರೆ ಮಾಡಬೇಕಾ ಅಂತ ಯೋಚನೆ ಮಾಡಲಿ ಎಂದರು.

ಮಹಾರಾಷ್ಟ್ರ ಸೇರಿದಂತೆ ಅನೇಕ ಕಡೆ ಏನ್ ಆಗಿದೆ ಅಂತ ಎಲ್ಲರಿಗೂ ಗೊತ್ತು. ಅನೇಕ ವರ್ಷ ಅವರು ಅಧಿಕಾರ ನಡೆಸಿದ್ದಾರೆ. ಇಂತಹ ಸಮಯದಲ್ಲಿ ಹೇಗೆ ನಡೆದುಕೊಳ್ಳಬೇಕು ಅಂತ ಅವರು ಅರ್ಥ ಮಾಡಕೊಳ್ಳಬೇಕು. ಜನರು ಎಲ್ಲಾ ನೋಡುತ್ತಿದ್ದಾರೆ. ಎಲ್ಲವನ್ನು ಜನ ಅರ್ಥ ಮಾಡಿಕೊಳ್ಳುತ್ತಾರೆ. ಸಿಎಂ, ಮಂತ್ರಿ ಆದವರು ಅ ಪಕ್ಷದಲ್ಲಿ ಇದ್ದಾರೆ. ಅವರು ಹಠ ಮುಂದುವರಿಸಿದರೆ ಕಾನೂನು ಪ್ರಕಾರ ಕ್ರಮ ಆಗುತ್ತೆ ಅಂತ ಹೇಳಿದ್ದಾರೆ.

ಇದನ್ನೂ ಓದಿ

ಪಂಜಾಬ್‌ನಲ್ಲಿ ಇಂದು ₹ 42,750 ಕೋಟಿ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

‘ರಾಜಕೀಯ ದುರುಪಯೋಗಕ್ಕೆ ಲಾಕ್​ಡೌನ್ ಬೇಡ’; ದುನಿಯಾ ವಿಜಯ್​ ಮನವಿ

Published On - 11:32 am, Wed, 5 January 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು