ರಾಷ್ಟ್ರಮಟ್ಟದಲ್ಲಿ ಭಾರತ ರತ್ನ ಹೇಗೆ ಅತ್ಯುನ್ನತ ಪ್ರಶಸ್ತಿ ಎನಿಸಿದರೆ, ರಾಜ್ಯಮಟ್ಟದಲ್ಲಿ ಕರ್ನಾಟಕ ರತ್ನ ಅತ್ಯುನ್ನತ ಗೌರವ ಎನಿಸಿಕೊಂಡಿದೆ. ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆ ನೀಡಿದ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. 1992ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಸ್ಥಾಪಿಸಲಾಯಿತು. ಈವರಗೆ ಕೇವಲ ಎಂಟು ಮಂದಿಗೆ ಕರ್ನಾಟಕ ರತ್ನ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಮರಣೋತ್ತರವಾಗಿ ಈ ಪ್ರಶಸ್ತಿ ಪಡೆಯುತ್ತಿರುವ ಪುನೀತ್ ರಾಜ್ಕುಮಾರ್ ಈ ಗೌರವಕ್ಕೆ ಪಾತ್ರರಾದ 10ನೇ ವ್ಯಕ್ತಿಯಾಗಿದ್ದಾರೆ.
50 ಗ್ರಾಂ ತೂಕದ ಚಿನ್ನದ ಪದಕ, ಸನ್ಮಾನ ಪತ್ರ, ನೆನಪಿನ ಕಾಣಿಕೆ ಮತ್ತು ಒಂದು ಶಾಲನ್ನು ಈ ಪುರಸ್ಕಾರ ಒಳಗೊಂಡಿರುತ್ತದೆ.
ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತರ ವಿವರ
ಕರ್ನಾಟಕ ರತ್ನ ಪುರಸ್ಕೃತರು
ಈ ಮೊದಲು ಕರ್ನಾಟಕ ರತ್ನ ಪ್ರಶಸ್ತಿ ಪಡೆದವರ ವಿವರ ಇಂತಿದೆ…
ಕುವೆಂಪು (1992), ಡಾ.ರಾಜ್ಕುಮಾರ್ (1992), ಎಸ್.ನಿಜಲಿಂಗಪ್ಪ (199), ಸಿ.ಎನ್.ಆರ್.ರಾವ್ (2000), ದೇವಿ ಪ್ರಸಾದ್ ಶೆಟ್ಟಿ (2001), ಭೀಮಸೇನೆ ಜೋಷಿ (2005), ಶಿವಕುಮಾರ ಸ್ವಾಮೀಜಿ (2007), ದೇ.ಜವರೇಗೌಡ (2008), ಡಿ.ವೀರೇಂದ್ರ ಹೆಗ್ಗಡೆ (2009), ಪುನೀತ್ ರಾಜ್ಕುಮಾರ್.
ಇದನ್ನೂ ಓದಿ: ಪುನೀತ್ ರಾಜ್ಕುಮಾರ್ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ; ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
ಇದನ್ನೂ ಓದಿ: Puneeth Namana: ‘ಪುನೀತ ನಮನ’ ಕಾರ್ಯಕ್ರಮ ಲೈವ್ ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ