AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ ಕಟ್ಟಡಗಳನ್ನು ನೋಯ್ಡಾ ಟವರ್​​ನ್ನು ನೆಲಸಮ ಮಾಡಿದಂತೆ ಮಾಡಲಾಗುವುದು: ಸಚಿವ ಆರ್ ಅಶೋಕ

ಅಕ್ರಮವಾಗಿ ನಿರ್ಮಿಸಲಾದ  ಕಟ್ಟಡಗಳನ್ನು ಕೆಡವಲು ನಿಯಂತ್ರಿತ ಸ್ಫೋಟ ಬಳಸುತ್ತೇವೆ ಎಂದ ಅವರು ನೋಯ್ಡದಲ್ಲಿ ಇತ್ತೀಚೆಗೆ ಕೆಡವಲಾದ ಅವಳಿ ಗೋಪುರಗಳ ಮಾದರಿಯಲ್ಲಿ ನಾವು ಅಕ್ರಮ ನಿರ್ಮಾಣಗಳನ್ನು ನೆಲಸಮ ಮಾಡುತ್ತೇವೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ ಕಟ್ಟಡಗಳನ್ನು ನೋಯ್ಡಾ ಟವರ್​​ನ್ನು ನೆಲಸಮ ಮಾಡಿದಂತೆ ಮಾಡಲಾಗುವುದು: ಸಚಿವ ಆರ್ ಅಶೋಕ
ಆರ್ ಅಶೋಕ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Sep 13, 2022 | 1:40 PM

Share

ಬೆಂಗಳೂರು: ಭಾರಿ ಮಳೆ ಮತ್ತು ಪ್ರವಾಹ ಬೆಂಗಳೂರಿನ ಮೇಲೆ ಭಾರೀ ಪರಿಣಾಮ ಬೀರಿದೆ. ಈ ಹೊತ್ತಲ್ಲಿ ಅಕ್ರಮ ನಿರ್ಮಾಣಗಳನ್ನು ನೋಯ್ಡಾ ಅವಳಿ ಟವರ್​​ಗಳಂತೆ ನೆಲಸಮ ಮಾಡಲಾಗುವುದು ಎಂದು ಕರ್ನಾಟಕದ ಕಂದಾಯ ಸಚಿವ ಆರ್ ಅಶೋಕ (R Ashoka) ಎಚ್ಚರಿಸಿದ್ದಾರೆ. ಬೆಂಗಳೂರಿನ ನಾಗರಿಕ ಸಂಸ್ಥೆಗಳು 700 ಅತಿಕ್ರಮಣಗಳನ್ನು ಗುರುತಿಸಿವೆ, ಅದು ನಗರದಾದ್ಯಂತ ಮಳೆನೀರಿನ ಚರಂಡಿಗಳಿಗೆ ಅಡ್ಡಿಯಾಗಿದೆ ಎಂದು ಹೇಳಲಾಗುತ್ತಿದೆ. ಇದರಿಂದಲೇ ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲ್ಪಡುವ ಐಟಿ ನಗರದಲ್ಲಿ ಭಾರಿ ಪ್ರವಾಹಕ್ಕೆ ಕಾರಣವಾಯಿತು. ಒತ್ತುವರಿ ತೆರವುಗೊಳ್ಳುವವರೆಗೂ ಕೆಡವುವ ಕಾರ್ಯ ಮುಂದುವರಿಯಲಿದೆ ಎಂದು ಆರ್ ಅಶೋಕ ಹೇಳಿದ್ದಾರೆ.  ಅಕ್ರಮವಾಗಿ ನಿರ್ಮಿಸಲಾದ  ಕಟ್ಟಡಗಳನ್ನು ಕೆಡವಲು ನಿಯಂತ್ರಿತ ಸ್ಫೋಟ ಬಳಸುತ್ತೇವೆ ಎಂದ ಅವರು ನೋಯ್ಡದಲ್ಲಿ ಇತ್ತೀಚೆಗೆ ಕೆಡವಲಾದ ಅವಳಿ ಗೋಪುರಗಳ ಮಾದರಿಯಲ್ಲಿ ನಾವು ಅಕ್ರಮ ನಿರ್ಮಾಣಗಳನ್ನು ನೆಲಸಮ ಮಾಡುತ್ತೇವೆ ಎಂದಿದ್ದಾರೆ.

ಕುತುಬ್ ಮಿನಾರ್‌ಗಿಂತಲೂ ಎತ್ತರದ ಕಟ್ಟಡವಾಗಿದ್ದ ನೋಯ್ಡಾದ ಅವಳಿ ಕಟ್ಟಡಗಳನ್ನು 3,700 ಕೆಜಿ ಸ್ಫೋಟಕಗಳನ್ನು ಸಿಡಿಸಿ ಸೆಕೆಂಡುಗಳಲ್ಲಿ ನೆಲಸಮ ಮಾಡಲಾಯಿತು.ಅದೇ ವೇಳೆ ಅಕ್ರಮಕ್ಕೆ ಅನುಮತಿ ನೀಡಿದ ಬಿಲ್ಡರ್‌ಗಳು ಮತ್ತು ಅಧಿಕಾರಿಗಳ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಅಶೋಕ ಹೇಳಿದ್ದಾರೆ.

Published On - 1:32 pm, Tue, 13 September 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?