AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿಯಂದು ಅಧಿಕಾರಿಗಳ ಕಡ್ಡಾಯ ಹಾಜರಿಗೆ ಸೂಚನೆ: ರಂಜಾನ್​​ ದಿನ ಸಭೆ ಕರಿಯಬಹುದಿತ್ತಲ್ಲವೇ ಎಂದ ಬಿಜೆಪಿ ಶಾಸಕ

ನಾಳೆ ಅಂದರೆ ಗುರುವಾರ ಯುಗಾದಿ ಹಬ್ಬ. ಎಲ್ಲೆಡೆ ಸರ್ಕಾರಿ ರಜೆ. ಆದರೆ ಇದೇ ದಿನ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ರಜೆ ರದ್ದುಗೊಳಿಸಿ, ಕರ್ನಾಟಕ ವಿಧಾನಸಭೆ ಅಧಿವೇಶನದ ಬಾಕಿ ಪ್ರಶ್ನೆಗಳಿಗೆ ಉತ್ತರಿಸಲು ಕಡ್ಡಾಯವಾಗಿ ಹಾಜರಾಗಲು ಸೂಚಿಸಲಾಗಿದೆ. ಸರ್ಕಾರದ ಈ ನಡೆ ಬಗ್ಗೆ ಮಾಜಿ ಸಚಿವ ಸುರೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.

ಯುಗಾದಿಯಂದು ಅಧಿಕಾರಿಗಳ ಕಡ್ಡಾಯ ಹಾಜರಿಗೆ ಸೂಚನೆ: ರಂಜಾನ್​​ ದಿನ ಸಭೆ ಕರಿಯಬಹುದಿತ್ತಲ್ಲವೇ ಎಂದ ಬಿಜೆಪಿ ಶಾಸಕ
Vidhana SoudhaImage Credit source: google
ಪ್ರಸನ್ನ ಗಾಂವ್ಕರ್​
| Edited By: |

Updated on: Mar 18, 2026 | 9:18 PM

Share

ಬೆಂಗಳೂರು, ಮಾರ್ಚ್​ 18: ವಿಧಾನಸಭೆಯಲ್ಲಿ ಪ್ರಶ್ನೆಗಳಿಗೆ ಉತ್ತರ ನೀಡುವುದು ಬಾಕಿ ಹಿನ್ನೆಲೆ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಯುಗಾದಿ (Ugadi) ಹಬ್ಬದ‌ ರಜೆಯನ್ನು ಕಡಿತಗೊಳಿಸಲಾಗಿದೆ. ಆ ಮೂಲಕ ಹಬ್ಬದ‌ ದಿನವೂ ಕಡ್ಡಾಯ ಹಾಜರಿಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಸೂಚನೆ ನೀಡಿದ್ದಾರೆ.

ಯುಗಾದಿ ಹಬ್ಬದ‌ ದಿನವೂ ಕಡ್ಡಾಯ ಹಾಜರಿಗೆ ಸೂಚನೆ

ಕರ್ನಾಟಕ ವಿಧಾನ ಸಭೆ ಅಧಿವೇಶನಕ್ಕೆ ಸಂಬಂಧಿಸಿದಂತೆ ಮಾರ್ಚ್​​ 23ರಂದು ಕಂದಾಯ ಇಲಾಖೆಗೆ ಸಂಬಂಧಪಟ್ಟ ಪ್ರಶ್ನೆಗಳು ಬಾಕಿಯಿರುವುದರಿಂದ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ ಇವರ ಸೂಚನೆ ಮೇರೆಗೆ ಮುಜರಾಯಿ, ಭೂ ಮಂಜೂರಾತಿ-1, ಭೂ ಮಂಜೂರಾತಿ-2, ಭೂ ಮಂಜೂರಾತಿ-3, ಸೇವೆಗಳು-3, ಭೂ ಕಂದಾಯ, ಭೂ ಮಾಪನ, ಭೂಮಿ, ಭೂಸುಧಾರಣಾ ಕೋಶ ಒಟ್ಟು 9 ಶಾಖೆಗಳಿಗೆ ಸಂಬಂಧಿಸಿದ ಅಧಿಕಾರಿ ಮತ್ತು ಸಿಬ್ಬಂದಿ ಮಾರ್ಚ್​​ 19ರಂದು ಕಡ್ಡಾಯವಾಗಿ ಕಚೇರಿಗೆ ಹಾಜರಾಗಿ ವಿಧಾನ ಸಭೆ ಬಾಕಿಯಿರುವ ಪ್ರಶ್ನೆಗಳಿಗೆ ಉತ್ತರಿಸಲು ಕ್ರಮವಹಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್​​ ಜೊತೆಗಿನ ಮದುವೆ ಹಿಂಸಾತ್ಮಕವಾಗಿದ್ದರಿಂದ ವಿಚ್ಚೇದನ: ಖರ್ಗೆ ಹೇಳಿಕೆಗೆ ದೇವೇಗೌಡರ ಕೌಂಟರ್​

ಮೊನ್ನೆಯಷ್ಟೇ ಸರ್ಕಾರದ ಕಡೆಯಿಂದ ಉತ್ತರ ಬಾರದೇ ಇರುವುದಕ್ಕೆ ಸ್ಪೀಕರ್ ಅಸಮಾಧಾನಗೊಂಡಿದ್ದರು. ಸ್ಪೀಕರ್ ಕಿಡಿ ಹಿನ್ನೆಲೆ ಸಿಎಂ ಸಿದ್ದರಾಮಯ್ಯರಿಂದ 9 ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್​​ ಕೊಟ್ಟ ಕಾರಣಕ್ಕೆ ಹಿರಿಯ ಅಧಿಕಾರಿಗಳು ಕೆಳಹಂತದ ಸಿಬ್ಬಂದಿಗಳಿಗೆ ಹಬ್ಬದ ಖುಷಿ ಇಲ್ಲದಂತೆ ಮಾಡಿದ್ದಾರೆ. ಒಂದು ರೀತಿಯಲ್ಲಿ ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದ ಹಾಗಾಗಿದೆ.

ಸರ್ಕಾರದ ನಡೆಗೆ ಮಾಜಿ ಸಚಿವ ಸುರೇಶ್ ಕುಮಾರ್ ವ್ಯಂಗ್ಯ

ಇನ್ನು ಈ ಬಗ್ಗೆ ಮಾಜಿ ಸಚಿವ ಸುರೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ. ಮತ್ತೊಮ್ಮೆ ತನ್ನ ವಿವೇಚನಾ ಕೊರತೆಯನ್ನು ಪ್ರದರ್ಶಿಸಿದ ಸರ್ಕಾರ. ನಾಳೆ, ಗುರುವಾರ 19.3.26. ನಮ್ಮ ನಾಡಿನಲ್ಲಿ ಚಾಂದ್ರಮಾನ ಯುಗಾದಿ ಹಬ್ಬ. ಎಲ್ಲಾ ಹಿಂದೂಗಳು ಆಚರಿಸುವ ದೊಡ್ಡ ಹಬ್ಬ. ನಮ್ಮ ಹೊಸ ಸಂವತ್ಸರದ ವರುಷದ ಆರಂಭ.

ಈ ಹಬ್ಬದ ದಿನವೇ ಸಭೆಗೆ ಹಾಜರಿರಬೇಕೆಂದು ಕಂದಾಯ ಇಲಾಖೆಯಿಂದ ಸೂಚನೆಯ ಪತ್ರ ಕೊಟ್ಟಿರುವುದು ಯಾವ ಮನಸ್ಥಿತಿ ತೋರುತ್ತದೆ? ನಾಡಿದ್ದು, ಶುಕ್ರವಾರ ಅಥವಾ ಶನಿವಾರ ಈ ಸಭೆ ಕರಿಯಬಹುದಿತ್ತಲ್ಲವೇ? ಓ! ಮರೆತಿದ್ದೆ. ಶುಕ್ರವಾರ, ಶನಿವಾರ ರಂಜಾನ್ ಅಲ್ಲವೇ? ಅಂದು ಕರೆದರೆ ಈ ಸರ್ಕಾರ ಜಾತ್ಯತೀತವಾಗುವುದಿಲ್ಲ.

ಇದನ್ನೂ ಓದಿ: ಲೋಪ ಆರೋಪ ಬೆನ್ನಲ್ಲೇ ಜಿಬಿಎ ಮತದಾರರ ಪಟ್ಟಿ ಆಕ್ಷೇಪಣೆಗೆ ನೀಡಿದ್ದ ಕಾಲಾವಕಾಶ ವಿಸ್ತರಣೆ

ಯುಗಾದಿ ಹಬ್ಬದ ದಿನವೇ ರಜೆ ದಿನವಾಗಿದ್ದರೂ ಸರ್ಕಾರಿ ಅಧಿಕಾರಿಗಳನ್ನು ಕರೆಯುವುದು ನಿಜವಾದ ಜಾತ್ಯತೀತತೆ! ವಾಹ್! ಕರ್ನಾಟಕ ಸರ್ಕಾರದ ಈ ನಡೆಗೆ ಭೇಷ್ ಅನ್ನಬೇಕೋ ಅಥವಾ ಛೀ ಅನ್ನಬೇಕೋ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್