AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rice Price Hike: ತರಕಾರಿ, ಕರೆಂಟ್, ಮದ್ಯ ಆಯ್ತು ಈಗ ಅಕ್ಕಿ ಬೆಲೆ ಏರಿಕೆಗೆ ಚಿಂತನೆ

ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಜೊತೆಗೆ ಮುಂಗಾರು ಮಳೆ ಕೈಕೊಟ್ಟು ಭತ್ತ ಸಿಗುತ್ತಿಲ್ಲ. ಹೀಗಾಗಿ ಅಕ್ಕಿ ಬೆಲೆ ಏರಿಸಲು ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ ನಡೆಸಿದೆ.

Rice Price Hike: ತರಕಾರಿ, ಕರೆಂಟ್, ಮದ್ಯ ಆಯ್ತು ಈಗ ಅಕ್ಕಿ ಬೆಲೆ ಏರಿಕೆಗೆ ಚಿಂತನೆ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on: Jun 22, 2023 | 8:54 AM

ಬೆಂಗಳೂರು: ಪಂಚ ಗ್ಯಾರಂಟಿ ನೆಪ ಹೇಳಿ ಕಾಂಗ್ರೆಸ್ ಸರ್ಕಾರ(Congress Government) ಆಡಳಿತಕ್ಕೆ ಬಂತು. ಆದ್ರೆ ಈಗ ಒಂದೊಂದೇ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ತರಕಾರಿ ಬೆಲೆ ಗಗನಕ್ಕೇರಿದೆ(Vegetable Hike Increase). ಕರೆಂಟ್ ಬಿಲ್ ಡಬಲ್ ಆಗಿದೆ(Electricity Price Increased). ಮದ್ಯ ಬೆಲೆಯೂ ಏರಿಕೆಯಾಗಿದೆ(Liquor Price Hike), ಹಾಲಿನ ದರ(Milk) ಏರಿಕೆಗೂ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರ ಜೊತೆಗೆ ಇದೀಗ ಅಕ್ಕಿ(Rice) ಬೆಲೆಯನ್ನೂ ಸಹ ಏರಿಕೆ ಮಾಡಲು ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ ನಡೆಸಿದೆ ಎಂಬ ಮಾಹಿತಿ ಸಿಕ್ಕಿದೆ.

ಗೃಹಜ್ಯೋತಿ ಯೋಜನೆಯಲ್ಲಿ 200 ಯೂನಿಟ್ ಫ್ರೀ ಕರೆಂಟ್ ಸಿಗುತ್ತದೆ ಎಂದು ಖುಷಿಯಲ್ಲಿದ್ದ ಜನರು ದುಪ್ಪಟ್ಟು ವಿದ್ಯುತ್ ದರದ ಬಿಲ್​ ನೋಡಿ ಶಾಕ್ ಆಗಿದ್ದಾರೆ. ಕರೆಂಟ್ ಬೆಲೆ ಏರಿಕೆ ಭಾರಿ ಹೊಡೆತ ಕೊಟ್ಟಿದೆ. ಸದ್ಯ ಈಗ ಅಕ್ಕಿ ಬೆಲೆ ಏರಿಸಲು ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ ನಡೆಸುತ್ತಿದೆ. ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಜೊತೆಗೆ ಮುಂಗಾರು ಮಳೆ ಕೈಕೊಟ್ಟು ಭತ್ತ ಸಿಗುತ್ತಿಲ್ಲ. ಹೀಗಾಗಿ ಅಕ್ಕಿ ಬೆಲೆ ಏರಿಸಲು ಮುಂದಾಗಿದೆ.

ಇದನ್ನೂ ಓದಿ: ಜನರ ಜೇಬು ಸುಡಲಿದೆ ವಿದ್ಯುತ್ ದರ ಏರಿಕೆ, ಹೋಟೆಲ್​ನಲ್ಲಿ ಕಾಫಿ-ಟೀ, ತಿಂಡಿ, ಊಟದ ದರ ಹೆಚ್ಚಳ

ಕೆಜಿಗೆ 5 ರಿಂದ 10 ರುಪಾಯಿ ಏರಿಕೆ ಮಾಡಲು ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ ನಡೆಸಿದೆ. ಕರೆಂಟ್ ಬಿಲ್ ಹೆಚ್ಚಳದಿಂದಾಗಿ ಮಿಲ್​ಗಳಿಗೆ ಭಾರಿ ಹೊಡೆತ ಬೀಳುತ್ತಿದೆ. ಜೊತೆಗೆ ಎಪಿಎಂಸಿ ಟ್ಯಾಕ್ಸ್ ಕೂಡ ಹೊರೆಯಾಗುತ್ತಿದೆ. ಮಳೆ ಇಲ್ಲದೇ ಇರುವ ಕಾರಣ ಭತ್ತ ಸಿಗುತ್ತಿಲ್ಲ. ಹೀಗಾಗಿ ಬೆಲೆ ಏರಿಕೆ ಮಾಡಲು ರೈಸ್ ಮಿಲ್ಲರ್ಸ್ ಅಸೋಸಿಯೇಷನ್ ಚಿಂತನೆ ನಡೆಸಿದೆ. ಸಧ್ಯ ಈಗ ಒಂದು ಕೆಜಿ ಅಕ್ಕಿಗೆ‌ 45 ರುಪಾಯಿ ಇದೆ. ಇದ್ರಲ್ಲಿ 5 ರಿಂದ 10 ರುಪಾಯಿ ಹೆಚ್ಚಾಗುವ ಸಾಧ್ಯತೆ ಇದೆ. ಸಧ್ಯ ಟ್ಯಾಕ್ಸ್, ಲೇಬರ್ ಖರ್ಚು, ಕರೆಂಟ್ ಬಿಲ್ ಏರಿಕೆ ಸಾಕಷ್ಡು ಹೊರೆಯಾಗುತ್ತಿದ್ದು, ಇದನ್ನ ಸರಿದೂಗಿಸಲು ಬೆಲೆ ಏರಿಕೆ ಅಸ್ತ್ರದ ಮೊರೆ ಹೋಗಲಿದೆ.

ಹೋಟೆಲ್​ನಲ್ಲಿ ಕಾಫಿ-ಟೀ, ತಿಂಡಿ, ಊಟದ ದರ ಹೆಚ್ಚಳ

ಕರ್ನಾಟಕ ಸರ್ಕಾರ ಗೃಹಜ್ಯೋತಿ ಯೋಜನೆ ಜಾರಿಗೆ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಆದ್ರೆ, ಗೃಹಜ್ಯೋತಿ ಯೋಜನೆ ಜಾರಿಗೂ ಮುನ್ನ, ಇಂಧನ ಇಲಾಖೆ ವ್ಯಾಪಾರಸ್ಥರು ಮತ್ತು ಕೈಗಾರಿಕೋದ್ಯಮಿಗಳಿಗೆ ಬಿಗ್ ಶಾಕ್ ನೀಡಿದೆ. ವಿದ್ಯುತ್ ದರವನ್ನ ಏಕಾಏಕಿ ಹೆಚ್ಚಳ ಮಾಡಿರುವುದರಿಂದ ದುಪ್ಪಟ್ಟು ಬಿಲ್ ಕಟ್ಟಬೇಕಾಗಿದೆ. ವಿದ್ಯುತ್ ದರ ಹೆಚ್ಚಳ ಇದೀಗ ಜನರ ಜೇಬು ಸುಡುತ್ತಿದೆ. ಹೌದು…ಹೋಟೆಲ್​ (Hotel) ಮಾಲೀಕರು ಸಹ ದರ ಏರಿಕೆ ಮಾಡಿದ್ದಾರೆ. ಹೀಗಾಗಿ ಹೋಟೆಲ್​ಗಳಲ್ಲಿ ಕಾಫಿ, ಟೀ-ತಿಂಡಿ ಹಾಗೂ ಊಟದ ದರ ಹೆಚ್ಚಳವಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ