AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rice Price Hike: ತರಕಾರಿ, ಕರೆಂಟ್, ಮದ್ಯ ಆಯ್ತು ಈಗ ಅಕ್ಕಿ ಬೆಲೆ ಏರಿಕೆಗೆ ಚಿಂತನೆ

ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಜೊತೆಗೆ ಮುಂಗಾರು ಮಳೆ ಕೈಕೊಟ್ಟು ಭತ್ತ ಸಿಗುತ್ತಿಲ್ಲ. ಹೀಗಾಗಿ ಅಕ್ಕಿ ಬೆಲೆ ಏರಿಸಲು ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ ನಡೆಸಿದೆ.

Rice Price Hike: ತರಕಾರಿ, ಕರೆಂಟ್, ಮದ್ಯ ಆಯ್ತು ಈಗ ಅಕ್ಕಿ ಬೆಲೆ ಏರಿಕೆಗೆ ಚಿಂತನೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Jun 22, 2023 | 8:54 AM

Share

ಬೆಂಗಳೂರು: ಪಂಚ ಗ್ಯಾರಂಟಿ ನೆಪ ಹೇಳಿ ಕಾಂಗ್ರೆಸ್ ಸರ್ಕಾರ(Congress Government) ಆಡಳಿತಕ್ಕೆ ಬಂತು. ಆದ್ರೆ ಈಗ ಒಂದೊಂದೇ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ತರಕಾರಿ ಬೆಲೆ ಗಗನಕ್ಕೇರಿದೆ(Vegetable Hike Increase). ಕರೆಂಟ್ ಬಿಲ್ ಡಬಲ್ ಆಗಿದೆ(Electricity Price Increased). ಮದ್ಯ ಬೆಲೆಯೂ ಏರಿಕೆಯಾಗಿದೆ(Liquor Price Hike), ಹಾಲಿನ ದರ(Milk) ಏರಿಕೆಗೂ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರ ಜೊತೆಗೆ ಇದೀಗ ಅಕ್ಕಿ(Rice) ಬೆಲೆಯನ್ನೂ ಸಹ ಏರಿಕೆ ಮಾಡಲು ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ ನಡೆಸಿದೆ ಎಂಬ ಮಾಹಿತಿ ಸಿಕ್ಕಿದೆ.

ಗೃಹಜ್ಯೋತಿ ಯೋಜನೆಯಲ್ಲಿ 200 ಯೂನಿಟ್ ಫ್ರೀ ಕರೆಂಟ್ ಸಿಗುತ್ತದೆ ಎಂದು ಖುಷಿಯಲ್ಲಿದ್ದ ಜನರು ದುಪ್ಪಟ್ಟು ವಿದ್ಯುತ್ ದರದ ಬಿಲ್​ ನೋಡಿ ಶಾಕ್ ಆಗಿದ್ದಾರೆ. ಕರೆಂಟ್ ಬೆಲೆ ಏರಿಕೆ ಭಾರಿ ಹೊಡೆತ ಕೊಟ್ಟಿದೆ. ಸದ್ಯ ಈಗ ಅಕ್ಕಿ ಬೆಲೆ ಏರಿಸಲು ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ ನಡೆಸುತ್ತಿದೆ. ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಜೊತೆಗೆ ಮುಂಗಾರು ಮಳೆ ಕೈಕೊಟ್ಟು ಭತ್ತ ಸಿಗುತ್ತಿಲ್ಲ. ಹೀಗಾಗಿ ಅಕ್ಕಿ ಬೆಲೆ ಏರಿಸಲು ಮುಂದಾಗಿದೆ.

ಇದನ್ನೂ ಓದಿ: ಜನರ ಜೇಬು ಸುಡಲಿದೆ ವಿದ್ಯುತ್ ದರ ಏರಿಕೆ, ಹೋಟೆಲ್​ನಲ್ಲಿ ಕಾಫಿ-ಟೀ, ತಿಂಡಿ, ಊಟದ ದರ ಹೆಚ್ಚಳ

ಕೆಜಿಗೆ 5 ರಿಂದ 10 ರುಪಾಯಿ ಏರಿಕೆ ಮಾಡಲು ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ ನಡೆಸಿದೆ. ಕರೆಂಟ್ ಬಿಲ್ ಹೆಚ್ಚಳದಿಂದಾಗಿ ಮಿಲ್​ಗಳಿಗೆ ಭಾರಿ ಹೊಡೆತ ಬೀಳುತ್ತಿದೆ. ಜೊತೆಗೆ ಎಪಿಎಂಸಿ ಟ್ಯಾಕ್ಸ್ ಕೂಡ ಹೊರೆಯಾಗುತ್ತಿದೆ. ಮಳೆ ಇಲ್ಲದೇ ಇರುವ ಕಾರಣ ಭತ್ತ ಸಿಗುತ್ತಿಲ್ಲ. ಹೀಗಾಗಿ ಬೆಲೆ ಏರಿಕೆ ಮಾಡಲು ರೈಸ್ ಮಿಲ್ಲರ್ಸ್ ಅಸೋಸಿಯೇಷನ್ ಚಿಂತನೆ ನಡೆಸಿದೆ. ಸಧ್ಯ ಈಗ ಒಂದು ಕೆಜಿ ಅಕ್ಕಿಗೆ‌ 45 ರುಪಾಯಿ ಇದೆ. ಇದ್ರಲ್ಲಿ 5 ರಿಂದ 10 ರುಪಾಯಿ ಹೆಚ್ಚಾಗುವ ಸಾಧ್ಯತೆ ಇದೆ. ಸಧ್ಯ ಟ್ಯಾಕ್ಸ್, ಲೇಬರ್ ಖರ್ಚು, ಕರೆಂಟ್ ಬಿಲ್ ಏರಿಕೆ ಸಾಕಷ್ಡು ಹೊರೆಯಾಗುತ್ತಿದ್ದು, ಇದನ್ನ ಸರಿದೂಗಿಸಲು ಬೆಲೆ ಏರಿಕೆ ಅಸ್ತ್ರದ ಮೊರೆ ಹೋಗಲಿದೆ.

ಹೋಟೆಲ್​ನಲ್ಲಿ ಕಾಫಿ-ಟೀ, ತಿಂಡಿ, ಊಟದ ದರ ಹೆಚ್ಚಳ

ಕರ್ನಾಟಕ ಸರ್ಕಾರ ಗೃಹಜ್ಯೋತಿ ಯೋಜನೆ ಜಾರಿಗೆ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಆದ್ರೆ, ಗೃಹಜ್ಯೋತಿ ಯೋಜನೆ ಜಾರಿಗೂ ಮುನ್ನ, ಇಂಧನ ಇಲಾಖೆ ವ್ಯಾಪಾರಸ್ಥರು ಮತ್ತು ಕೈಗಾರಿಕೋದ್ಯಮಿಗಳಿಗೆ ಬಿಗ್ ಶಾಕ್ ನೀಡಿದೆ. ವಿದ್ಯುತ್ ದರವನ್ನ ಏಕಾಏಕಿ ಹೆಚ್ಚಳ ಮಾಡಿರುವುದರಿಂದ ದುಪ್ಪಟ್ಟು ಬಿಲ್ ಕಟ್ಟಬೇಕಾಗಿದೆ. ವಿದ್ಯುತ್ ದರ ಹೆಚ್ಚಳ ಇದೀಗ ಜನರ ಜೇಬು ಸುಡುತ್ತಿದೆ. ಹೌದು…ಹೋಟೆಲ್​ (Hotel) ಮಾಲೀಕರು ಸಹ ದರ ಏರಿಕೆ ಮಾಡಿದ್ದಾರೆ. ಹೀಗಾಗಿ ಹೋಟೆಲ್​ಗಳಲ್ಲಿ ಕಾಫಿ, ಟೀ-ತಿಂಡಿ ಹಾಗೂ ಊಟದ ದರ ಹೆಚ್ಚಳವಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ