AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾ.24 ರಂದು ಎದುರಾಗಲಿದೆ ಬಸ್ ಸಮಸ್ಯೆ; ಅನಿರ್ದಿಷ್ಟಾವಧಿ ಧರಣಿಗೆ ಸಾರಿಗೆ ನೌಕರರ ನಿರ್ಧಾರ

ಸಾರಿಗೆ ನಿಗಮ ನೌಕರರ ಸಮಾನ ಮನಸ್ಕರ ವೇದಿಕೆಯಿಂದ ಹೋರಾಟ ನಡೆಯಲಿದ್ದು ಧರಣಿ ಸಂಬಂಧ ಇಂದು ಕಾರ್ಮಿಕ ಇಲಾಖೆಗೆ ಸಾರಿಗೆ ನೌಕರರು ನೋಟಿಸ್ ನೀಡಲಿದ್ದಾರೆ.

ಮಾ.24 ರಂದು ಎದುರಾಗಲಿದೆ ಬಸ್ ಸಮಸ್ಯೆ; ಅನಿರ್ದಿಷ್ಟಾವಧಿ ಧರಣಿಗೆ ಸಾರಿಗೆ ನೌಕರರ ನಿರ್ಧಾರ
ಕೆಎಸ್​ಆರ್​ಟಿ ಬಸ್​ (ಸಾಂದರ್ಭಿಕ ಚಿತ್ರ)
ಆಯೇಷಾ ಬಾನು
|

Updated on: Mar 07, 2023 | 9:29 AM

Share

ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿ(Karnataka Assembly Elections 2023) ಕರ್ನಾಟಕ ಸರ್ಕಾರಕ್ಕೆ(Karnataka Government) ಟೆನ್ಷನ್ ಮೇಲೆ ಟೆನ್ಷನ್ ಶುರುವಾಗಿದೆ. ಸರ್ಕಾರಿ ನೌಕರರ ನಂತರ ಇದೀಗ ಸಾರಿಗೆ ನೌಕರರು ಮುಷ್ಕರಕ್ಕೆ ನಿರ್ಧರಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.24ರಿಂದ ಅನಿರ್ದಿಷ್ಟಾವಧಿ ಧರಣಿ ಮಾಡಲು ಸಾರಿಗೆ ನೌಕರರು ನಿರ್ಧರಿಸಿದ್ದಾರೆ.

ಸಾರಿಗೆ ನಿಗಮ ನೌಕರರ ಸಮಾನ ಮನಸ್ಕರ ವೇದಿಕೆಯಿಂದ ಹೋರಾಟ ನಡೆಯಲಿದ್ದು ಧರಣಿ ಸಂಬಂಧ ಇಂದು ಕಾರ್ಮಿಕ ಇಲಾಖೆಗೆ ಸಾರಿಗೆ ನೌಕರರು ನೋಟಿಸ್ ನೀಡಲಿದ್ದಾರೆ. ರಾಜ್ಯದ ನಾಲ್ಕು ನಿಗಮಗಳ ಬಸ್​​ಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿದೆ.

ಸಾರಿಗೆ ನೌಕರರ ಕೂಟ ಈಗಾಗಲೇ ಎರಡು ಬಾರಿ ಮುಷ್ಕರ ಮಾಡಿದೆ. ನಾಲ್ಕು ದಿನ ಫ್ರೀಡಂಪಾರ್ಕ್ ನಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದರು. ಸದ್ಯ ನಾಳೆಯಿಂದ ಎಲ್ಲಾ ಘಟಕಗಳಲ್ಲಿ ಮುಷ್ಕರದ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಈ ಹಿಂದೆ ಸರ್ಕಾರ ಕೊಟ್ಟ ಭರವಸೆ ಈಡೇರಿಸಬೇಕು ಎಂದು ಒತ್ತಾಯಿಸಲಿದ್ದಾರೆ. ಈ ಹಿಂದೆ ಸಾರಿಗೆ ನೌಕರರಿಗೆ ಸರ್ಕಾರ ಭರವಸೆಯನ್ನ ನೀಡಿತ್ತು. ಆದ್ರೆ ವೇತನ ವಿಚಾರವಾಗಿ ಕೊಟ್ಟ ಮಾತನ್ನ ಉಳಿಸಿಕೊಳ್ಳಲಿಲ್ಲ.

ಇದನ್ನೂ ಓದಿ: ಬೆಂಗಳೂರಿಗೆ ಎದುರಾಗಲಿದೆ ಹಾಲಿನ ಕೊರತೆ; ಹಾಲಿನ ಉತ್ಪಾದನೆ ಕಡಿಮೆಯಾಗಿದೆ ಎಂದು ಎಚ್ಚರಿಕೆ ನೀಡಿದ ಬಮುಲ್

ಬೇಡಿಕೆಗಳೇನು?

  • ಆರನೇ ವೇತನ ಆಯೋಗದ ಮಾದರಿಯಲ್ಲಿ ವೇತನ ನೀಡುವಂತೆ ಆಗ್ರಹ
  • ಮುಷ್ಕರದ ಸಮಯದಲ್ಲಿ ಮಾಡಿರೋ ವಜಾ, ಅಮಾನತು,  ಪೋಲಿಸ್ ಕೇಸ್ ಹಿಂಪಡಿಬೇಕು
  • 1 ಲಕ್ಷ 7 ಸಾವಿರ ನೌಕರರ ಸಂಘಕ್ಕೆ 23 ವರ್ಷಗಳಿಂದ ಚುನಾವಣೆ ಆಗಿಲ್ಲ, ಚುನಾವಣೆ ನಡೆಸಬೇಕು
  • ಈ ಬಾರಿ ಕಾರ್ಮಿಕ ಸಂಘಟನೆಗಳ ಚುನಾವಣೆ ಮಾಡಲು ಒತ್ತಾಯ
  • ಸಾರಿಗೆ ನಿಗಮಗಳ ಖಾಸಗೀಕರಣಕ್ಕೆ ವಿರೋಧ
  • ಎಲೆಕ್ಟ್ರಿಕ್ ಬಸ್ಗಳ ನಿರ್ವಹಣೆ ಖಾಸಗೀಕರಣಕ್ಕೆ ವಿರೋಧ
  • ಹೊರಗುತ್ತಿಗೆ ಆಧಾರದ ಮೇಲೆ ನೌಕರರ ನೇಮಕಕ್ಕೆ ವಿರೋಧ

    ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು