AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕಿ ಇರುವ ಎಲ್ಲಾ ವಾಹನ ನೋಂದಣಿ ಅರ್ಜಿ ನವೆಂಬರ್ ಒಳಗೆ ವಿಲೇವಾರಿ ಮಾಡಿ: ಆರ್​ಟಿಒಗಳಿಗೆ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ನವೆಂಬರ್ 30ರೊಳಗೆ ಎಲ್ಲಾ ಬಾಕಿ ವಾಹನ ನೋಂದಣಿ ಅರ್ಜಿಗಳನ್ನು ಇತ್ಯರ್ಥಪಡಿಸಲು ಆರ್ಟಿಓಗಳಿಗೆ ಸೂಚಿಸಿದ್ದಾರೆ. ಅವರು ಬಸ್ಸುಗಳಲ್ಲಿ ತುರ್ತು ನಿರ್ಗಮನ ಬಾಗಿಲು ಕಡ್ಡಾಯಗೊಳಿಸಿ, ಸುರಕ್ಷತೆಗೆ ಆದ್ಯತೆ ನೀಡುವಂತೆ ತಿಳಿಸಿದ್ದಾರೆ. ಅದಲ್ಲದೆ ಅಖಿಲ ಭಾರತ ಪರವಾನಗಿ ಬಸ್ಸುಗಳಿಗೆ ತೆರಿಗೆ ವಿಧಿಸುವ ಮೂಲಕ ಇಲಾಖೆಯ ಆದಾಯ ಗುರಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಬಾಕಿ ಇರುವ ಎಲ್ಲಾ ವಾಹನ ನೋಂದಣಿ ಅರ್ಜಿ ನವೆಂಬರ್ ಒಳಗೆ ವಿಲೇವಾರಿ ಮಾಡಿ: ಆರ್​ಟಿಒಗಳಿಗೆ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ
ನವೆಂಬರ್ ಮುಗಿಯುವುದರೊಳಗೆ ಬಾಕಿ ಇರುವ ಎಲ್ಲಾ ವಾಹನ ನೋಂದಣಿ ಅರ್ಜಿಗಳನ್ನು ಪೂರ್ಣಗೊಳಿಸಲು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ
ಭಾವನಾ ಹೆಗಡೆ
|

Updated on: Nov 14, 2025 | 8:44 AM

Share

ಬೆಂಗಳೂರು, ನವೆಂಬರ್ 14: ರಾಜ್ಯದಲ್ಲಿ ಬಾಕಿಯಿರುವ ಎಲ್ಲಾ ವಾಹನ ನೋದಣಿ ಅರ್ಜಿಗಳನ್ನು ಪೂರ್ಣಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆರ್ಟಿಓ (RTO) ಗಳಿಗೆ ಸೂಚನೆ ನೀಡಿದ್ದಾರೆ. ಗುರುವಾರ (ನ.13)ದಂದು ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಸಾಕಷ್ಟು ನೋಂದಣಿ ಹರ್ಜಿಗಳು ಬಾಕಿ ಇವೆ. ಅದರ ಜೊತೆಗೆ ಶೇ. 50 ರಷ್ಟು ಹೊಸ ನೋಂದಣಿಅರ್ಜಿಗಳು ಸಲ್ಲಿಕೆಯಾಗಿವೆ. ನವೆಂಬರ್ 30ರೊಳಗೆ ಈ ಎಲ್ಲಾ ಅಜಿರ್ಗಳನ್ನು ಪರಿಶೀಲಿಸಿ ಇತ್ಯರ್ಥಪಡಿಸಬೇಕು ಎಂದರು. ಅರ್ಜಿಗಳ ಡಿಜಿಟಲೀಕರಣದಲ್ಲಿ ಕೆಲವು ಸಾಫ್ಟ್ ವೇರ್ ದೋಷಗಳು ಎದುರಾಗಿದ್ದು, ಇಲಾಖೆ ಆ ದೋಷಗಳನ್ನು ಸರಿಪಡಿಸುವ ಪ್ರಯತ್ನದಲ್ಲಿದೆ ಎಂದು ಸಾರಿಗೆ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುರಕ್ಷತೆಗೆ ಹೆಚ್ಚಿನ ಕ್ರಮ ವಹಿಸಲು ಸೂಚನೆ

ಫಿಟ್ನೆಸ್ ಪ್ರಮಾಣಪತ್ರ ನೀಡುವ ಸಂದರ್ಭದಲ್ಲಿ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲನ್ನು ಅಳವಡಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಲೋಕಲ್ ಬಸ್ ಆಗಿರಲಿ, ಐಷಾರಾಮಿ ಬಸ್ ಆಗಿರಲಿ ತುರ್ತು ನಿರ್ಗಮನದ ಬಾಗಿಲು ಕಡ್ಡಾಯವಾಗಿದೆ. ಹಲವಾರು ಬಸ್​​ಗಳಲ್ಲಿ ಕೇವಲ ತುರ್ತು ನಿರ್ಗಮದ ಕಿಟಕಿಗಳು ಮಾತ್ರವಿದ್ದು, ಮಕ್ಕಳಿಗೆ ಮತ್ತು ಹಿರಿಯ ನಾಗರಿಕರಿಗೆ ಇದರಿಂದ ತೊಂದರೆಯಾಗಬಹುದು. ಹೀಗಾಗಿ ತುರ್ತು ಬಾಗಿಲು ಅತ್ಯಗತ್ಯ. ವಾಹನ ಯಾವಾಗಲಾದರೂ ನೋಂದಣಿಯಾಗಿರಲಿ, ನಮ್ಮ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ನಮ್ಮ ನೀತಿ ನಿಯಮಗಳಿಗೆ ಬದ್ಧರಾಗಿರಲೇಬೇಕು ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದು, ಸಾರ್ವಜನಿಕ ಸಾರಿಗೆಗಳಲ್ಲಿ ಅತಿಯಾದ ವಾಣಿಜ್ಯ ವಸ್ತುಗಳ ಸಾಗಾಟ ಕಂಡುಬಂದಲ್ಲಿ ಇಲಾಖೆಯು ಕಠಿಣ ಕ್ರಮ ಕೈಗೊಳ್ಳುವಂತೆಯೂ ಆದೇಶಿಸಿದ್ದಾರೆ.

ಮುಂಬರುವ ವರ್ಷದಲ್ಲಿ ಹೆಚ್ಚಿನ ಆದಾಯದ ಗುರಿ

ಅಖಿಲ ಭಾರತ ಪ್ರವಾಸಿ ಪರವಾನಗಿ ಹೊಂದಿರುವ ಬಸ್​ಗಳ ಮೇಲೆ ತೆರಿಗೆ ವಿಧಿಸಲಿ ರಾಜ್ಯಾದ್ಯಂತ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ರಾಜ್ಯದ ಶಾಲಾ ವಾಹನಗಳಿಗೆ ಫಿಟ್​ನೆಸ್ ಪ್ರಮಾಣ ಪತ್ರ ನೀಡುವ ಮೊದಲು ಸಂಪೂರ್ಣ ತಪಾಸಣೆ ನಡೆಸುವಂತೆ ಇಲಾಖೆಗೆ ಹೇಳಲಾಗಿದೆ. ಅದರೊಂದಿಗೆ ಶಾಲಾ ವಾಹನಗಳ ಮಾಸಿಕ ತಪಾಸಣೆಗಾಗಿ ವಿಶೇಷ ತಂಡವನ್ನು ನೇಮಿಸುವಂತೆಯೂ ಸೂಚಿಸಲಾಗಿದೆ. ಸಧ್ಯದ ಹಣಕಾಸು ವರ್ಷದಲ್ಲಿ ಸಾರಿಗೆ ಇಲಾಖೆಯು 7,451.45 ಕೋಟಿ ರೂ.ಗಳ ಆದಾಯ ಗಳಿಸಿದ್ದು, ಮುಂಬರುವ ಹಣಕಾಸು ವರ್ಷದಲ್ಲಿ ರಾಜ್ಯ ಸಾರಿಗೆ ಇಲಾಖೆಯು 14,457.73 ಕೋಟಿ ರೂ.ಗಳ ಆದಾಯ ಗಳಿಸುವಂತೆ ಸರ್ಕಾರ ಗುರಿ ನಿಗಡಿಪಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ