AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳಿಗೆ 15 ದಿನಗಳ ಒಳಗೆ ಟಿಸಿ ನೀಡುವಂತೆ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ನಿರ್ದೇಶನದಂತೆ, ರಾಜ್ಯದ ಎಲ್ಲಾ ಶಾಲೆಗಳು ಅರ್ಜಿ ಸ್ವೀಕರಿಸಿದ 15 ದಿನಗಳಲ್ಲಿ ವರ್ಗಾವಣೆ ಪ್ರಮಾಣಪತ್ರ (TC) ನೀಡಬೇಕು. ವಿಫಲವಾದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಶಿಕ್ಷಣ ಇಲಾಖೆ ಸೂಚಿಸಿದೆ. ಶುಲ್ಕ ಬಾಕಿ ಇದ್ದರೂ TC ವಿಳಂಬ ಮಾಡುವಂತಿಲ್ಲವೆಂದಿರುವ ಇಲಾಖೆ, ಪೋಷಕರು TC ವಿಳಂಬವಾದರೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಬಹುದು ಎಂದು ಹೇಳಿದೆ.

ವಿದ್ಯಾರ್ಥಿಗಳಿಗೆ 15 ದಿನಗಳ ಒಳಗೆ ಟಿಸಿ ನೀಡುವಂತೆ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ
ವಿದ್ಯಾರ್ಥಿಗಳಿಗೆ 15 ದಿನಗಳ ಒಳಗೆ ಟಿಸಿ ನೀಡುವಂತೆ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ
ಭಾವನಾ ಹೆಗಡೆ
|

Updated on: Dec 02, 2025 | 11:50 AM

Share

ಬೆಂಗಳೂರು, ಡಿಸೆಂಬರ್ 02: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (KSCPR) ನಿರ್ದೇಶನದ ಮೇರೆಗೆ, ಶಿಕ್ಷಣ ಇಲಾಖೆಯು ಎಲ್ಲಾ ಶಾಲೆಗಳಿಗೆ ಅರ್ಜಿಗಳನ್ನು ಸ್ವೀಕರಿಸಿದ 15 ದಿನಗಳಲ್ಲಿ ವರ್ಗಾವಣೆ ಪ್ರಮಾಣ ಪತ್ರಗಳನ್ನು(TC) ನೀಡುವಂತೆ ಸೂಚಿಸಿದೆ. ಒಂದು ವೇಳೆ ವಿಫಲವಾದರೆ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಸಿದೆ.

ಟಿಸಿ ಸಿಗದಿದ್ದರೆ ಬಿಇಓಗೆ ವಿನಂತಿ ಸಲ್ಲಿಸಿ

ಶಿಕ್ಷಣ ಇಲಾಖೆ ಕಳಿಸಿರುವ ನೋಟಿಸ್​ನಲ್ಲಿ ‘ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳುವ ಸಲುವಾಗಿ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009 ರ ಸೆಕ್ಷನ್ 5(1) ಅನ್ನು ಉಲ್ಲಂಘಿಸದೆ, 15 ದಿನಗಳಲ್ಲಿ ವರ್ಗಾವಣೆ ಪ್ರಮಾಣಪತ್ರವನ್ನು ನೀಡುವುದು ಶಾಲಾ ಪ್ರಾಂಶುಪಾಲರ ಪ್ರಾಥಮಿಕ ಕರ್ತವ್ಯವಾಗಿದೆ. ಶಾಲಾ ಪ್ರಾಂಶುಪಾಲರು ಸಮಯಕ್ಕೆ ಸರಿಯಾಗಿ ವರ್ಗಾವಣೆ ಪತ್ರವನ್ನು ನೀಡದಿದ್ದರೆ, ಪೋಷಕರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗೆ ವಿನಂತಿಯನ್ನು ಸಲ್ಲಿಸಬೇಕು. ಮನವಿಯನ್ನು ಸ್ವೀಕರಿಸುವ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸದರಿ ಶಾಲಾ ಪ್ರಾಂಶುಪಾಲರಿಗೆ ಒಂದು ವಾರದ ಕಾಲಾವಕಾಶ ನೀಡಿ, ಮನವಿಯನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು.’ ಎಂದು ತಿಳಿಸಲಾಗಿದೆ.

ಸರ್ಕಾರಿ ಶಾಲೆಗೆ ವರ್ಗಾವಣೆಯಾದಾಗ ಮಾತ್ರ ಆದೇಶ ಅನ್ವಯ

ಈ ಕುರಿತು ಮಾತನಾಡಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಶಾಲೆಗಳು ಟಿಸಿ ವಿಳಂಬ ಮಾಡುತ್ತಿರುವ ಬಗ್ಗೆ ಪೋಷಕರಿಂದ ಅನೇಕ ದೂರುಗಳು ಬಂದಿರುವುದರಿಂದ ಇಲಾಖೆ ಈ ಸುತ್ತೋಲೆ ಹೊರಡಿಸಿದೆ. ಬಾಕಿ ಇರುವ ಶುಲ್ಕದ ಸಮಸ್ಯೆ ಇದ್ದರೆ, ಬಿಇಒ ಶಾಲೆಗಳಿಗೆ ಸಮಸ್ಯೆಯನ್ನು ಪರಿಹರಿಸಲು ಸಹಾಯ ಮಾಡುತ್ತಾರೆ. ಇಲ್ಲಿಯವರೆಗೆ, ಶಾಲೆಗಳಿಂದ ನಮಗೆ ಅಂತಹ ಯಾವುದೇ ದೂರುಗಳು ಬಂದಿಲ್ಲ ಎಂದು ಹೇಳಿದ್ದಾರೆ.

ಆರ್‌ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘದ ಬಿ.ಎನ್. ಯೋಗಾನಂದ ಮಾತನಾಡಿ, 2021–22ರಲ್ಲಿ ಶಿಕ್ಷಣ ಸಂಸ್ಥೆಗಳು ವಿಧಿಸುವ ಶುಲ್ಕಗಳನ್ನು ಭರಿಸಲಾಗದ ಅನೇಕ ವಿದ್ಯಾರ್ಥಿಗಳು ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳಿಗೆ ಸ್ಥಳಾಂತರಗೊಂಡಿದ್ದಾರೆ. ಆ ಸಮಯದಲ್ಲಿ, ಕೆಲವು ಖಾಸಗಿ ಶಾಲೆಗಳು ತಮ್ಮ ಟಿಸಿಗಳನ್ನು ನೀಡುವುದನ್ನು ವಿಳಂಬ ಮಾಡುವ ಮೂಲಕ ಪೋಷಕರು ಮತ್ತು ಮಕ್ಕಳಿಗೆ ತೊಂದರೆ ನೀಡಿದ್ದಾರೆ. ಇದರಿಂದಾಗಿ ಕರ್ನಾಟಕ ಹೈಕೋರ್ಟ್ ಖಾಸಗಿ ಶಾಲೆಗಳ ಶುಲ್ಕವನ್ನು ನಿಯಂತ್ರಿಸಲು ಮತ್ತು ವಿಳಂಬವಿಲ್ಲದೆ ಟಿಸಿ ಸಿಗುತಂತೆ ಮಾಡಲು ಸಮಿತಿಗಳನ್ನು ರಚಿಸುವಂತೆ ಆದೇಶಿಸಿದೆ ಎಂದಿದ್ದಾರೆ.

ಇದನ್ನೂ ಓದಿ ಶಾಲೆಗಳ ಸುತ್ತಮುತ್ತ ಬೀದಿ ನಾಯಿ ಉಪಟಳ ತಡೆಯಲು ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಒಂದು ಮಗು ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಗೆ ಸ್ಥಳಾಂತರಗೊಂಡಾಗ ಮಾತ್ರ ಈ ಆದೇಶ ಅನ್ವಯಿಸುತ್ತದೆ. ಮಕ್ಕಳು ಎರಡು ಖಾಸಗಿ ಶಾಲೆಗಳ ನಡುವೆ ಸ್ಥಳಾಂತರಗೊಂಡಾಗ ಇದು ಅನ್ವಯಿಸುವುದಿಲ್ಲ. ಪಾವತಿ ಬಾಕಿ ಇದ್ದರೆ ಅದನ್ನು ಆಯಾ ಜಿಲ್ಲಾ ಪಂಚಾಯತ್ ಸಿಇಒ ನೇತೃತ್ವದ ಸಮಿತಿಗೆ ಕೊಂಡೊಯ್ಯಬಹುದು. ಟಿಸಿ ನೀಡದೆ ಅವರು ಮಕ್ಕಳಿಗೆ ಕಿರುಕುಳ ನೀಡುವಂತಿಲ್ಲ ಎಂದು ಯೋಗಾನಂದ ಹೆಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!