AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆ ಕೇಸ್​​​: ಕರ್ನಾಟಕದ 18 ಕಡೆ ಇ.ಡಿ ದಾಳಿ

ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಇ.ಡಿ ಅಧಿಕಾರಿಗಳು ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದ 18 ಕಡೆ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳ ಮೇಲೆ ದಾಳಿ ಮಾಡಿದ್ದಾರೆ. ಬೆಳಗ್ಗೆ 6 ಗಂಟೆಗೆ ದಾಳಿ ಮಾಡಿರುವ ಇ.ಡಿ ಅಧಿಕಾರಿಗಳು ಮಹತ್ವದ ಪರಿಶೀಲನೆ ನಡೆಸಿದ್ದಾರೆ.

ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆ ಕೇಸ್​​​: ಕರ್ನಾಟಕದ 18 ಕಡೆ ಇ.ಡಿ ದಾಳಿ
ಇಡಿ ದಾಳಿ
Shivaprasad B
| Edited By: |

Updated on:Jun 25, 2025 | 1:02 PM

Share

ಬೆಂಗಳೂರು, ಜೂನ್​ 25: ಇಂಜಿನಿಯರಿಂಗ್ ಅಕ್ರಮ ಸೀಟ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಬಿಎಂಎಸ್​​ (BMS) ಕಾಲೇಜು ಸೇರಿ ಕರ್ನಾಟಕದ 18 ಕಡೆ ಇ.ಡಿ ದಾಳಿ (E.D Raid) ಮಾಡಿದೆ. ಮಲ್ಲೇಶ್ವರಂ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣಗಳ ಸಂಬಂಧ ಕೂಡ ಇಡಿ ದಾಳಿ ಮಾಡಿದ್ದು, ಬೆಳಗ್ಗೆ 6 ಗಂಟೆಯಿಂದ ಅಧಿಕಾರಿಗಳು ಕಡತಗಳ ಪರಿಶೀಲನೆ ಮಾಡಿದರು.

ಅಕ್ರಮ ಸೀಟ್ ಬ್ಲಾಕಿಂಗ್ ದಂಧೆ ಕೇಸ್​

2021-22ರಲ್ಲಿ ನಡೆದಿದ್ದ ಅಕ್ರಮ ಸೀಟ್ ಬ್ಲಾಕಿಂಗ್ ದಂಧೆಯಲ್ಲಿ ಬಿಎಂಎಸ್​ ಕಾಲೇಜಿನ ಟ್ರಸ್ಟ್ ವಿರುದ್ಧ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸೀಟ್ ಬ್ಲಾಕಿಂಗ್ ಕುರಿತು ರಮೇಶ್ ನಾಯಕ್ ದೂರು ನೀಡಿದ್ದರು. ಹಾಗಾಗಿ ಟ್ರಸ್ಟ್​ ಅಧ್ಯಕ್ಷೆ ರಾಗಿಣಿ ನಾರಾಯಣ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು.

ಇದನ್ನೂ ಓದಿ: ಹಣ ಕೊಟ್ಟವರಿಗೆ ಬೇಕಾಬಿಟ್ಟಿ ಅಂಕ: ಗುಲಬರ್ಗಾ ವಿವಿಯ ಕರ್ಮಕಾಂಡ ಬಯಲು

ಇದನ್ನೂ ಓದಿ
Image
ಪಿಯುಸಿಯಲ್ಲಿ ಫೇಲ್​​ ಆಗಿದ್ದ ವಿದ್ಯಾರ್ಥಿನಿ ಮೊದಲ ಪ್ರಯತ್ನದಲ್ಲೇ UPSCಪಾಸ್
Image
ಡಿಪ್ಲೊಮಾ ಕೋರ್ಸ್‌ಗೆ ಎಷ್ಟು ಶಿಕ್ಷಣ ಸಾಲ ಪಡೆಯಬಹುದು?
Image
SSLC ಫಲಿತಾಂಶ ಕಡಿಮೆ ಬಂದರೆ ಶಿಕ್ಷಕರ ವಾರ್ಷಿಕ ವೇತನ ಬಡ್ತಿಗೆ ತಡೆ!
Image
ರಾಮನಗರದಲ್ಲಿ ನಕಲಿ ಖಾಸಗಿ ಶಾಲೆಗಳ ಹಾವಳಿ: ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ

ಎಐಸಿಟಿಇ, ಯುಜಿಸಿ ನಿಯಮ ಉಲ್ಲಂಘಿಸಿ ಮೆರಿಟ್ ಸೀಟ್ ಹಂಚಿಕೆ ಮಾಡದೆ, ಅಕ್ರಮವಾಗಿ ಏಜೆಂಟ್​ ಮೂಲಕ ಸೀಟ್ ಹಂಚಿಕೆ ಮಾಡಲಾಗಿತ್ತು. ಆ ಮೂಲಕ ಖಾಸಗಿ ಕಾಲೇಜುಗಳು ಕೋಟ್ಯಂತರ ರೂ ಹಣ ಸಂಗ್ರಹ ಮಾಡಿರುವ ಆರೋಪ ಕೇಳಿಬಂದಿತ್ತು.

ಎರಡನೆ ಬಾರಿಗೆ‌ ಆಕಾಶ್ ಇಂಜಿನಿಯರಿಂಗ್ ಕಾಲೇಜ್​​ ಮೇಲೆ ಇಡಿ ದಾಳಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಆಕಾಶ್​ ಇಂಜಿನಿಯರಿಂಗ್ ಕಾಲೇಜ್​​ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಂಜಿನಿಯರಿಂಗ್ ಸೀಟ್​ ಬ್ಲಾಕಿಂಗ್ ಆರೋಪ ಹಿನ್ನೆಲೆ ಎರಡನೆ ಬಾರಿಗೆ‌ ಆಕಾಶ್​ ಇಂಜಿನಿಯರಿಂಗ್ ಕಾಲೇಜ್​​ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡಿದರು.

ಏನಿದು ಸೀಟ್ ಬ್ಲಾಕಿಂಗ್ ದಂಧೆ?

ಸಿಂಪಲ್​ ಆಗಿ ಹೇಳುವುದಾದರೆ ಮೊದಲೇ ಕಾಯ್ದಿರಿಸುವುದು ಅಥವಾ ರಿಸರ್ವೇಶನ್ ಪದ್ಧತಿ ಎನ್ನಬಹುದು. ಕೆಲವು ಪ್ರತಿಷ್ಠಿತ ಕಾಲೇಜುಗಳು ಮುಂಬರುವ ಶೈಕ್ಷಣಿಕ ವರ್ಷಕ್ಕೂ ಮೊದಲೇ ಸೀಟ್ ರಿಸರ್ವ್ ಮಾಡುತ್ತವೆ ಎನ್ನಬಹುದು.

ಇದನ್ನೂ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್: ವಿದ್ಯಾರ್ಥಿಗಳು, ಪೋಷಕರು ಇದನ್ನ ತಿಳಿದುಕೊಳ್ಳಲೇಬೇಕು!

ಪ್ರತಿ ವರ್ಷ ಅತ್ಯುತ್ತಮ ಕಾಲೇಜುಗಳಿಗೆ‌ ಸೇರಬೇಕೆಂಬುವುದು ಮಕ್ಕಳು ಮತ್ತ ಪೋಷಕರಲ್ಲಿ ತವಕ ಹೆಚ್ಚಿದೆ. ಇದನ್ನೇ ಭಂಡವಾಳವಾಗಿಸಿಕೊಂಡಿರುವ ಖಾಸಗಿ ಸಂಸ್ಥೆಗಳು ಈ ಸೀಟ್ ಬ್ಲಾಕಿಂಗ್ ದಂಧೆ ನಡೆಸಿವೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:01 pm, Wed, 25 June 25

ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು