AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ ಮಧ್ಯೆಯೂ ಬಿಎಂಟಿಸಿಗೆ ಭರ್ಜರಿ ಆದಾಯ, ಪ್ರಯಾಣಿಕರ ಸಂಖ್ಯೆಯೂ ಹೆಚ್ಚಳ

BMTC Income Raise: ಮಹಿಳೆಯರಿಗೆ ಉಚಿತ ಟಿಕೆಟ್ ಭಾಗ್ಯದ ನಡುವೆಯೂ ಬಿಎಂಟಿಸಿ ಭರ್ಜರಿ ಆದಾಯದಲ್ಲಿದೆ. ಶಕ್ತಿ ಯೋಜನೆಯ ಮುಂಚೆ ತಿಂಗಳಿಗೆ ನಾಲ್ಕುವರೆ ಕೋಟಿ ರೂಪಾಯಿ ಆದಾಯವಿದ್ದ ಬಿಎಂಟಿಸಿ, ಇದೀಗ ಹೆಚ್ಚುವರಿ ಬಸ್​​ಗಳಿಂದ ಇನ್ನಷ್ಟು ಕೋಟಿ ರೂಪಾಯಿಗಳನ್ನು ನಿಗಮದ ಬೊಕ್ಕಸಕ್ಕೆ ತುಂಬಿಸಿಕೊಳ್ಳುತ್ತಿದೆ.

ಶಕ್ತಿ ಯೋಜನೆ ಮಧ್ಯೆಯೂ ಬಿಎಂಟಿಸಿಗೆ ಭರ್ಜರಿ ಆದಾಯ, ಪ್ರಯಾಣಿಕರ ಸಂಖ್ಯೆಯೂ ಹೆಚ್ಚಳ
ಬಿಎಂಟಿಸಿ ಬಸ್ (ಸಂಗ್ರಹ ಚಿತ್ರ)
Kiran Surya
| Updated By: Ganapathi Sharma

Updated on: Aug 21, 2024 | 7:05 AM

Share

ಬೆಂಗಳೂರು, ಆಗಸ್ಟ್ 21: ಬೆಂಗಳೂರಿನ ಸಂಚಾರನಾಡಿ ಬಿಎಂಟಿಸಿಗೆ ಭರ್ಜರಿ ಆದಾಯದಿಂದಾಗಿ ಖಜಾನೆ ತುಂಬಿ ತುಳುಕುತ್ತಿದೆ. ಶಕ್ತಿ ಯೋಜನೆ ಮಧ್ಯೆಯೂ ಬಿಎಂಟಿಸಿಯಲ್ಲಿ ಸಂಚಾರ ಮಾಡುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಈ ಹಿಂದೆ ತಿಂಗಳಿಗೆ ನಾಲ್ಕೂವರೆ ಕೋಟಿ ರೂಪಾಯಿ ಆದಾಯ ನಿಗಮಕ್ಕೆ ಬರುತ್ತಿತ್ತು. ಅದರೆ ಶಕ್ತಿ ಯೋಜನೆ ಬಳಿಕ ಹಾಗೂ ಹೆಚ್ಚುವರಿ ಬಸ್​​ಗಳ ಸೇವೆಯಿಂದಾಗಿ ಇದೀಗ ಪ್ರತಿ ತಿಂಗಳು 6 ಕೋಟಿ ರೂಪಾಯಿ ಆದಾಯ ಬರುತ್ತಿದೆ.

ಪ್ರಯಾಣಿಕರ ಸಂಖ್ಯೆ ಏರಿಕೆ ಕಂಡಂತೆ, ನಗರದ ಹಲವು ಏರಿಯಾಗಳಿಗೆ ಹೆಚ್ಚುವರಿ 200 ಹೊಸ ಬಸ್​ಗಳನ್ನುಬಿಡಲಾಗಿದೆ. ಅವುಗಳು ಹೆಚ್ಚುವರಿ ಮಾರ್ಗವಾಗಿ ಪ್ರಯಾಣಿಕರಿಗೆ ಸೇವೆ ನೀಡುತ್ತಿವೆ. ಈ ಹಿನ್ನೆಲೆ ನಿಗಮದ ಖಜಾನೆಯೂ ತುಂಬಿತಿದೆ.

ಹೆಚ್ಚುವರಿ ಬಸ್​ಗಳು 2 ಸಾವಿರಕ್ಕೂ ಅಧಿಕ ಮಾರ್ಗಗಳಲ್ಲಿ ಕಾರ್ಯಾಚರಣೆ ಮಾಡುತ್ತಿದ್ದು, ಪಾಸ್, ಫ್ರೀ ಟಿಕೆಟ್ ಹೊರತುಪಡಿಸಿ, ದಿನಕ್ಕೆ 1 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಹಣ ಕೊಟ್ಟು ಸಂಚಾರ ಮಾಡುತ್ತಿದ್ದಾರೆ ಎಂದು ಬಿಎಂಟಿಸಿಯ ಕಾರ್ಯಾಚರಣೆ ವಿಭಾಗದ ಮುಖ್ಯ ‌ಸಂಚಾರ ವ್ಯವಸ್ಥಾಪಕ ಪ್ರಭಾಕರ್ ತಿಳಿಸಿದ್ದಾರೆ.

ಬಿಎಂಟಿಸಿಯ 50 ಡಿಪೋಗಳಿಂದ, ನಗರದಲ್ಲಿ ನಿತ್ಯ 5 ಸಾವಿರದ 700 ಬಸ್ ಗಳು ಕಾರ್ಯಾಚರಣೆ ಮಾಡುತ್ತಿವೆ. 1 ಲಕ್ಷ ಕಿಲೋ ಮೀಟರ್ ವ್ಯಾಪ್ತಿಯ ತನಕ ಸೇವೆ ನೀಡುತ್ತಿವೆ. ಸುಮಾರು 50 ಲಕ್ಷಕ್ಕೂ ಹೆಚ್ಚು ಜನ ಬಿಎಂಟಿಸಿಗೆ ಬಸ್​​ಗಳಲ್ಲಿ ಓಡಾಡುತ್ತಿದ್ದು. ದಿನದಿಂದ ದಿನಕ್ಕೆ ನಿಗಮದ ಖಜಾನೆ ತುಂಬುತ್ತಿದೆ. ಇದು ಶಕ್ತಿ ಯೋಜನೆಗೆ ಇನ್ನಷ್ಟು ಪುಷ್ಠಿ ನೀಡುತ್ತಿದೆ. ಈ ಬಗ್ಗೆ ಪ್ರಯಾಣಿಕರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಯುವಕನ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು!

ಒಟ್ಟಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ನಡುವೆಯೂ ಭರ್ಜರಿ ಆದಾಯ ಬರುತ್ತಿರುವುದು ನಿಗಮದ ಅಧಿಕಾರಿಗಳಿಗೆ ಖುಷಿ ತಂದಿದೆ. ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!