AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ ಮಧ್ಯೆಯೂ ಬಿಎಂಟಿಸಿಗೆ ಭರ್ಜರಿ ಆದಾಯ, ಪ್ರಯಾಣಿಕರ ಸಂಖ್ಯೆಯೂ ಹೆಚ್ಚಳ

BMTC Income Raise: ಮಹಿಳೆಯರಿಗೆ ಉಚಿತ ಟಿಕೆಟ್ ಭಾಗ್ಯದ ನಡುವೆಯೂ ಬಿಎಂಟಿಸಿ ಭರ್ಜರಿ ಆದಾಯದಲ್ಲಿದೆ. ಶಕ್ತಿ ಯೋಜನೆಯ ಮುಂಚೆ ತಿಂಗಳಿಗೆ ನಾಲ್ಕುವರೆ ಕೋಟಿ ರೂಪಾಯಿ ಆದಾಯವಿದ್ದ ಬಿಎಂಟಿಸಿ, ಇದೀಗ ಹೆಚ್ಚುವರಿ ಬಸ್​​ಗಳಿಂದ ಇನ್ನಷ್ಟು ಕೋಟಿ ರೂಪಾಯಿಗಳನ್ನು ನಿಗಮದ ಬೊಕ್ಕಸಕ್ಕೆ ತುಂಬಿಸಿಕೊಳ್ಳುತ್ತಿದೆ.

ಶಕ್ತಿ ಯೋಜನೆ ಮಧ್ಯೆಯೂ ಬಿಎಂಟಿಸಿಗೆ ಭರ್ಜರಿ ಆದಾಯ, ಪ್ರಯಾಣಿಕರ ಸಂಖ್ಯೆಯೂ ಹೆಚ್ಚಳ
ಬಿಎಂಟಿಸಿ ಬಸ್ (ಸಂಗ್ರಹ ಚಿತ್ರ)
ಕಿರಣ್​ ಸೂರ್ಯ
| Edited By: |

Updated on: Aug 21, 2024 | 7:05 AM

Share

ಬೆಂಗಳೂರು, ಆಗಸ್ಟ್ 21: ಬೆಂಗಳೂರಿನ ಸಂಚಾರನಾಡಿ ಬಿಎಂಟಿಸಿಗೆ ಭರ್ಜರಿ ಆದಾಯದಿಂದಾಗಿ ಖಜಾನೆ ತುಂಬಿ ತುಳುಕುತ್ತಿದೆ. ಶಕ್ತಿ ಯೋಜನೆ ಮಧ್ಯೆಯೂ ಬಿಎಂಟಿಸಿಯಲ್ಲಿ ಸಂಚಾರ ಮಾಡುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಈ ಹಿಂದೆ ತಿಂಗಳಿಗೆ ನಾಲ್ಕೂವರೆ ಕೋಟಿ ರೂಪಾಯಿ ಆದಾಯ ನಿಗಮಕ್ಕೆ ಬರುತ್ತಿತ್ತು. ಅದರೆ ಶಕ್ತಿ ಯೋಜನೆ ಬಳಿಕ ಹಾಗೂ ಹೆಚ್ಚುವರಿ ಬಸ್​​ಗಳ ಸೇವೆಯಿಂದಾಗಿ ಇದೀಗ ಪ್ರತಿ ತಿಂಗಳು 6 ಕೋಟಿ ರೂಪಾಯಿ ಆದಾಯ ಬರುತ್ತಿದೆ.

ಪ್ರಯಾಣಿಕರ ಸಂಖ್ಯೆ ಏರಿಕೆ ಕಂಡಂತೆ, ನಗರದ ಹಲವು ಏರಿಯಾಗಳಿಗೆ ಹೆಚ್ಚುವರಿ 200 ಹೊಸ ಬಸ್​ಗಳನ್ನುಬಿಡಲಾಗಿದೆ. ಅವುಗಳು ಹೆಚ್ಚುವರಿ ಮಾರ್ಗವಾಗಿ ಪ್ರಯಾಣಿಕರಿಗೆ ಸೇವೆ ನೀಡುತ್ತಿವೆ. ಈ ಹಿನ್ನೆಲೆ ನಿಗಮದ ಖಜಾನೆಯೂ ತುಂಬಿತಿದೆ.

ಹೆಚ್ಚುವರಿ ಬಸ್​ಗಳು 2 ಸಾವಿರಕ್ಕೂ ಅಧಿಕ ಮಾರ್ಗಗಳಲ್ಲಿ ಕಾರ್ಯಾಚರಣೆ ಮಾಡುತ್ತಿದ್ದು, ಪಾಸ್, ಫ್ರೀ ಟಿಕೆಟ್ ಹೊರತುಪಡಿಸಿ, ದಿನಕ್ಕೆ 1 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಹಣ ಕೊಟ್ಟು ಸಂಚಾರ ಮಾಡುತ್ತಿದ್ದಾರೆ ಎಂದು ಬಿಎಂಟಿಸಿಯ ಕಾರ್ಯಾಚರಣೆ ವಿಭಾಗದ ಮುಖ್ಯ ‌ಸಂಚಾರ ವ್ಯವಸ್ಥಾಪಕ ಪ್ರಭಾಕರ್ ತಿಳಿಸಿದ್ದಾರೆ.

ಬಿಎಂಟಿಸಿಯ 50 ಡಿಪೋಗಳಿಂದ, ನಗರದಲ್ಲಿ ನಿತ್ಯ 5 ಸಾವಿರದ 700 ಬಸ್ ಗಳು ಕಾರ್ಯಾಚರಣೆ ಮಾಡುತ್ತಿವೆ. 1 ಲಕ್ಷ ಕಿಲೋ ಮೀಟರ್ ವ್ಯಾಪ್ತಿಯ ತನಕ ಸೇವೆ ನೀಡುತ್ತಿವೆ. ಸುಮಾರು 50 ಲಕ್ಷಕ್ಕೂ ಹೆಚ್ಚು ಜನ ಬಿಎಂಟಿಸಿಗೆ ಬಸ್​​ಗಳಲ್ಲಿ ಓಡಾಡುತ್ತಿದ್ದು. ದಿನದಿಂದ ದಿನಕ್ಕೆ ನಿಗಮದ ಖಜಾನೆ ತುಂಬುತ್ತಿದೆ. ಇದು ಶಕ್ತಿ ಯೋಜನೆಗೆ ಇನ್ನಷ್ಟು ಪುಷ್ಠಿ ನೀಡುತ್ತಿದೆ. ಈ ಬಗ್ಗೆ ಪ್ರಯಾಣಿಕರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಯುವಕನ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು!

ಒಟ್ಟಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ನಡುವೆಯೂ ಭರ್ಜರಿ ಆದಾಯ ಬರುತ್ತಿರುವುದು ನಿಗಮದ ಅಧಿಕಾರಿಗಳಿಗೆ ಖುಷಿ ತಂದಿದೆ. ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್