AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಶನಿವಾರ ಮುಂಜಾನೆ ತಡವಾಗಿ ಆರಂಭವಾಗಲಿವೆ ತರಗತಿಗಳು; ಏಕರೂಪದ ಶಾಲಾ ಅವಧಿ ಜಾರಿ

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ ಶನಿವಾರದ ಅವಧಿಯನ್ನು ಏಕರೂಪಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ. ಇನ್ಮುಂದೆ ಶನಿವಾರದ ತರಗತಿಗಳು ಬೆಳಗ್ಗೆ 8:30 ರಿಂದ ಮಧ್ಯಾಹ್ನ 12:30 ರವರೆಗೆ ಮಾತ್ರ ನಡೆಯಲಿವೆ. ಈ ಹೊಸ ನಿಯಮದಿಂದ ಪೋಷಕರ ಗೊಂದಲ ನಿವಾರಣೆಯಾಗಲಿದ್ದು, ಶಿಕ್ಷಕರು ಆನ್‌ಲೈನ್ ಹಾಜರಾತಿ ದಾಖಲಿಸಲು ಸಹಕಾರಿಯಾಗಲಿದೆ.

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಶನಿವಾರ ಮುಂಜಾನೆ ತಡವಾಗಿ ಆರಂಭವಾಗಲಿವೆ ತರಗತಿಗಳು; ಏಕರೂಪದ ಶಾಲಾ ಅವಧಿ ಜಾರಿ
ಸಾಂದರ್ಭಿಕ ಚಿತ್ರImage Credit source: gettyimages.com
Vinay Kashappanavar
| Edited By: |

Updated on: Jun 27, 2026 | 11:04 AM

Share

ಮುಖ್ಯಾಂಶಗಳು

  • ಶನಿವಾರದ ಶಾಲಾ ಅವಧಿಯನ್ನು ಏಕರೂಪಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
  • ಇನ್ಮುಂದೆ ಶನಿವಾರ ಬೆಳಗ್ಗೆ 8:30 ರಿಂದ 12:30 ರವರೆಗೆ ಶಾಲೆ ನಡೆಯಲಿದೆ.
  • ಹೊಸ ನಿಯಮವು ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಅನ್ವಯಿಸುತ್ತದೆ.

ಬೆಂಗಳೂರು, ಜೂನ್ 27: ರಾಜ್ಯದ ಶಾಲಾ ಶಿಕ್ಷಣ (Education) ಮತ್ತು ಸಾಕ್ಷರತಾ ಇಲಾಖೆಯು ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರಿಗೆ ಬಿಗ್ ರಿಲೀಫ್ ನೀಡಿದ್ದು, ಶನಿವಾರದ ಶಾಲಾ ಅವಧಿಯನ್ನು ಏಕರೂಪಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ. ಇನ್ಮುಂದೆ ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೂ ಅನ್ವಯವಾಗುವಂತೆ ಶನಿವಾರ ಬೆಳಗ್ಗೆ 8:30 ರಿಂದ ಮಧ್ಯಾಹ್ನ 12:30 ರವರೆಗೆ ಒಟ್ಟು 4 ಗಂಟೆಗಳ ಕಾಲ ಮಾತ್ರ ತರಗತಿಗಳನ್ನು ನಡೆಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಗೊಂದಲಕ್ಕೆ ತೆರೆ ಎಳೆದ ಇಲಾಖೆ

ಇದುವರೆಗೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಶನಿವಾರದ ಶಾಲಾ ಅವಧಿ ಪ್ರದೇಶವಾರು ವಿಭಿನ್ನವಾಗಿತ್ತು. ಕೆಲವು ಕಡೆಗಳಲ್ಲಿ ಬೆಳಗ್ಗೆ 7:30 ರಿಂದ 11:30ರವರೆಗೆ ತರಗತಿಗಳು ನಡೆದರೆ, ಇನ್ನು ಕೆಲವು ಶಾಲೆಗಳಲ್ಲಿ ಬೆಳಗ್ಗೆ 8:00 ರಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಸಮಯ ನಿಗದಿಪಡಿಸಲಾಗಿತ್ತು. ಈ ಭಿನ್ನತೆಯಿಂದಾಗಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವ ಸಮಯದಲ್ಲಿ ತೀವ್ರ ಗೊಂದಲ ಎದುರಿಸುತ್ತಿದ್ದರು. ಈಗ ಇಲಾಖೆಯು ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದು, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಕಡ್ಡಾಯವಾಗಿ ಹೊಸ ಸಮಯವನ್ನೇ ಪಾಲಿಸಬೇಕು ಎಂದು ಆದೇಶಿಸಿದೆ.

ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ಅನುಕೂಲ

ಹೊಸ ನಿಯಮದಿಂದಾಗಿ ವಿದ್ಯಾರ್ಥಿಗಳು ಇನ್ಮುಂದೆ ಶನಿವಾರದ ದಿನದಂದು ಬೆಳ್ಳಂಬೆಳಗ್ಗೆ ಏಳುವ ಅವಸರ ತಪ್ಪಿದಂತಾಗಿದೆ. ಪೋಷಕರಿಗೂ ಸಹ ನಿಗದಿತ ಸಮಯದ ಕುರಿತು ಸ್ಪಷ್ಟತೆ ಸಿಕ್ಕಿರುವುದರಿಂದ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಕೇವಲ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಶಿಕ್ಷಕರಿಗೂ ಈ ಆದೇಶದಿಂದ ದೊಡ್ಡ ಅನುಕೂಲವಾಗಲಿದೆ. ರಾಜ್ಯ ಸರ್ಕಾರವು ಈಗಾಗಲೇ ಕಡ್ಡಾಯಗೊಳಿಸಿರುವ ಶಿಕ್ಷಕರ ಆನ್‌ಲೈನ್ ಹಾಜರಾತಿ ವ್ಯವಸ್ಥೆಯನ್ನು ಸಕಾಲದಲ್ಲಿ ಅಪ್‌ಡೇಟ್ ಮಾಡಲು ಈ ಏಕರೂಪದ ಸಮಯ ಸಹಕಾರಿಯಾಗಲಿದೆ. ಇಡೀ ರಾಜ್ಯದಲ್ಲಿ ಒಂದೇ ಸಮಯದಲ್ಲಿ ಶಾಲೆ ಆರಂಭವಾಗುವುದರಿಂದ ಶಿಕ್ಷಕರು ಯಾವುದೇ ಗೊಂದಲವಿಲ್ಲದೆ ನಿಖರವಾಗಿ ಆನ್‌ಲೈನ್ ಹಾಜರಾತಿ ದಾಖಲಿಸಲು ಸಾಧ್ಯವಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಇದನ್ನೂ ಓದಿ ನೀಟ್ ಸೋಲು ಜೀವನದ ಅಂತ್ಯವಲ್ಲ; ರೋಲ್ಸ್ ರಾಯ್ಸ್‌ನಲ್ಲಿ 72.3 ಲಕ್ಷ ರೂ. ಪ್ಯಾಕೇಜ್ ಪಡೆದು ಇತಿಹಾಸ ಸೃಷ್ಟಿಸಿದ 20ರ ಹರೆಯದ ರಿತುಪರ್ಣಾ!

ರಾಜ್ಯದ ಪ್ರತಿಯೊಂದು ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಮಂಡಳಿಗಳು ಈ ಹೊಸ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ತರಬೇಕು ಮತ್ತು ಶನಿವಾರ ಬೆಳಗ್ಗೆ 8:30 ರಿಂದ 12:30 ರ ಸಮಯವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಇಲಾಖೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ