AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ನಡೆಯುತ್ತಿರುವ ಕಮಿಷನ್ ದಂಧೆ ಸಂಪೂರ್ಣ ಜಾತಕ ಬಿಚ್ಚಿಟ್ಟ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್

ಚಿತ್ರದುರ್ಗ ಕ್ಷೇತ್ರದಲ್ಲಿ 700 ಕೋಟಿ ಕಾಮಗಾರಿ ಆಗಿದೆ. ಬಿಲ್ಡಿಂಗ್ ಗೆ 15 % ಪಡೆಯುತ್ತಾರೆ. ರಸ್ತೆಗೆ10% ಕಮಿಷನ್ ಬಗ್ಗೆ ಕೈ ನಲ್ಲೇ ಸೊನ್ನೆ ಮಾಡ್ತಾರೆ. 2019 ರಿಂದ ಇತ್ತೀಚೆಗೆ ನಾನೇ 90 ಲಕ್ಷ ಕಮಿಷನ್ ಕೊಟ್ಟಿದ್ದೇನೆ.

ರಾಜ್ಯದಲ್ಲಿ ನಡೆಯುತ್ತಿರುವ ಕಮಿಷನ್ ದಂಧೆ ಸಂಪೂರ್ಣ ಜಾತಕ ಬಿಚ್ಚಿಟ್ಟ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್  ಅಸೋಸಿಯೇಷನ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Jan 16, 2023 | 1:44 PM

ಬೆಂಗಳೂರು: ಚಾಮರಾಜಪೇಟೆಯ ಗುತ್ತಿಗೆದಾರರ ಸಂಘದ ಕಚೇರಿಯಲ್ಲಿ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಸುದ್ದಿಗೋಷ್ಠಿ ನಡೆಸಿದೆ. 25 ಸಾವಿರ ಕೋಟಿ ಬಾಕಿ ಹಣವನ್ನು ಸರ್ಕಾರ ಬಿಡುಗಡೆ ಮಾಡಬೇಕು. ಲೋಕೋಪಯೋಗಿ ಇಲಾಖೆಯಿಂದ 4 ಸಾವಿರ ಕೋಟಿ ಬಿಲ್ ಬಾಕಿ ಇದೆ. ಜ.18ರ ನಂತರ ರಾಜ್ಯಾದ್ಯಂತ ಕಾಮಗಾರಿ ಸ್ಥಗಿತಗೊಳಿಸಲು ತೀರ್ಮಾನ ಮಾಡಿದ್ದೇವೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನಾವು ಮಾಡಿರುವ ಆರೋಪಗಳು ಸತ್ಯ, ಅದನ್ನ ಪ್ರ್ಯೂ ಮಾಡ್ತೇವೆ. 25 ಸಾವಿರ ಕೋಟಿ ಬಾಕಿ ಹಣವನ್ನು ಸರ್ಕಾರ ಬಿಡುಗಡೆ ಮಾಡಬೇಕು. KIRDL ನಲ್ಲಿ ಕೆಲ್ಸ ಕೊಡಬೇಡಿ ಅಂದ್ರು ಕೂಡಾ ಕೊಡ್ತಿದ್ದಾರೆ. ಜನವರಿ 18 ರ ನಂತರ ಕಾಮಗಾರಿ ಸ್ಥಗಿತಗೊಳಿಸಲು ತೀರ್ಮಾನ ಮಾಡಿದ್ದೇವೆ. ಲಂಚ ಕೊಟ್ಟಿರೋದಕ್ಕೆ ದಾಖಲೆಗಳು ಇರಲ್ಲ, ಆದರೂ ಕೆಲ ದಾಖಲೆ ಇದೆ. 30 ದಿನ ಆದಮೇಲೆ ಮಾತಾಡ್ತೇವೆ. 19 ರಂದು ಕೋರ್ಟ್ ನಲ್ಲಿ ದಾಖಲೆಗಳನ್ನ ಸಲ್ಲಿಕೆ ಮಾಡ್ತಾಯಿದ್ದೇವೆ. ಇವತ್ತಿನಿಂದ 30 ದಿನಕ್ಕೆ ದಾಖಲೆಗಳನ್ನ ಬಿಡುಗಡೆ ಮಾಡ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಕೆಂಪಣ್ಣ ತಿಳಿಸಿದ್ದಾರೆ.

ಲಂಚ ಶುರುಮಾಡಿದ್ದೇ ಶಾಸಕ ತಿಪ್ಪಾರೆಡ್ಡಿ

ಇದೇ ವೇಳೆ ಚಿತ್ರದುರ್ಗ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ವಿರುದ್ಧ ಲಂಚ ಪಡೆದ ಆರೋಪ ಸಂಬಂಧ ರಾಜ್ಯ ಗುತ್ತಿಗೆದಾರರ ಸಂಘದ ಕಾರ್ಯದರ್ಶಿ ಮಂಜುನಾಥ್ ಮಾತನಾಡಿದ್ದು, ಸೂರ್ಯ ಚಂದ್ರ ಇರೋದು ಎಷ್ಟು ಸತ್ಯನೋ ಭ್ರಷ್ಟಾಚಾರ ಇರೋದು ಸತ್ಯ. 14 ಜನ ಶಾಸಕರ ಲಂಚ ದಾಖಲೆಗಳು ಇದೆ. ಸಂತೋಷ್ ಕೇಸ್ ನಲ್ಲಿ ಬಿ ರಿಪೋರ್ಟ್ ಹಾಕಿದ್ದಾರೆ. ನಮ್ಮ ಅಧ್ಯಕ್ಷರನ್ನ ಅರೆಸ್ಟ್ ಮಾಡಿದ್ದಾರೆ. ಸಂತೋಷ ಪಾಟೀಲ್‌ದು ಏನ್ ಆಗಿತ್ತು? ನಾವು ಒಂದು ದಾಖಲೆ ಬಿಡುಗಡೆ ಮಾಡ್ತೇನೆ. ನಮ್ಮ ಜಿಲ್ಲೆಯಲ್ಲಿ ಭ್ರಷ್ಟಾಚಾರ ಇರಲಿಲ್ಲ. ಚಿತ್ರದುರ್ಗ ಜಿಲ್ಲೆಯ ಶಾಸಕರು ತಿಪ್ಪಾರೆಡ್ಡಿ ಅವರು ಶುರುಮಾಡಿದ್ದಾರೆ. ಲಂಚ ಶುರುಮಾಡಿದ್ದೇ ಶಾಸಕ ತಿಪ್ಪಾರೆಡ್ಡಿ. ಲೋಕಾಯುಕ್ತಕ್ಕೆ ಅಫಿಡೇವಿಟ್ ಮಾಡಿದ್ದೇವೆ. ಒಟ್ಟು 13 ಜನ ಶಾಸಕರು 4-5 ಜನ ಸಚಿವರ ದಾಖಲೆಗಳು ಇದೆ. ತಿಪ್ಪಾರೆಡ್ಡಿ ಅವರು ಲಂಚ ಪಡೆದಿರುವ ಬಗ್ಗೆ ಆಡಿಯೋ ಇದೆ, ವಾಟ್ಸ್ ಆ್ಯಪ್ ರೆಕಾರ್ಡ್ ಕೂಡಾ ಇದೆ. ಶೇ. 25% ಕಮಿಷನ್ ಪಡೆಯುತ್ತಿದ್ದಾರೆ ಎಂದು ಮಂಜುನಾಥ್ ಆರೋಪಿಸಿದ್ದಾರೆ.

ಚಿತ್ರದುರ್ಗ ಕ್ಷೇತ್ರದಲ್ಲಿ 700 ಕೋಟಿ ಕಾಮಗಾರಿ ಆಗಿದೆ. ಬಿಲ್ಡಿಂಗ್ ಗೆ 15 % ಪಡೆಯುತ್ತಾರೆ. ರಸ್ತೆಗೆ10% ಕಮಿಷನ್ ಬಗ್ಗೆ ಕೈ ನಲ್ಲೇ ಸೊನ್ನೆ ಮಾಡ್ತಾರೆ. 2019 ರಿಂದ ಇತ್ತೀಚೆಗೆ ನಾನೇ 90 ಲಕ್ಷ ಕಮಿಷನ್ ಕೊಟ್ಟಿದ್ದೇನೆ. ತಿಪ್ಪಾರೆಡ್ಡಿ ಅವರ ಆಡಿಯೋ ರಿಲೀಸ್ ಮಾಡಲಾಗ್ತಿದೆ. ಬಿಡಬ್ಲ್ಯೂಡಿ ಕೇಸ್ ನಲ್ಲಿ ಶಾಸಕ ತಿಪ್ಪಾರೆಡ್ಡಿ ಕಮಿಷನ್ ಕೇಳಿರುವ ಆಡಿಯೋ ರಿಲೀಸ್ ಆಗಿದೆ ಎಂದರು.

ನಾವು ಕಮಿಷನ್ ಕೊಡಲಿಲ್ಲ ಅಂದ್ರೆ ಇಂಜಿನಿಯರ್ ಗಳಿಗೆ ಒತ್ತಡ ಹಾಕ್ತಾರೆ. ಪಿಡಬ್ಲ್ಯೂಡಿ ಬಿಲ್ಡಿಂಗ್ ಕಟ್ಟಿ ಮೂರು ವರ್ಷ ಆಯಿತು. ಬಿಲ್ ಕೊಡಿ ಅಂದ್ರೆ ಕಮಿಷನ್ ಕೇಳಿದ್ರು. 2.5 ಕೋಟಿ ಕಾಮಗಾರಿಗೆ ಲಕ್ಷಾಂತರ ರೂಪಾಯಿ ಕಮಿಷನ್ ನೀಡಿದ್ದೇನೆ ಎಂದರು.’

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:50 pm, Mon, 16 January 23

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ