AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿಗೆ ದರ ನಿಗದಿ ನಿರ್ಧಾರ ಪ್ರಶ್ನಿಸಿ ರಿಟ್ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್​​

ಕಬ್ಬಿನ ದರ ನಿಗದಿಪಡಿಸಿದ್ದ ಸರ್ಕಾರದ ಆದೇಶವನ್ನು ಸಕ್ಕರೆ ಕಾರ್ಖಾನೆಗಳು ಹೈಕೋರ್ಟ್‌ನಲ್ಲಿ ಪ್ರಶ್ನಿಸಿವೆ. ಆದಾಗ್ಯೂ, ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಲು ನಿರಾಕರಿಸಿದೆ ಮತ್ತು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. 3250 ರೂ. ದರದಿಂದ ಕಾರ್ಖಾನೆಗಳಿಗೆ ನಷ್ಟವಾಗುತ್ತದೆ ಎಂದು ವಾದಿಸಿವೆ. ನ್ಯಾಯಾಲಯವು ರೈತರಿಲ್ಲದೆ ಕಾರ್ಖಾನೆಗಳಿಲ್ಲ ಎಂದು ಹೇಳಿ ಮುಂದಿನ ವಿಚಾರಣೆಯನ್ನು ಡಿಸೆಂಬರ್ 17ಕ್ಕೆ ನಿಗದಿಪಡಿಸಿದೆ.

ಕಬ್ಬಿಗೆ ದರ ನಿಗದಿ ನಿರ್ಧಾರ ಪ್ರಶ್ನಿಸಿ ರಿಟ್ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್​​
ಹೈಕೋರ್ಟ್​​ಗೆ ರಿಟ್​​ ಅರ್ಜಿ
Ramesha M
| Edited By: |

Updated on:Dec 09, 2025 | 2:18 PM

Share

ಬೆಂಗಳೂರು, ಡಿಸೆಂಬರ್​​ 09: ಕಬ್ಬಿಗೆ ಸರ್ಕಾರದ ದರ ನಿಗದಿ ಪ್ರಶ್ನಿಸಿ ವಿವಿಧ ಸಕ್ಕರೆ ಕಾರ್ಖಾನೆಗಳಿಂದ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್ ಏಕಸದಸ್ಯ ಪೀಠ, ಈ ಹಂತದಲ್ಲಿ ಮಧ್ಯಂತರ ತಡೆಯಾಜ್ಞೆ ಸಾಧ್ಯವಿಲ್ಲವೆಂದು ತಿಳಿಸಿದೆ. ಜೊತೆಗೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಮುಂದಿನ ವಿಚಾರಣೆಯನ್ನು ಡಿಸೆಂಬರ್ 17ಕ್ಕೆ ನಿಗದಿಪಡಿಸಿದೆ.

ರಾಜ್ಯ ಸರ್ಕಾರ ಪ್ರತಿ ಮೆಟ್ರಿಕ್​​ ಟನ್​​ ಕಬ್ಬಿಗೆ 3250 ರೂ. ದರ ನಿಗದಿ ಮಾಡಿದೆ. ಕಟಾವು, ಸಾಗಾಣಿಕೆ ಸೇರಿದರೆ ಕಾರ್ಖಾನೆಗಳಿಗೆ 4,150 ರೂ. ವೆಚ್ಚವಾಗಲಿದ್ದು, ಕಾನೂನು ಪಾಲಿಸದೇ ರಾಜ್ಯ ಸರ್ಕಾರ ಏಕಪಕ್ಷೀಯ ಆದೇಶ ನೀಡಿದೆ. ಹೀಗಾಗಿ ಸಕ್ಕರೆ ಕಾರ್ಖಾನೆಗಳಿಗೆ ಭರಿಸಲಾಗದ ನಷ್ಟ ಉಂಟಾಗಲಿದೆ ಎಂದು ಹಲವು ಸಕ್ಕರೆ ಕಾರ್ಖಾನೆಗಳು ಆರೋಪಿಸಿದ್ದವು. ರೇಣುಕಾ ಶುಗರ್ಸ್, ನಿರಾಣಿ ಶುಗರ್ಸ್, ಜೆಮ್ ಶುಗರ್ಸ್, ಕೆಪಿಆರ್ ಶುಗರ್ಸ್, ಗೋದಾವರಿ ಬಯೋ ರಿಪೈನರೀಸ್ ಈ ಬಗ್ಗೆ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದವು. ಸೌತ್ ಇಂಡಿಯಾ ಶುಗರ್ ಮಿಲ್ಸ್​ ಅಸೋಸಿಯೇಷನ್ ಪರ ಹಿರಿಯ ವಕೀಲ ಹೆಚ್.ಎನ್. ಶಶಿಧರ್ ವಾದ ಮಂಡಿಸಿದ್ದರು. ಈ ವೇಳೆ ರೈತರು ಇಲ್ಲದೆ ನೀವ್ಯಾರೂ ಇಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಎಥೆನಾಲ್ ಸೇರಿ ಎಲ್ಲದರಲ್ಲೂ ಸಂಪಾದಿಸಿದರೂ ರೈತರಿಗೆ ಕೊಡಲು ಬಯಸಲ್ಲ ಎಂದು ನ್ಯಾ.ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ.

ಇದನ್ನೂ ಓದಿ: ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ಕೊನೆಗೂ ಫಲ, ಪ್ರತಿ ಟನ್ ಕಬ್ಬಿಗೆ 3,300 ರೂ ನಿಗದಿ

ಕಬ್ಬಿಗೆ ಬೆಲೆ ನಿಗದಿಗೆ ಆಗ್ರಹಿಸಿ ರಾಜ್ಯದ ವಿವಿಧೆಡೆ ರೈತರು ಬೀದಿಗಿಳಿದಿದ್ದರು. ಅನ್ನದಾತರ ಹೋರಾಟ ತೀವ್ರವಾಗುತ್ತಿದ್ದಂತೆ ಮಧ್ಯಪ್ರವೇಶಿಸಿದ್ದ ರಾಜ್ಯ ಸರ್ಕಾರ ಈ ಬಗ್ಗೆ ಮಹತ್ವದ ಸಭೆ ನಡೆಸಿತ್ತು. ಟನ್​​ ಕಬ್ಬಿಗೆ 3,500 ರೂ. ಬೆಂಬಲ ಬೆಲೆ ಕೊಡಬೇಕೆಂಬ ರೈತರ ಪಟ್ಟಿನ ನಡುವೆ, ಪ್ರತಿ ಟನ್ ಕಬ್ಬಿಗೆ 3,300 ರೂ. ದರವನ್ನು ಸರ್ಕಾರ ನಿಗದಿಪಡಿಸಿತ್ತು. ಸಭೆ ಬಳಿಕ ಮಾತನಾಡಿದ್ದ ಸಿಎಂ, ಪ್ರತಿ ಟನ್ ಕಬ್ಬಿಗೆ 3,200 ರೂ. ದರ ನಿಗದಿ ಮಾಡಲಾಗಿದ್ದು, ಜೊತೆಗೆ 100 ರೂ. ಸೇರಿಸಿ ಕೊಡುತ್ತೇವೆ. ಅಂದರೆ ಸರ್ಕಾರದಿಂದ 50 ರೂ., ಕಾರ್ಖಾನೆಯಿಂದ 50 ರೂ. ನೀಡಲಾಗುತ್ತೆ ಎಂದಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:15 pm, Tue, 9 December 25

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ