ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆ: 100 ದಿನಗಳೊಳಗೆ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ!

ಕರ್ನಾಟಕ ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದೆ. ಮುಂದಿನ 100 ದಿನಗಳ ಒಳಗೆ 15,000 ಪ್ರಾಥಮಿಕ ಶಿಕ್ಷಕರು ಹಾಗೂ 2,500 ಐಟಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಶಿಕ್ಷಣ ಇಲಾಖೆ ಸಜ್ಜಾಗಿದೆ. ಮುಂದಿನ ವಾರವೇ ಅಧಿಕೃತ ಅಧಿಸೂಚನೆ ಹೊರಬೀಳಲಿದ್ದು, ಎರಡು ತಿಂಗಳೊಳಗೆ ಪರೀಕ್ಷೆ ಮತ್ತು ಫಲಿತಾಂಶ ಪ್ರಕಟವಾಗಲಿದೆ.

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಕೊಡುಗೆ: 100 ದಿನಗಳೊಳಗೆ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ!
ಸಾಂದರ್ಭಿಕ ಚಿತ್ರ
Image Credit source: gettyimages.com
Edited By:

Updated on: Jun 10, 2026 | 11:22 AM

ಬೆಂಗಳೂರು, ಜೂನ್ 10: ರಾಜ್ಯದಲ್ಲಿ ಸರ್ಕಾರಿ ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಶಿಕ್ಷಣ ಇಲಾಖೆಯು ಭರ್ಜರಿ ಸಿಹಿ ಸುದ್ದಿ ನೀಡಿದೆ. ಮುಂಬರುವ 100 ದಿನಗಳ ಒಳಗಾಗಿ 15,000 ಪ್ರಾಥಮಿಕ ಶಾಲಾ ಶಿಕ್ಷಕರ (Teachers) ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರ್ಕಾರ ಮುಂದಾಗಿದೆ. ಮುಂದಿನ ವಾರದಲ್ಲೇ ಇದಕ್ಕೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಹೊರಬೀಳಲಿದೆ.

ಮುಖ್ಯಾಂಶಗಳು

  • ಮುಂದಿನ 100 ದಿನಗಳ ಒಳಗೆ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪೂರ್ಣಗೊಳ್ಳಲಿದೆ.
  • ಕಂಪ್ಯೂಟರ್ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗಳಿಗೆ 2,500 ಐಟಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ.
  • ಮುಂದಿನ ವಾರ ಅಧಿಕೃತ ನೋಟಿಫಿಕೇಶನ್ ಪ್ರಕಟವಾಗಲಿದ್ದು, ಎರಡು ತಿಂಗಳಲ್ಲಿ ಪರೀಕ್ಷೆ ನಡೆಯಲಿದೆ.

2500 ಐಟಿ ಶಿಕ್ಷಕರ ನೇಮಕ!

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಪ್ರಸ್ತುತ 80 ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಕೊರತೆಯಿದೆ. ಈ ಕೊರತೆಯನ್ನು ನೀಗಿಸಲು ಒಟ್ಟು 51 ಸಾವಿರ ಶಿಕ್ಷಕರ ನೇಮಕಾತಿಗೆ ಆರ್ಥಿಕ ಇಲಾಖೆಯ ಅನುಮೋದನೆ ಸಿಕ್ಕಿದ್ದು, ಮೊದಲ ಹಂತದಲ್ಲಿ 15 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಇದರಲ್ಲಿ ಪ್ರಾಥಮಿಕ, ಪ್ರೌಢಶಾಲೆ, ದೈಹಿಕ ಶಿಕ್ಷಣ ಹಾಗೂ ವಿಶೇಷವಾಗಿ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡುವ ಉದ್ದೇಶದಿಂದ 2,500 ಐಟಿ (ಮಾಹಿತಿ ತಂತ್ರಜ್ಞಾನ) ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಈ ಶೈಕ್ಷಣಿಕ ವರ್ಷದಲ್ಲೇ ಹೊಸ ಶಿಕ್ಷಕರು ಶಾಲೆಗಳಲ್ಲಿ ಬೋಧನೆಗೆ ಲಭ್ಯವಾಗಲಿದ್ದಾರೆ.

ಇದನ್ನೂ ಓದಿ Karnataka Teaching Jobs: ಅತಿಥಿ ಉಪನ್ಯಾಸಕ ಹುದ್ದೆಗಳ ಆಕಾಂಕ್ಷಿಗಳಿಗೆ ಸುವರ್ಣಾವಕಾಶ; ನೇಮಕಾತಿ ವೇಳಾಪಟ್ಟಿ ಪ್ರಕಟ!

ಎರಡು ತಿಂಗಳಲ್ಲಿ ಪರೀಕ್ಷೆ ಮತ್ತು ರಿಸಲ್ಟ್ಸ್

ಶಿಕ್ಷಣ ಇಲಾಖೆಯು ಹೊಸ ಸಿಆರ್‌ ಆಂಡ್ ಆರ್‌ ನಿಯಮಾವಳಿಗಳ ಅಡಿಯಲ್ಲಿ PSTR, GPSTR ಹಾಗೂ HSTR ಹುದ್ದೆಗಳ ಸಮಗ್ರ ವಿವರಗಳನ್ನು ಬಿಡುಗಡೆ ಮಾಡಲಿದೆ. ನೋಟಿಫಿಕೇಶನ್ ಪ್ರಕಟವಾದ ಕೇವಲ ಎರಡು ತಿಂಗಳ ಒಳಗೆ ಪರೀಕ್ಷೆ ನಡೆಸಿ, ಫಲಿತಾಂಶ ಪ್ರಕಟಿಸುವ ಮೂಲಕ ಇಡೀ ನೇಮಕಾತಿ ಪ್ರಕ್ರಿಯೆಯನ್ನು ಶರವೇಗದಲ್ಲಿ ಮುಗಿಸಲು ಇಲಾಖೆ ಸಜ್ಜಾಗಿದೆ. ಕಳೆದ ಹಲವು ವರ್ಷಗಳಿಂದ ಶಿಕ್ಷಕರ ಹುದ್ದೆಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಇದು ಸುವರ್ಣ ಅವಕಾಶವಾಗಿದ್ದು, ತಕ್ಷಣವೇ ಪರೀಕ್ಷಾ ಸಿದ್ಧತೆ ಆರಂಭಿಸುವಂತೆ ಇಲಾಖೆ ಕೋರಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Vinay Kashappanavar
Follow Us