AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್​​​ ನ್ಯೂಸ್​​: ವೇತನ ಹಿಂಬಾಕಿ ಪಾವತಿಗೆ 450 ಕೋಟಿ ರೂ. ಬಿಡುಗಡೆ!

ರಾಜ್ಯ ಸರ್ಕಾರವು ದೀರ್ಘಕಾಲದಿಂದ ಬಾಕಿ ಇದ್ದ ಸಾರಿಗೆ ನೌಕರರ 26 ತಿಂಗಳ ವೇತನ ಹಿಂಬಾಕಿಯ ಮೊದಲ ಹಂತವಾಗಿ 450 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದೆ. ಒಟ್ಟು 1,271.92 ಕೋಟಿ ರೂ. ಪಾವತಿಸಬೇಕಿದ್ದು, KSRTC, BMTC, NWKRTC, ಮತ್ತು KKRTC ನಿಗಮಗಳಿಗೆ ಹಣ ಹಂಚಿಕೆ ಮಾಡಲಾಗಿದೆ. ಈ ನಡೆ ನೌಕರರಿಗೆ ತಾತ್ಕಾಲಿಕ ಸಮಾಧಾನ ತಂದಿದ್ದರೂ, ಉಳಿದ 821.92 ಕೋಟಿ ರೂ. ಬಿಡುಗಡೆಗಾಗಿ ನೌಕರರ ಒಕ್ಕೂಟಗಳು ಒತ್ತಾಯಿಸುತ್ತಿವೆ.

ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್​​​ ನ್ಯೂಸ್​​: ವೇತನ ಹಿಂಬಾಕಿ ಪಾವತಿಗೆ 450 ಕೋಟಿ ರೂ.  ಬಿಡುಗಡೆ!
ಸಾಂದರ್ಭಿಕ ಚಿತ್ರ Image Credit source: AI image
ಕಿರಣ್​ ಸೂರ್ಯ
| Edited By: |

Updated on:Apr 29, 2026 | 3:55 PM

Share

ಬೆಂಗಳೂರು, ಏ.29: ಹಲವು ದಿನಗಳಿಂದ ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವೆ ಹಲವು ಬೇಡಿಕೆಗಳ ಕುರಿತು ಭಾರೀ ಗೊಂದಲಗಳು ಉಂಟಾಗಿದೆ. ಇದಕ್ಕಾಗಿ ಪ್ರತಿಭಟನೆಗಳನ್ನು ಕೂಡ ನಡೆಸಿದರು. ಆದರೆ ಇದೀಗ ಸಾರಿಗೆ ನೌಕರರಿಗೆ ಬಿಗ್​​​​​ ಗುಡ್​​ ನ್ಯೂಸ್​ ನೀಡಿದೆ. ದೀರ್ಘಕಾಲದ ಕಾಯುವಿಕೆಯ ನಂತರ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಬಾಕಿ ಇರುವ ವೇತನ ಹಿಂಬಾಕಿಯನ್ನು (Arrears) ಪಾವತಿಸಲು ಮೊದಲ ಹಂತದಲ್ಲಿ 450 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಸಾರಿಗೆ ಸಂಸ್ಥೆಯ ನೌಕರರಿಗೆ ಕಳೆದ 26 ತಿಂಗಳ ವೇತನ ಹಿಂಬಾಕಿಯಾಗಿ ಒಟ್ಟು 1,271.92 ಕೋಟಿ ರೂ. ಬಿಡುಗಡೆ ಮಾಡಬೇಕಿತ್ತು. ಆದರೆ, ಪ್ರಸ್ತುತ ಹಣಕಾಸಿನ ಲಭ್ಯತೆಯ ಆಧಾರದ ಮೇಲೆ ಮೊದಲ ಹಂತವಾಗಿ ಸರ್ಕಾರ ₹450 ಕೋಟಿಯನ್ನು ಬಿಡುಗಡೆ ಮಾಡಿದೆ.

ನಿಗಮವಾರು ಹಣ ಹಂಚಿಕೆ ಹೇಗೆ?

KSRTC (ಕೆಎಸ್‌ಆರ್‌ಟಿಸಿ): 143.85 ಕೋಟಿ ರೂ.

BMTC (ಬಿಎಂಟಿಸಿ): 137.24 ಕೋಟಿ ರೂ.

NWKRTC (ವಾಯುವ್ಯ ಕರ್ನಾಟಕ ಸಾರಿಗೆ): 87.00 ಕೋಟಿ ರೂ.

KKRTC (ಕಲ್ಯಾಣ ಕರ್ನಾಟಕ ಸಾರಿಗೆ): 81.91 ಕೋಟಿ ರೂ.

ಇದನ್ನೂ ಓದಿ: ಬಿಎಂಟಿಸಿ, ಮೆಟ್ರೋದಲ್ಲಿ ಸಂಚಾರ ಮಾಡಲು ಒಂದೇ ಸ್ಮಾರ್ಟ್ ಕಾರ್ಡ್ ಸಾಕು! ಶೀಘ್ರದಲ್ಲೇ ಹೊಸ ವ್ಯವಸ್ಥೆ

ಈ ಅನುದಾನವು ಸಾರಿಗೆ ನೌಕರರ ಆರ್ಥಿಕ ಸಂಕಷ್ಟವನ್ನು ಸ್ವಲ್ಪಮಟ್ಟಿಗೆ ನೀಗಿಸಲಿದ್ದು, ಬಾಕಿ ಇರುವ ಉಳಿದ ಮೊತ್ತವನ್ನು ಮುಂದಿನ ಹಂತಗಳಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ. ಮೊದಲ ಹಂತದ ಬಿಡುಗಡೆಯನ್ನು ಸ್ವಾಗತಿಸಿದರೂ, ಬಾಕಿ ಇರುವ ಸುಮಾರು 821.92 ಕೋಟಿ ರೂ. ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ನೌಕರರ ಒಕ್ಕೂಟಗಳು ಒತ್ತಾಯಿಸುತ್ತಿವೆ. ಸರ್ಕಾರವು ಸಮಯ ಮಿತಿಯೊಳಗೆ ಪೂರ್ಣ ಹಣ ಬಿಡುಗಡೆ ಮಾಡದಿದ್ದರೆ ಮತ್ತೆ ಪ್ರತಿಭಟನೆ ಮಾಡಲಾಗುವುದು ಎಂಬ ಮಾತುಗಳು ಕೇಳಿ ಬಂದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:06 pm, Wed, 29 April 26

Follow Us
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ