AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೆಕ್ಕಿಂಗ್​​ ಪ್ರಿಯರೇ ಗಮನಿಸಿ: ವನ್ಯಜೀವಿ ಓಡಾಟವಿರುವ ಚಾರಣಪಥಗಳಲ್ಲಿ ಸಂಚಾರಕ್ಕೆ ತಾತ್ಕಾಲಿಕ ಬ್ರೇಕ್​​

ಚಾಮರಾಜನಗರದಲ್ಲಿ ಚಿರತೆ ದಾಳಿಗೆ ಬಾಲಕ ಬಲಿಯಾದ ಹಿನ್ನೆಲೆಯಲ್ಲಿ, ಕರ್ನಾಟಕ ಅರಣ್ಯ ಇಲಾಖೆ ರಾಜ್ಯಾದ್ಯಂತ ವನ್ಯಜೀವಿ ಸಂಚಾರವಿರುವ ಚಾರಣಪಥಗಳಲ್ಲಿ ಟ್ರೆಕ್ಕಿಂಗ್‌ ನಿಷೇಧಿಸಿದೆ. ಸಾರ್ವಜನಿಕರ ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ಹುಲಿ, ಆನೆ, ಚಿರತೆ ಸಂಘರ್ಷ ಇರುವ ಪ್ರದೇಶಗಳಲ್ಲಿ ಮುಂದಿನ ಆದೇಶದವರೆಗೆ ಚಾರಣ ಬಂದ್ ಆಗಿದೆ. ಹೊಸ ಸುರಕ್ಷತಾ ನಿಯಮಾವಳಿಗಳು (SOPs) ಜಾರಿಯಾಗುವವರೆಗೆ ಚಟುವಟಿಕೆಗಳು ಸ್ಥಗಿತಗೊಳ್ಳಲಿವೆ.

ಟ್ರೆಕ್ಕಿಂಗ್​​ ಪ್ರಿಯರೇ ಗಮನಿಸಿ: ವನ್ಯಜೀವಿ ಓಡಾಟವಿರುವ ಚಾರಣಪಥಗಳಲ್ಲಿ ಸಂಚಾರಕ್ಕೆ ತಾತ್ಕಾಲಿಕ ಬ್ರೇಕ್​​
ಸಾಂದರ್ಭಿಕ ಚಿತ್ರImage Credit source: shutterstock.com
ಹರೀಶ್ ಜಿ.ಆರ್​.
| Edited By: |

Updated on: May 12, 2026 | 6:57 PM

Share

ಬೆಂಗಳೂರು, ಮೇ 12: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗದಲ್ಲಿ ಚಿರತೆ ದಾಳಿಗೆ ಬಾಲಕ ಬಲಿ ಬೆನ್ನಲ್ಲೇ ರಾಜ್ಯದಲ್ಲಿ ವನ್ಯಜೀವಿಗಳ ಓಡಾಟವಿರುವ ಎಲ್ಲ ಚಾರಣಪಥಗಳಲ್ಲಿನ ಸಂಚಾರ ಬಂದ್​​ ಮಾಡಿ ಆದೇಶಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಸಚಿವ ಈಶ್ವರ ಖಂಡ್ರೆ ಅವರ ಸೂಚನೆ ಮೇರೆಗೆ ಹುಲಿ, ಆನೆ, ಚಿರತೆ ಸಂಘರ್ಷ ಇರುವ ಪ್ರದೇಶಗಳಲ್ಲಿ ಟ್ರೆಕ್ಕಿಂಗ್​​ಗೆ ಬ್ರೇಕ್ ಹಾಕಲಾಗಿದೆ.

ಮುಖ್ಯಾಂಶಗಳು

  • ಎಂ.ಎಂ. ಹಿಲ್ಸ್​​ ವ್ಯಾಪ್ತಿಯಲ್ಲಿ ಚಿರತೆ ದಾಳಿಗೆ ಬಾಲಕ ಬಲಿ
  • ಘಟನೆ ಬೆನ್ನಲ್ಲೇ ಅರಣ್ಯ ಇಲಾಖೆಯಿಂದ ಮಹತ್ವದ ಕ್ರಮ
  • ವನ್ಯಜೀವಿ ಸಂಚಾರವಿರುವ ಎಲ್ಲ ಚಾರಣಪಥಗಳು ಕ್ಲೋಸ್​​

ಆದೇಶದಲ್ಲಿ ಏನಿದೆ?

ಮೇ 10 ರಂದು ನಾಗಮಲೆ ಅರಣ್ಯ ಪ್ರದೇಶ, ಎಂ. ಎಂ. ಹಿಲ್ಸ್ ವನ್ಯಜೀವಿ ವಿಭಾಗದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿರುವ ಹಿನ್ನಲೆಯಲ್ಲಿ ಹಾಗೂ ವನ್ಯಪ್ರಾಣಿಗಳು ಸಂಚರಿಸುವ ಸಂಚಾರ ಪಥಗಳಲ್ಲಿ ಸಾರ್ವಜನಿಕರ ಹಾಗೂ ಟ್ರೆಕ್ಕರ್‌ಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಚಿರತೆ, ಹುಲಿ, ಆನೆ, ಕರಡಿ ಹಾಗೂ ಇತರೆ ವನ್ಯಪ್ರಾಣಿಗಳು ಸಂಚರಿಸುವ ಹಾಗೂ ಸದರಿ ಪ್ರದೇಶಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಸಂಭವವಿರುವ ಎಲ್ಲಾ ಸಂಚಾರ ಪಥಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲಾಗಿದೆ. ಮುಂದಿನ ಆದೇಶದವರೆಗೆ ಈ ಸೂಚನೆ ಅನ್ವಯವಾಗಲಿದೆ ಎಂದು ಪ್ರಧಾನ ಮುಖ್ಯ ಅರಣ್ಯಸಂರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಚಾರಣಿಗರಿಗೆ ಸ್ಟ್ರಿಕ್ಟ್ ರೂಲ್ಸ್! ಹೊಸ ಎಸ್​ಒಪಿ ಬಗ್ಗೆ ಅರಣ್ಯ ಸಚಿವರು ಕೊಟ್ಟ ಮಾಹಿತಿ ಇಲ್ಲಿದೆ

ಚಾರಣ ಚಟುವಟಿಕೆಗಳಿಗೆ ಹೊಸ ಎಸ್​ಒಪಿ

ಇನ್ನುಚಾರಣ ಚಟುವಟಿಕೆಗಳಿಗೆ ಹೊಸ ಎಸ್​ಒಪಿ ಪಾಲಿಸುವುದು ಕಡ್ಡಾಯವಾಗಲಿದ್ದು, ಮುನ್ನೆಚ್ಚರಿಕೆ ಕ್ರಮಕೈಗೊಳ್ಳದ ಪಥಗಳಲ್ಲಿ ಚಟುವಟಿಕೆ ನಿಲ್ಲಿಸಲು ನಿರ್ಧರಿಸಲಾಗಿದೆ. ನಿಯಮ ಪಾಲನೆಗೆ ಸಿದ್ಧತೆ ಮಾಡಿಕೊಂಡ ನಂತರವಷ್ಟೇ ಚಾರಣಕ್ಕೆ ಅವಕಾಶ ಸಿಗಲಿದ್ದು, ಈ ಬಗ್ಗೆ ಮುಖ್ಯ ವನ್ಯಜೀವಿ ಪರಿಪಾಲಕರು ಪ್ರತ್ಯೇಕ ಸುತ್ತೋಲೆ ಹೊರಡಿಸಿದ್ದಾರೆ. ಪರಿಸರ ಪ್ರವಾಸೋದ್ಯಮ ಮಂಡಳಿ ಮೇಲ್ವಿಚಾರಣೆಯ ಪಥಗಳಿಗೂ ಇದು ಅನ್ವಯವಾಗಲಿದ್ದು, ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us