AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜು.25ರಂದು ಕಾಂಡಿಮೆಂಟ್ಸ್​-ಬೇಕರಿ, ಅಂಗಡಿಗಳು ಬಂದ್: ​ಹಾಲು, ಸಿಗರೇಟ್ ಸಿಗಲ್ಲ!

UPI ಮೂಲಕ ದೊಡ್ಡ ಮೊತ್ತದ ವಹಿವಾಟು ನಡೆಸಿದ ವ್ಯಾಪಾರಿಗಳಿಗೆ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿದೆ. ಇದರಿಂದ ಆಕ್ರೋಶಗೊಂಡಿರುವ ವ್ಯಾಪಾರಿಗಳು "ನೋ ಗೂಗಲ್ ಪೇ, ಫೋನ್ ಪೇ" ಎಂದು ಬೋರ್ಡ್ ಹಾಕಿದ್ದಾರೆ. ಜೊತೆಗೆ ಜುಲೈ 25ರಂದು ಅಂಗಡಿ ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ತರಕಾರಿ ವ್ಯಾಪಾರಿಗಳು ಕೂಡ ಈ ನೋಟಿಸ್ ನಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಜು.25ರಂದು ಕಾಂಡಿಮೆಂಟ್ಸ್​-ಬೇಕರಿ, ಅಂಗಡಿಗಳು ಬಂದ್: ​ಹಾಲು, ಸಿಗರೇಟ್ ಸಿಗಲ್ಲ!
ಸಾಂದರ್ಭಿಕ ಚಿತ್ರ
Kiran Surya
| Updated By: ವಿವೇಕ ಬಿರಾದಾರ|

Updated on:Jul 20, 2025 | 1:36 PM

Share

ಬೆಂಗಳೂರು, ಜುಲೈ 20: ಯುಪಿಐ (UPI) ಮೂಲಕ 40 ಲಕ್ಷ ರೂಪಾಯಿಗಿಂತ ಅಧಿಕ ವಹಿವಾಟು ನಡೆಸಿದ ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿಗಳು ಕಮರ್ಷಿಯಲ್ ಟ್ಯಾಕ್ಸ್ ಪಾವತಿ ಮಾಡಬೇಕೆಂಬ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ (Karnataka Commercial Tax Department) ನೋಟಿಸ್​ಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ವಾಣಿಜ್ಯ ಇಲಾಖೆಯ ನೋಟಿಸ್​ಗೆ ಸಿಡಿದೆದ್ದಿರುವ ವರ್ತಕರು ‘ನೋ ಗೂಗಲ್​, ಫೋನ್​ ಪೇ’ ಕ್ಯಾಶ್ ನೀಡಿ ಅಂತ ಬೋರ್ಡ್​ಗಳನ್ನು ಹಾಕುತ್ತಿದ್ದಾರೆ. ಅಲ್ಲದೆ, ವಾಣಿಜ್ಯ ಇಲಾಖೆಯ ನೋಟಿಸ್ ನೀಡಿದ್ದನ್ನು ಖಂಡಿಸಿ ಕಾಂಡಿಮೆಂಟ್,​ ಕಾಫಿ, ಟೀ ಅಂಗಡಿ ಮಾಲೀಕರು ಹಾಗೂ ಸಣ್ಣಪುಟ್ಟ ವ್ಯಾಪಾರಿಗಳು ಜು.25ರಂದು ತಮ್ಮ ಅಂಗಡಿಗಳನ್ನು ಬಂದ್ ಮಾಡಲು ನಿರ್ಧರಿಸಿದ್ದಾರೆ. ಈಗಾಗಲೆ ವರ್ತಕರು ಕರಪತ್ರ ಹಂಚಿ ಜುಲೈ 25ರಂದು ಬಂದ್​ ಮಾಡುವಂತೆ ಮನವಿ ಮಾಡುತ್ತಿದ್ದಾರೆ.

ವರ್ತಕರು ಜುಲೈ 25ರ ಬೆಳಗ್ಗೆ 10 ಗಂಟೆಗೆಯಿಂದ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಇನ್ನು, ಜುಲೈ 23ರಿಂದ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಏಕೆಂದರೆ, ವ್ಯಾಪಾರಿಗಳು ಜುಲೈ 23ರಿಂದ ಕಪ್ಪುಪಟ್ಟಿ ಕಟ್ಟಿಕೊಂಡು, ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಬಿಟ್ಟು, ಇತರೆ ವಸ್ತುಗಳನ್ನು ವ್ಯಾಪಾರ ಮಾಡುವ ನಿರ್ಧಾರ ಮಾಡಿದ್ದಾರೆ.

ತರಕಾರಿ ಅಂಗಡಿಗೂ ನೋಟಿಸ್​

ಬೆಂಗಳೂರಿನ ಮಂಜುನಾಥ ನಗರದಲ್ಲಿರುವ ಕೆಂಪೇಗೌಡ ತರಕಾರಿ ಅಂಗಡಿ ಮಾಲೀಕರಿಗೂ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್​ ನೀಡಿದ್ದು, 43 ಲಕ್ಷ ರೂ. ಕಮರ್ಷಿಯಲ್ ಟ್ಯಾಕ್ಸ್ ಪಾವತಿಸುವಂತೆ ಸೂಚಿಸಿದೆ. ನೋಟಿಸ್​ನಿಂದ ಆಘಾತಕ್ಕೆ ಒಳಗಾಗಿರುವ ತರಕಾರಿ ಅಂಗಡಿ ಮಾಲೀಕ ಟಿವಿ9 ಪ್ರತಿನಿಧಿ ಮುಂದೆ ಅಳಲು ತೋಡಿಕೊಂಡಿದ್ದಾರೆ. “ಎರಡು ವರ್ಷದಿಂದ ವ್ಯಾಪಾರ ಮಾಡುತ್ತಿದ್ದೇನೆ. ಎರಡು ಬಾರಿ ನೋಟಿಸ್ ನೀಡಿ 43 ಲಕ್ಷ ರೂ. ಕಟ್ಟಲು ಹೇಳುತ್ತಿದ್ದಾರೆ. ಇಷ್ಟು ಹಣ ಕಟ್ಟಲು ಹೇಳಿದರೇ, ಅಂಗಡಿ ಬಂದ್​ ಮಾಡಿ ಊರಿಗೆ ಹೋಗಬೇಕಾಗುತ್ತದೆ” ಎಂದು ತರಕಾರಿ ಅಂಗಡಿ ಮಾಲೀಕ ಸಾಗರ್ ಹೇಳಿದ್ದಾರೆ.

ಇದನ್ನೂ ಓದಿ
Image
ತಳ್ಳುವ ಗಾಡಿ ವ್ಯಾಪಾರಿಗೂ ವಾಣಿಜ್ಯ ಇಲಾಖೆ ನೋಟಿಸ್!
Image
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
Image
ಪಾಕ್​ನಲ್ಲಿ ಫೋನ್‌ಪೇ-ಪೇಟಿಎಂ ಇಲ್ಲ: ಈ ಆ್ಯಪ್ ಯೂಸ್ ಮಾಡ್ತಾರೆ
Image
ಇತರರಿಗೆ ನಿಮ್ಮ ಯುಪಿಐ ಬಳಸಲು ಅನುಮತಿಸುವ ಸರ್ಕಲ್ ಫೀಚರ್

ಇದನ್ನೂ ಓದಿ: ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ವಾಣಿಜ್ಯ ಇಲಾಖೆ

ಕೆ.ಆರ್.ಮಾರ್ಕೆಟ್ ಸುತ್ತಮುತ್ತ ನೋ ಯುಪಿಐ

ಕೆ.ಆರ್. ಮಾರುಕಟ್ಟೆ ಸುತ್ತಮುತ್ತಲಿನ ಹಲವು ಅಂಗಡಿ, ಮುಂಗಟ್ಟುಗಳಲ್ಲಿ ನೋ ಗೂಗಲ್​, ಫೋನ್​ ಪೇ’ ಕ್ಯಾಶ್ ನೀಡಿ ಎಂದು ಬೋರ್ಡ್​ಗಳನ್ನು ಹಾಕಲಾಗಿದೆ. ವ್ಯಾಪಾರಿಗಳು ನಗದು ವ್ಯವಹಾರಕ್ಕೆ ಮಾತ್ರ ಆಸಕ್ತಿ ತೋರುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 1:31 pm, Sun, 20 July 25