AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vehicle Emission Test Price Hike: ವಾಹನ ಸವಾರರ ಜೇಬಿಗೆ ಕತ್ತರಿ: ರಾಜ್ಯದಲ್ಲಿ ಎಮಿಷನ್ ಟೆಸ್ಟ್ ದರ ಏರಿಕೆ!

ರಾಜ್ಯದ ಕೋಟ್ಯಂತರ ವಾಹನ ಮಾಲೀಕರಿಗೆ ಸಾರಿಗೆ ಇಲಾಖೆಯಿಂದ ಶಾಕ್ ಎದುರಾಗಿದೆ. ಇಂದಿನಿಂದ ಬೈಕ್, ಆಟೋ, ಕಾರು ಹಾಗೂ ಡೀಸೆಲ್ ವಾಹನಗಳ ಎಮಿಷನ್ ಟೆಸ್ಟಿಂಗ್ ದರವನ್ನು ಹೆಚ್ಚಳ ಮಾಡಲಾಗಿದೆ. ನೂತನ ದರ ಪಟ್ಟಿ, ನಿಯಮಗಳು ಮತ್ತು ಸಾರ್ವಜನಿಕರ ಅಭಿಪ್ರಾಯ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Vehicle Emission Test Price Hike: ವಾಹನ ಸವಾರರ ಜೇಬಿಗೆ ಕತ್ತರಿ: ರಾಜ್ಯದಲ್ಲಿ ಎಮಿಷನ್ ಟೆಸ್ಟ್ ದರ ಏರಿಕೆ!
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Aug 17, 2026 | 7:53 AM

Share

ಮುಖ್ಯಾಂಶಗಳು

  • ರಾಜ್ಯದಲ್ಲಿ ಇಂದಿನಿಂದ ವಾಹನಗಳ ಎಮಿಷನ್ ಟೆಸ್ಟ್ ದರ ಹೆಚ್ಚಳವಾಗಿದೆ.
  • ಬೈಕ್, ಕಾರು, ಬಸ್ ಸೇರಿದಂತೆ ಎಲ್ಲಾ ವಾಹನಗಳಿಗೂ ದರ ಬಿಸಿ.
  • ಸರ್ಕಾರದ ಈ ಹಠಾತ್ ನಿರ್ಧಾರಕ್ಕೆ ವಾಹನ ಮಾಲೀಕರಿಂದ ತೀವ್ರ ಅಸಮಾಧಾನ.

ಬೆಂಗಳೂರು, ಆಗಸ್ಟ್ 17: ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಕಂಗಾಲಾಗಿರುವ ರಾಜ್ಯದ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮತ್ತೊಂದು ಬಿಗ್ ಶಾಕ್ ನೀಡಿದೆ. ರಾಜ್ಯದಲ್ಲಿ ಇಂದಿನಿಂದಲೇ ಜಾರಿಗೆ ಬರುವಂತೆ ವಾಹನಗಳ ಎಮಿಷನ್ ಸರ್ಟಿಫಿಕೇಟ್ (ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ/PUC) ದರವನ್ನು ಹೆಚ್ಚಳ ಮಾಡಲಾಗಿದೆ.

4 ವರ್ಷಗಳ ಬಳಿಕ ಮತ್ತೆ ಏರಿಕೆಯಾದ ಎಮಿಷನ್ ದರ

ದ್ವಿಚಕ್ರ ವಾಹನ, ಆಟೋ, ಕಾರು, ಲಾರಿ ಹಾಗೂ ಬಸ್ ಸೇರಿದಂತೆ ಯಾವುದೇ ಮಾದರಿಯ ವಾಹನ ಮಾಲೀಕರಿಗೂ ಇಂದಿನಿಂದ ಈ ದರ ಏರಿಕೆಯ ಬಿಸಿ ತಟ್ಟಲಿದೆ. 2021-2022ರಲ್ಲಿ ಕೊನೆಯ ಬಾರಿಗೆ ಎಮಿಷನ್ ಟೆಸ್ಟಿಂಗ್ ದರವನ್ನು ಪರಿಷ್ಕರಿಸಲಾಗಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳವಾಗಿರುವುದು, ಕೇಂದ್ರಗಳ ಬಾಡಿಗೆ, ಕರೆಂಟ್ ಬಿಲ್ ಹಾಗೂ ಸಿಬ್ಬಂದಿಯ ಸಂಬಳ ಭರಿಸಲು ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ದರ ಹೆಚ್ಚಿಸುವಂತೆ ‘ಕರ್ನಾಟಕ ಎಮಿಷನ್ ಟೆಸ್ಟಿಂಗ್ ಸೆಂಟರ್ ಓನರ್ಸ್ ಅಸೋಸಿಯೇಷನ್’ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಮನವಿ ಸಲ್ಲಿತ್ತು. ಈ ಮನವಿಯನ್ನು ಪುರಸ್ಕರಿಸಿರುವ ಸರ್ಕಾರ, ಈಗ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಎಮಿಷನ್ ಟೆಸ್ಟಿಂಗ್ ಕೇಂದ್ರಗಳ ನಿರ್ವಹಣಾ ವೆಚ್ಚ ಸಾಕಷ್ಟು ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ದರ ಏರಿಕೆ ಅನಿವಾರ್ಯವಾಗಿತ್ತು ಎಂದು ಎಮಿಷನ್ ಸರ್ಟಿಫಿಕೇಟ್ ಟೆಸ್ಟಿಂಗ್ ಸೆಂಟರ್ ಅಸೋಸಿಯೇಷನ್ ರಾಜ್ಯಾಧ್ಯಕ್ಷರಾದ ಯೋಗೀಶ್ ತಿಳಿಸಿದ್ದಾರೆ.

ಯಾವ ವಾಹನಕ್ಕೆ ಎಷ್ಟಿತ್ತು? ಈಗ ಎಷ್ಟಾಗಿದೆ? (ಹಳೆಯ vs ಹೊಸ ದರ ಪಟ್ಟಿ)

ವಾಹನದ ಮಾದರಿ ಹಳೆಯ ದರ  ಪರಿಷ್ಕೃತ ನೂತನ ದರ
ದ್ವಿಚಕ್ರ ವಾಹನ (ಬೈಕ್/ಸ್ಕೂಟರ್) 65 ರೂ. 80 ರೂ.
ತ್ರಿಚಕ್ರ ವಾಹನ (ಆಟೋ, ಗೂಡ್ಸ್) 75 ರೂ.  80 ರೂ.
ನಾಲ್ಕು ಚಕ್ರದ ಪೆಟ್ರೋಲ್ ಕಾರುಗಳು 115 ರೂ.  150 ರೂ.
ಎಲ್ಲಾ ಮಾದರಿಯ ಡೀಸೆಲ್ ವಾಹನಗಳು  160 ರೂ. 200 ರೂ.

ಸವಾರರಿಗೆ ನಿಯಮ ಪಾಲನೆ ಕಡ್ಡಾಯ: ತಪ್ಪಿದರೆ ದಂಡದ ಬಿಸಿ!

ರಾಜ್ಯದಲ್ಲಿ ಒಟ್ಟು ಮೂರುವರೆ ಕೋಟಿಗೂ ಹೆಚ್ಚು ವಾಹನಗಳಿದ್ದು, ಕೇವಲ ರಾಜಧಾನಿ ಬೆಂಗಳೊಂದರಲ್ಲೇ ಸುಮಾರು 1 ಕೋಟಿ 30 ಲಕ್ಷಕ್ಕೂ ಅಧಿಕ ವಾಹನಗಳಿವೆ. ಪ್ರತಿಯೊಂದು ವಾಹನವೂ ನಿಯಮಾನುಸಾರ ಪ್ರತಿ 6 ತಿಂಗಳು ಅಥವಾ ವರ್ಷಕ್ಕೊಮ್ಮೆ ಎಮಿಷನ್ ಟೆಸ್ಟ್ ಮಾಡಿಸುವುದು ಕಡ್ಡಾಯ.

ಎಮಿಷನ್ ಸರ್ಟಿಫಿಕೇಟ್ ಇಲ್ಲದಿದ್ದರೆ ಸಂಚಾರ ಪೊಲೀಸರು 500 ರೂ. ಇಂದ 1,000 ರೂ.ವರೆಗೆ ದಂಡ ವಿಧಿಸುತ್ತಾರೆ. ಆರ್‌ಟಿಒ (RTO) ಅಧಿಕಾರಿಗಳು ವಾಹನಗಳಿಗೆ ಎಫ್‌ಸಿ (Fitness Certificate) ನವೀಕರಿಸುವುದಿಲ್ಲ. ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಎಮಿಷನ್ ಸರ್ಟಿಫಿಕೇಟ್ ಇಲ್ಲದಿದ್ದರೆ ಇನ್ಶೂರೆನ್ಸ್ ಕ್ಲೈಮ್ ಸಿಗುವುದು ಕಷ್ಟವಾಗುತ್ತದೆ. ಈ ಹಿಂದೆ ಪ್ರತಿ ಎಮಿಷನ್ ಟೆಸ್ಟ್‌ಗೆ ಸರ್ಕಾರಕ್ಕೆ 3.25 ರೂ. ನೀಡಬೇಕಿತ್ತು, ಆದರೆ ಈಗ ಸರ್ಕಾರಕ್ಕೆ ನೀಡಬೇಕಾದ ಪಾಲು 13.80 ರೂ.ಗೆ ಏರಿಕೆಯಾಗಿದೆ.

ಸಾರ್ವಜನಿಕರ ಆಕ್ರೋಶ

ಸರ್ಕಾರದ ಈ ತೀರ್ಮಾನಕ್ಕೆ ವಾಹನ ಮಾಲೀಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿ ಆರು ತಿಂಗಳಿಗೊಮ್ಮೆ ಎಮಿಷನ್ ಮಾಡಿಸಬೇಕು. ಈಗಾಗಲೇ ಬೆಲೆ ಏರಿಕೆಯಿಂದ ತೊಂದರೆಯಲ್ಲಿದ್ದೇವೆ, ಈಗ ಈ ದರ ಹೆಚ್ಚಳ ಸಾಮಾನ್ಯ ಹಾಗೂ ಬಡ ವಾಹನ ಸವಾರರಿಗೆ ಹೆಚ್ಚುವರಿ ಹೊರೆಯಾಗಲಿದೆ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ. ಒಟ್ಟಿನಲ್ಲಿ, ದಿನನಿತ್ಯದ ಸಾರಿಗೆ ವೆಚ್ಚ ಹೆಚ್ಚಾಗುತ್ತಿರುವುದರ ನಡುವೆಯೇ ಸಾರಿಗೆ ಇಲಾಖೆಯ ಈ ನಿರ್ಧಾರ ಕೋಟ್ಯಂತರ ವಾಹನ ಮಾಲೀಕರ ಜೇಬಿಗೆ ಮತ್ತಷ್ಟು ಕತ್ತರಿ ಹಾಕುವುದು ಖಚಿತವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ