AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ನೀರಿನ ಸಮಸ್ಯೆ: ಕೃಷ್ಣಾ ನದಿಗೆ ಹೆಚ್ಚು ನೀರು ಬಿಡುವಂತೆ ಮಹಾರಾಷ್ಟ್ರ ಸಿಎಂಗೆ ಪತ್ರ ಬರೆದ ಸಚಿವ ಪ್ರಲ್ಹಾದ್​ ಜೋಶಿ

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮನುಷ್ಯರಿಗೆ ಮಾತ್ರವಲ್ಲದೆ, ಜಾನುವಾರುಗಳಿಗೂ ಕುಡಿಯುವ ನೀರಿನ ಸಮಸ್ಯೆ ಆಗಿದ್ದು, ವಾರ್ಣಾ, ಕೋಯ್ನಾ ಜಲಾಶಯದಿಂದ ನೀರು ಬಿಡುವಂತೆ ಮಹಾರಾಷ್ಟ್ರ ಸಿಎಂ ಏಕನಾಥ್​ ಶಿಂಧೆ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಪತ್ರ ಬರೆದಿದ್ದಾರೆ.

ಕರ್ನಾಟಕದಲ್ಲಿ ನೀರಿನ ಸಮಸ್ಯೆ: ಕೃಷ್ಣಾ ನದಿಗೆ ಹೆಚ್ಚು ನೀರು ಬಿಡುವಂತೆ ಮಹಾರಾಷ್ಟ್ರ ಸಿಎಂಗೆ ಪತ್ರ ಬರೆದ ಸಚಿವ ಪ್ರಲ್ಹಾದ್​ ಜೋಶಿ
ಸಚಿವ ಪ್ರಲ್ಹಾದ್​ ಜೋಶಿ
ಗಂಗಾಧರ​ ಬ. ಸಾಬೋಜಿ
|

Updated on:Apr 24, 2023 | 10:42 PM

Share

ಬೆಂಗಳೂರು: ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟ, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ (water crisis) ಎದುರಾಗಿದೆ. ಈ ಕುರಿತು ಮಹಾರಾಷ್ಟ್ರದ ವಾರ್ಣಾ, ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 3 ಟಿಎಂಸಿ ಹಾಗೂ ಉಜ್ಜಿನಿ ಜಲಾಶಯದಿಂದ ಭೀಮಾ ನದಿಗೆ 3 ಟಿಎಂಸಿ ನೀರು ಹರಿಸುವಂತೆ ಮಹಾರಾಷ್ಟ್ರ ಸಿಎಂ ಏಕನಾಥ್​ ಶಿಂಧೆ (Eknath Shinde) ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಪತ್ರ ಬರೆದಿದ್ದಾರೆ. ಈ ಕುರಿತು ಪ್ರಲ್ಹಾದ್​ ಜೋಶಿ ತಮ್ಮ ಟ್ವೀಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕರೆ ಮಾಡಿ ಮಾತನಾಡಿದ್ದು, ಬೇಡಿಕೆಗೆ ಸ್ಪಂದಿಸಿ ನೀರು ಒದಗಿಸಲು ಒಪ್ಪಿದ್ದಾರೆ ಎಂದು ಹೇಳಿದ್ದಾರೆ.

ಸಚಿವ ಪ್ರಲ್ಹಾದ್​ ಜೋಶಿ ಬರೆದ ಪತ್ರದಲ್ಲೇನಿದೆ?

ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಯಾದಗಿರಿ ಮತ್ತು ರಾಯಚೂರಿನಲ್ಲಿ ಏಪ್ರಿಲ್ 2023ರ ಆರಂಭದ ದಿನಗಳಲ್ಲಿ ತೀವ್ರ ಬೇಸಿಗೆಯ ಕಾರಣದಿಂದ ಕುಡಿಯುವ ನೀರಿನ ತೀವ್ರ ಕೊರತೆಯನ್ನು ಎದುರಿಸುತ್ತಿದೆ ಎಂದು ನಾನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ.

ಇದನ್ನೂ ಓದಿ: Mann Ki Baat@100: ಮನ್ ಕಿ ಬಾತ್ 100 ಕೋಟಿ ಕೇಳುಗರನ್ನು ತಲುಪಿದೆ: IIM ಸಮೀಕ್ಷೆ

ಕೃಷ್ಣಾ ನದಿಗೆ ವಾರ್ಣಾ ಮತ್ತು ಕೊಯ್ನಾ ಜಲಾಶಯದಿಂದ 3 ಟಿಎಂಸಿ ನೀರು ಮತ್ತು ಉಜ್ಜಿನಿಯಿಂದ 3 ಟಿಎಂಸಿ ನೀರು ಬಿಡುವಂತೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ದಿನಾಂಕ:18.04.2023 ರ ಪತ್ರದ ಮೂಲಕ ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಮನವಿ ಸಲ್ಲಿಸಲಾಗಿದೆ.  ಮಹಾರಾಷ್ಟ್ರದಿಂದ ಕರ್ನಾಟಕದ ಭೀಮಾ ನದಿ ಜಲಾಶಯಕ್ಕೆ ಮನುಷ್ಯರು ಮತ್ತು ಜಾನುವಾರುಗಳು ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸುವಂತೆ ತಿಳಿಸಲಾಗಿದೆ.

ಹಿಂದೆ, ಇಂತಹ ಸಂದರ್ಭಗಳಲ್ಲಿ, ಮಹಾರಾಷ್ಟ್ರ ರಾಜ್ಯವು ಉದಾತ್ತತೆಯನ್ನು ತೋರಿದೆ. ಮತ್ತು ಕರ್ನಾಟಕ ರಾಜ್ಯದ ಮನವಿಗೆ ಸ್ಪಂದಿಸಿ ನೀರು ಬಿಡಲಾಗಿತ್ತು. ಕರ್ನಾಟಕದಲ್ಲಿ ಸಂಕಷ್ಟದ ಸಮಯದಲ್ಲಿ ಮನುಷ್ಯರು ಮತ್ತು ಜಾನುವಾರುಗಳ ಕುಡಿಯುವ ನೀರಿನ ಅಗತ್ಯತೆ ಇದೆ.

ಇದನ್ನೂ ಓದಿ: ಏಪ್ರಿಲ್ 26ರಂದು ಕರ್ನಾಟಕಕ್ಕೆ ಬುಲ್ಡೋಜರ್ ಖ್ಯಾತಿಯ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭೇಟಿ

ಮಾನವೀಯ ನೆಲೆಯಲ್ಲಿ ಕರ್ನಾಟಕದ ಮನವಿಯನ್ನು ಪರಿಗಣಿಸಲು ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಕುಡಿಯುವ ನೀರಿನ ತುರ್ತು ಅವಶ್ಯಕತೆಗಳನ್ನು ಪೂರೈಸಲು ನೀರನ್ನು ಬಿಡುಗಡೆ ಮಾಡಲು ಸಂಬಂಧಿಸಿದ ಸಚಿವಾಲಯ ಅಥವಾ ಅಧಿಕಾರಿಗಳಿಗೆ ನಿರ್ದೇಶಿಸಲು ನಾನು ನಿಮ್ಮನ್ನು ವಿನಂತಿಸುತ್ತೇನೆ ಎಂದು ಸಚಿವ ಪ್ರಲ್ಹಾದ್​ ಜೋಶಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:19 pm, Mon, 24 April 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ