Karnataka Weather Today: ರಾಜ್ಯದಲ್ಲಿಂದು ಒಣ ಹವೆಯ ಸಾಧ್ಯತೆ; ಹವಾಮಾನ ಇಲಾಖೆ ವರದಿ

Karnataka Weather: ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು ದಕ್ಷಿಣ  ಒಳನಾಡು ಪ್ರದೇಶಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಬೆಂಗಳೂರಲ್ಲಿ ಮೋಡಕವಿದ ವಾತಾವರಣದ ಸಾಧ್ಯತೆ ಇದ್ದರೆ, ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Karnataka Weather Today: ರಾಜ್ಯದಲ್ಲಿಂದು ಒಣ ಹವೆಯ ಸಾಧ್ಯತೆ; ಹವಾಮಾನ ಇಲಾಖೆ ವರದಿ
ರಾಜ್ಯದಲ್ಲಿಂದು ಒಣ ಹವೆಯ ವಾತಾವರಣ

Updated on: Nov 14, 2025 | 7:16 AM

ಬೆಂಗಳೂರು, ನವೆಂಬರ್ 14: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಒಣ ಹವೆಯಿರಲಿದೆ  (Weather Forecast)  ಎಂದು ಹವಾಮಾನ ಇಲಾಖೆ ತಿಳಿಸಿದೆ. ನವೆಂಬರ್ 17ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ

ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆ ಸಾಧ್ಯತೆ ತೀರಾ ವಿರಳವಾಗಿರಲಿದೆ. ಕರಾವಳಿಯಲ್ಲೂ ಸಧ್ಯಕ್ಕೆ ವರುಣಾರ್ಭಟ ನಿಂತಿದ್ದು, ಮಳೆಯ ಸಾಧ್ಯತೆ ಕಡಿಮೆಯಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಉಳಿದ ಭಾಗಗಳಂತೆ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 18°C ಇರಲಿದೆ. ಗಾಳಿಯ ವೇಗ ಗಂಟೆಗೆ 13 ಕಿ.ಮೀ. ಇರಲಿದೆ. ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.