AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Today: ರಾಜ್ಯದಲ್ಲಿ ಇಂದೂ ಮುಂದುವರೆಯಲಿರುವ ಒಣ ಹವೆಯ ವಾತಾವರಣ

Karnataka Weather: ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಧ್ಯಕ್ಕೆ ಮಳೆಯಾರ್ಭಟ ನಿಂತಿದ್ದು, ಇಂದು ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ವಾತಾವರಣ ಮುಂದುವರೆಯಲಿದ್ದು, ಬೆಂಗಳೂರಿನಲ್ಲಿಯೂ ಮೋಡ ಕವಿದ ವಾತಾವರಣವಿರಲಿದೆ ಎಂಬ ಮುನ್ಸೂಚನೆ ಇದೆ.

Karnataka Weather Today: ರಾಜ್ಯದಲ್ಲಿ ಇಂದೂ ಮುಂದುವರೆಯಲಿರುವ ಒಣ ಹವೆಯ ವಾತಾವರಣ
ರಾಜ್ಯದಲ್ಲಿ ಇಂದೂ ಮುಂದುವರೆಯಲಿರುವ ಒಣ ಹವೆಯ ವಾತಾವರಣ
ಭಾವನಾ ಹೆಗಡೆ
|

Updated on: Nov 26, 2025 | 7:48 AM

Share

ಬೆಂಗಳೂರು, ನವೆಂಬರ್ 26: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ನಿನ್ನೆ ಹಲವೆಡೆ ಒಣ ಹವೆಯ ವಾತಾವರಣ ಇತ್ತು. ಇಂದೂ ಸಹ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣವಿರಲಿದೆ (Weather Forecast) ಎಂದು ಹವಾಮಾನ ಇಲಾಖೆ ವರದಿ ಮಾಡಿದ್ದು, ಬೆಂಗಳೂರಿನ ಕೆಲವೆಡೆ ಮೋಡ ಕವಿದ ವಾತಾವರಣ ಇರಬಹುದು ಎನ್ನಲಾಗಿದೆ.

ಯಾವೆಲ್ಲಾ ಪ್ರದೇಶಗಳಲ್ಲಿ ಒಣ ಹವೆ

ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆ ಸಾಧ್ಯತೆ ತೀರಾ ವಿರಳವಾಗಿರಲಿದ್ದು, ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಉಳಿದ ಭಾಗಗಳಂತೆ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ Karnataka Weather Today: ರಾಜ್ಯದ ಹಲವು ಭಾಗಗಳಲ್ಲಿ ಒಣ ಹವೆಯ ಮುನ್ಸೂಚನೆ

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿಯ ವೇಗ ಪ್ರತಿ ಗಂಟೆಗೆ 14 ಕಿ.ಮೀ ಇರಲಿದೆ. ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 18°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.