AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಉಡುಪಿ, ಮಂಗಳೂರಿನಲ್ಲಿ ಹೆಚ್ಚಾಯ್ತು ಬಿಸಿಲಿನ ಝಳ! ಕಲ್ಯಾಣ ಕರ್ನಾಟದಲ್ಲಿ ಮಳೆಯಾಗುವ ಸಾಧ್ಯತೆ

Karnataka Weather: ರಾಜ್ಯದಲ್ಲಿ ಇಂದು ಉಷ್ಣ ಅಲೆಯ ಜೊತೆಗೆ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಹೀಟ್​ವೇವ್ ಅಲರ್ಟ್​ ನೀಡಲಾಗಿದ್ದು, ಉತ್ತರ ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಇನ್ನೂ 5 ದಿನ ಇದೇ ರೀತಿಯ ಹವಾಮಾನ ಇರಲಿದ್ದು, ಹೀಟ್ ವೇವ್​ನಿಂದ ತಪ್ಪಿಸಿಕೊಳ್ಳಲು ಯಾವೆಲ್ಲಾ ಮುಂಜಾಗೃತಾ ಕ್ರಮ ಕೈಗೊಳ್ಳಬೇಕೆಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕ ಹವಾಮಾನ ವರದಿ: ಉಡುಪಿ, ಮಂಗಳೂರಿನಲ್ಲಿ ಹೆಚ್ಚಾಯ್ತು ಬಿಸಿಲಿನ ಝಳ! ಕಲ್ಯಾಣ ಕರ್ನಾಟದಲ್ಲಿ ಮಳೆಯಾಗುವ ಸಾಧ್ಯತೆ
ಕರ್ನಾಟಕ ಹವಾಮಾನ
ಭಾವನಾ ಹೆಗಡೆ
|

Updated on: Apr 21, 2026 | 7:31 AM

Share

ಬೆಂಗಳೂರು, ಏಪ್ರಿಲ್ 21: ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ (Karnataka Weather)  ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಹೀಟ್ ವೇವ್ ಜೊತೆಗೆ ಗುಡುಗು ಸಹಿತ ಮಳೆ

ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದೂ ಉಷ್ಣ ಅಲೆ ಇರಲಿದ್ದು, ಹೀಟ್ ವೇವ್ ಅಲರ್ಟ್​ ನೀಡಲಾಗಿದ್ದು, ಜೊತೆಗೆ ಗುಡುಗು ಸಹಿತ ಮಳೆಯೂ ಆಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ವಿಜಯಪುರ, ಕಲಬುರ್ಗಿ, ಯಾದಗಿರಿ, ಬೆಳಗಾವಿ ಮತ್ತು ಧಾರವಾಡ ಗುಡುಗು ಸಹಿತ ಮಳೆಯಾಗಲಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಉಷ್ಣಾಘಾತದಿಂದ ರಕ್ಷಣೆ ಹೇಗೆ?

ಮುಂಬರುವ ದಿನಗಳಲ್ಲಿ ರಾಜ್ಯದೆಲ್ಲೆಡೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅವಶ್ಯಕತೆ ಇಲ್ಲದೆ ಮನೆಯಿಂದ ಹೊರಬರುವುದನ್ನು ತಪ್ಪಿಸುಂತೆ ಹೇಳಲಾಗಿದೆ. ಬೇಸಿಗೆ ರಜೆಯಲ್ಲಿ ಮಕ್ಕಳು ಬಿಸಿಲಲ್ಲಿ ಆಟವಾಡುವುದನ್ನು ಆದಷ್ಟು ನಿಯಂತ್ರಿಸುವಂತೆ ಸೂಚಿಸಲಾಗಿದೆ.

ಉಷ್ಣ ಅಲೆ ಹಾಗೂ ಉಷ್ಣಾಘಾತದಿಂದ (ಹೀಟ್ ಸ್ಟ್ರೋಕ್) ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ. ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ, ಇವು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ.

ಇನ್ನೂ 5 ದಿನ ಇದೇ ವಾತಾವರಣ

ಏಪ್ರಿಲ್ 22 ರವರೆಗೆ ಕರ್ನಾಟಕದ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಅಂತೆಯೇ ದಕ್ಷಿಣ ಒಳನಾಡಿನಲ್ಲಿಯೂ ಗುಡುಗು ಸಹಿತ ಮಳೆಯೊಂದಿಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನಗಳವರೆಗೆ ಕರಾವಳಿ ಪ್ರದೇಶಗಳಲ್ಲಿ ಉಷ್ಣ ಅಲೆ ಇರಲಿದ್ದು, ಮುನ್ನೆಚ್ಚರಿಕಾ ಕ್ರಮವಹಿಸುವಂತೆ ಇಲಾಖೆ ತಿಳಿಸಿದೆ. ಜೊತೆಗೆ ಏಪ್ರಿಲ್ 21ರ ವರೆಗೆ ಉತ್ತರ ಒಳನಾಡಿನಲ್ಲಿ ಆಲಿಕಲ್ಲು ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
114 ಎಸೆತಗಳ ನಂತರ ಮೊದಲ ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ
114 ಎಸೆತಗಳ ನಂತರ ಮೊದಲ ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ
ತಿಲಕ್ ವರ್ಮಾ ಶತಕ ಬಾರಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಹಾರ್ದಿಕ್
ತಿಲಕ್ ವರ್ಮಾ ಶತಕ ಬಾರಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಹಾರ್ದಿಕ್
ಪವರ್‌ಪ್ಲೇನಲ್ಲೇ ಮುಂಬೈ ಪವರ್ ಕಸಿದ ಕಗಿಸೋ ರಬಾಡ
ಪವರ್‌ಪ್ಲೇನಲ್ಲೇ ಮುಂಬೈ ಪವರ್ ಕಸಿದ ಕಗಿಸೋ ರಬಾಡ
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!