
ಬೆಂಗಳೂರು, ಜೂನ್ 13: ನಗರದಲ್ಲಿ ಇಂದು ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಮಧ್ಯಾಹ್ನದ ಬಳಿಕ ಹಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗಿದೆ. ಅಂತೆಯೇ ಮುಂದಿನ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯ (Weather) ಅಬ್ಬರ ಜೋರಾಗಿರಲಿದ್ದು, ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಭಾನುವಾರ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮುಂಗಾರು ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. #KSNDMC #ಎಚ್ಚರಿಕೆವಹಿಸಿ
Next 5 days #SouthwestMonsoon #Rainfall #forecast maps for #Karnataka state with district-wise warnings.
Source: @Indiametdept @KarnatakaVarthe #KarnataKaRains pic.twitter.com/qLCxtcX2Qi— Karnataka State Natural Disaster Monitoring Centre (@KarnatakaSNDMC) June 13, 2026
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು ಮತ್ತು ಗಾಳಿ (ಗಂಟೆಗೆ 30-40 ಕಿ.ಮೀ ವೇಗ) ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದಂತೆ ಬಾಗಲಕೋಟೆ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಹಗುರ ಮಳೆಯಾಗಬಹುದು.
ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬೀಸುವ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಾರ್ವಜನಿಕರು ಮತ್ತು ರೈತರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:31 pm, Sat, 13 June 26