AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಬೆಂಗಳೂರು, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಆರೆಂಜ್ ಅಲರ್ಟ್ ಘೋಷಣೆ!

Monsoon 2026: ಕರ್ನಾಟಕದ ಬಾಗಲಕೋಟೆ, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡಗು ಹಾಗೂ ಮೈಸೂರಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಹವಾಮಾನ ಇಲಾಖೆ ಸೂಚಿಸಿದೆ.

Karnataka Weather Forecast: ಬೆಂಗಳೂರು, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಆರೆಂಜ್ ಅಲರ್ಟ್ ಘೋಷಣೆ!
ಬೆಂಗಳೂರು, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ
ಭಾವನಾ ಹೆಗಡೆ
|

Updated on: May 27, 2026 | 7:31 AM

Share

ಬೆಂಗಳೂರು, ಮೇ 27: ರಾಜ್ಯದಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ  (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.

ಮುಖ್ಯಾಂಶಗಳು

  • ಬಾಗಲಕೋಟೆ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ.
  • ಹಾಸನ, ಕೊಡಗು, ಮೈಸೂರು ಭಾಗಗಳಲ್ಲಿ ಮಳೆ ಹೆಚ್ಚಳ, ಯೆಲ್ಲೋ ಅಲರ್ಟ್ ಮುನ್ನೆಚ್ಚರಿಕೆ.
  • ಬೆಂಗಳೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ.

ಉತ್ತರ ಒಳನಾಡಿಗೆ ಆರೆಂಜ್ ಅಲರ್ಟ್

ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದರೊಂದಿಗೆ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ.

ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು ಮತ್ತು ಮೈಸೂರು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಮುನ್ನೆಚ್ಚರಿಕೆ ರೂಪದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಚಿಕ್ಕಮಗಳೂರು, ದಾವಣಗೆರೆ, ಮಂಡ್ಯ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 30 ರಿಂದ 40 ಕಿಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಬಹುದು.

ಇದೇ ವೇಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ಬಳ್ಳಾರಿ, ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಗಳ ಹಲವು ಭಾಗಗಳಲ್ಲಿ 40-50 ಕಿಮೀ ವೇಗದ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಸಿಲಿಕಾನ್ ಸಿಟಿಯಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆ ಆರ್ಭಟಿಸುವ ಸಾಧ್ಯತೆಯಿದೆ.

ಕರಾವಳಿಯಲ್ಲೂ ತುಂತುರು ಮಳೆ

ಕರಾವಳಿ ಕರ್ನಾಟಕದ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಮುನ್ಸೂಚನೆಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಳೆ ಹಾಗೂ ಬಿರುಗಾಳಿ ಬೀಸುವ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ಪ್ರಮುಖವಾಗಿ ಹಳೆಯ ಕಟ್ಟಡಗಳು ಹಾಗೂ ಮರಗಳ ಕೆಳಗೆ ನಿಲ್ಲದಂತೆ ಮತ್ತು ವಿದ್ಯುತ್ ಕಂಬಗಳಿಂದ ದೂರವಿರಲು ಹವಾಮಾನ ಇಲಾಖೆ ಹಾಗೂ ವಿಪತ್ತು ನಿರ್ವಹಣಾ ಮಂಡಳಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಶತಕ ವಂಚಿತರಾದರೂ ವಿಶ್ವ ದಾಖಲೆ ಮುರಿದ ರಜತ್ ಪಾಟಿದರ್
ಶತಕ ವಂಚಿತರಾದರೂ ವಿಶ್ವ ದಾಖಲೆ ಮುರಿದ ರಜತ್ ಪಾಟಿದರ್
ಏಳು ಮಗುವೇ; ಸತ್ತ ಆನೆಮರಿಯನ್ನು ಸೊಂಡಿಲಿಂದ ಎಬ್ಬಿಸಲು ಪ್ರಯತ್ನಿಸಿದ ತಾಯಾನೆ
ಏಳು ಮಗುವೇ; ಸತ್ತ ಆನೆಮರಿಯನ್ನು ಸೊಂಡಿಲಿಂದ ಎಬ್ಬಿಸಲು ಪ್ರಯತ್ನಿಸಿದ ತಾಯಾನೆ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ