AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಹವಾಮಾನ ವರದಿ: ಹಲವೆಡೆ ಮೋಡಕವಿದ ವಾತಾವರಣ, ಸಾಧಾರಣ ಮಳೆ ಸಾಧ್ಯತೆ

ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ರಾಜ್ಯದಲ್ಲಿ ಮುಂಗಾರು ಮಳೆ ಕೊಂಚ ತಗ್ಗಿದ್ದರೂ, ಪ್ರಮುಖ ಜಿಲ್ಲೆಗಳು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಲಘುವಿನಿಂದ ಸಾಧಾರಣ ಮಳೆಯ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಗಾಳಿ ಬೀಸಲಿದೆ. ಉತ್ತರ ಕರ್ನಾಟಕ ಒಣಹವೆ ಹೊಂದಿದ್ದು, ಮಳೆಯೊಂದಿಗೆ ಗುಡುಗು-ಮಿಂಚು ಸಾಧ್ಯತೆ ಇದೆ. ರೈತರು ಮುನ್ನೆಚ್ಚರಿಕೆ ವಹಿಸಬೇಕು. ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.

ರಾಜ್ಯದ ಹವಾಮಾನ ವರದಿ: ಹಲವೆಡೆ ಮೋಡಕವಿದ ವಾತಾವರಣ, ಸಾಧಾರಣ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರ Image Credit source: Google
ಅಕ್ಷಯ್​ ಪಲ್ಲಮಜಲು​​
|

Updated on: Sep 15, 2026 | 6:16 AM

Share

ಬೆಂಗಳೂರು, ಸೆ.15: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಕೊಂಚ ತಗ್ಗಿದ್ದರೂ, ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ ರಾಜ್ಯದ ಪ್ರಮುಖ ಜಿಲ್ಲೆಗಳು ಹಾಗೂ ಕರಾವಳಿ ಭಾಗದಲ್ಲಿ ಲಘುವಿನಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ.

ರಾವಳಿ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ತೀರ ಪ್ರದೇಶಗಳಲ್ಲಿ ತುಂತುರು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಗಿರಿಪ್ರದೇಶಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆಯಿದ್ದು, ತಂಪು ಹವಾಮಾನ ಮುಂದುವರಿಯಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನವು 28°-30° ಸೆಲ್ಸಿಯಸ್ ತಲುಪುವ ಸಾಧ್ಯತೆಯಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಕೆಲ ಪ್ರದೇಶಗಳಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: ಗಣೇಶ ಹಬ್ಬದಂದೇ ಗ್ರ್ಯಾಂಡ್‌ ಎಂಟ್ರಿ ಕೊಟ್ಟ ವರುಣ: ಕೋಲಾರದಲ್ಲಿ ಧಾರಾಕಾರ ಮಳೆ

ಉತ್ತರ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಒಣ ಹವಾಮಾನ ಹಾಗೂ ಬಿಸಿಲಿನ ವಾತಾವರಣ ಇರಲಿದ್ದು, ಕೆಲವೆಡೆ ಆಂಶಿಕವಾಗಿ ಮೋಡಕವಿದ ವಾತಾವರಣವಿರಲಿದೆ. ಮಳೆಯಾಗುವ ವೇಳೆ ಕೆಲವೆಡೆ ಬಿರುಗಾಳಿ ಸಹಿತ ಗುಡುಗು-ಮಿಂಚು ಕಾಣಿಸಿಕೊಳ್ಳುವ ಸಾಧ್ಯತೆಯಿರುವುದರಿಂದ ಹೊಲ-ಗದ್ದೆಗಳಲ್ಲಿ ಕೆಲಸ ಮಾಡುವ ರೈತರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ತಿಳಿಸಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯಲು ಯಾವುದೇ ಪ್ರಮುಖ ಎಚ್ಚರಿಕೆ/ನಿಷೇಧವನ್ನು ವಿಧಿಸಲಾಗಿಲ್ಲ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ