Karnataka Weather Forecast: ಮುಂದಿನ 4 ದಿನ ರಾಜ್ಯದಲ್ಲಿ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್​!

Monsoon 2026: ಕರ್ನಾಟಕದಲ್ಲಿ ಮುಂಗಾರು ತೀವ್ರಗೊಂಡಿದ್ದು, ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಿಗೆ ಜುಲೈ 5 ರಿಂದ 7 ರವರೆಗೆ ಭಾರಿ ಮಳೆಯ 'ರೆಡ್ ಅಲರ್ಟ್' ಘೋಷಿಸಿದೆ. ಬೆಂಗಳೂರು ಸೇರಿದಂತೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ 'ಯೆಲ್ಲೋ ಅಲರ್ಟ್' ಜಾರಿಯಲ್ಲಿದೆ. ಪ್ರವಾಹ ಹಾಗೂ ಭೂಕುಸಿತದ ಭೀತಿ ಇರುವುದರಿಂದ ಸಾರ್ವಜನಿಕರು ಮತ್ತು ಪ್ರಯಾಣಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಹವಾಮಾನದ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Weather Forecast: ಮುಂದಿನ 4 ದಿನ ರಾಜ್ಯದಲ್ಲಿ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್​!
ಶಿವಮೊಗ್ಗದಲ್ಲಿ ಮಳೆ

Updated on: Jul 03, 2026 | 7:31 AM

ಮುಖ್ಯಾಂಶಗಳು

  • ಕರಾವಳಿ ಜಿಲ್ಲೆಗಳಲ್ಲಿ ಜುಲೈ 5 ರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.
  • ಒಳನಾಡಿನ ಜಿಲ್ಲೆಗಳಿಗೆ ಜುಲೈ ಮೊದಲ ವಾರದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
  • ಪ್ರವಾಹ ಮತ್ತು ಭೂಕುಸಿತದ ಭೀತಿ ಇದ್ದು ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು.

ಬೆಂಗಳೂರು, ಜುಲೈ 03: ರಾಜ್ಯದಲ್ಲಿ ಮುಂಗಾರು ಮಾರುತಗಳು ತೀವ್ರಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹವಾಮಾನದ ತೀವ್ರತೆಯನ್ನು ಆಧರಿಸಿ ಭಾರತೀಯ ಹವಾಮಾನ ಇಲಾಖೆ (weather) ಜಿಲ್ಲಾವಾರು ಯೆಲ್ಲೋ ಮತ್ತು ರೆಡ್ ಅಲರ್ಟ್​ಗಳನ್ನು ಘೋಷಿಸಿದೆ. ಪ್ರವಾಹ ಮತ್ತು ಭೂಕುಸಿತದ ಭೀತಿ ಇರುವುದರಿಂದ ಸಾರ್ವಜನಿಕರ ಸುರಕ್ಷತೆಗಾಗಿ ಈ ಅಲರ್ಟ್‌ಗಳನ್ನು ನೀಡಲಾಗಿದೆ.

ಎಲ್ಲೆಲ್ಲಿ ಯೆಲ್ಲೋ ಅಲರ್ಟ್​?

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ ಮೊದಲ ವಾರದಲ್ಲಿ ಯೆಲ್ಲೋ ಅಲರ್ಟ್​ ನೀಡಲಾಗಿದೆ. ಈ ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ (64.5 mm ನಿಂದ 115.4 mm ವರೆಗೆ) ಸಾಧ್ಯತೆಯಿದೆ. ಸಿಡಿಲು ಮತ್ತು ಗಂಟೆಗೆ 30-40 ಕಿ.ಮೀ ವೇಗದ ಬಲವಾದ ಗಾಳಿ ಬೀಸಬಹುದು. ಸದ್ಯಕ್ಕೆ ತಕ್ಷಣದ ಅಪಾಯವಿಲ್ಲದಿದ್ದರೂ, ಹವಾಮಾನದ ಬದಲಾವಣೆಗಳ ಮೇಲೆ ಕಣ್ಣಿಡಬೇಕು. ಪ್ರಯಾಣದ ಯೋಜನೆಗಳಿದ್ದರೆ ರಸ್ತೆಗಳಲ್ಲಿ ನೀರು ನಿಲ್ಲುವ ಅಥವಾ ಮರಗಳು ಬೀಳುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ಅಗತ್ಯ.

ಎಲ್ಲೆಲ್ಲಿ ರೆಡ್ ಅಲರ್ಟ್​?

ಕರಾವಳಿಯಲ್ಲಿ ಜುಲೈ 3 ಮತ್ತು 4 ರಂದು ಕಿತ್ತಳೆ ಎಚ್ಚರಿಕೆ ಆರೆಂಜ್ ಅಲರ್ಟ್​ ಇರಲಿದ್ದು, ಬೆಂಗಳೂರು ಸೇರಿದಂತೆ ಒಳನಾಡಿನಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆ ಮುಂದುವರಿಯಲಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡಕ್ಕೆ ಜುಲೈ 5 ರಿಂದ 7 ರ ಅವಧಿಯಲ್ಲಿ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ದಿನವೊಂದಕ್ಕೆ 204.5 mm ಗಿಂತಲೂ ಅಧಿಕ ಪ್ರಮಾಣದ ಅತ್ಯಂತ ತೀವ್ರವಾದ ಮಳೆಯಾಗುವ ಸಾಧ್ಯತೆಯಿದೆ. ನದಿಗಳ ನೀರಿನ ಮಟ್ಟ ಹೆಚ್ಚಾಗಿ ಪ್ರವಾಹ ಉಂಟಾಗುವ, ತಗ್ಗು ಪ್ರದೇಶಗಳು ಜಲಾವೃತಗೊಳ್ಳುವ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ (Landslides) ಸಂಭವಿಸುವ ಹೆಚ್ಚಿನ ಅಪಾಯವಿರುತ್ತದೆ. ಸಾರ್ವಜನಿಕರು ಅನಗತ್ಯ ಪ್ರಯಾಣವನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಮತ್ತು ಸುರಕ್ಷಿತ ಸ್ಥಳಗಳಲ್ಲಿರಬೇಕು.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us